ಗೋವಾ ಜನರು ಒಳ್ಳೆಯವರು, ಆದರೆ ಇಲ್ಲಿನ ರಾಜಕಾರಣಿಗಳು ಕೆಟ್ಟವರು: ಅರವಿಂದ್ ಕೇಜ್ರಿವಾಲ್
Team Udayavani, Dec 22, 2021, 11:28 AM IST
ಪಣಜಿ: ಮೂರನೇಯ ದರ್ಜೆಯ ರಾಜಕಾರಣಿಗಳನ್ನು ಹೊಂದಿರುವ ಗೋವಾ ಮೊದಲ ದರ್ಜೆಯ ರಾಜ್ಯವಾಗಿದೆ. ಇಲ್ಲಿನ ಜನ ಒಳ್ಳೆಯವರು, ಆದರೆ ಇಲ್ಲಿನ ರಾಜಕಾರಣಿಗಳು ಕೆಟ್ಟವರು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನುಡಿದರು.
ಪಣಜಿಯಲ್ಲಿ ಮಂಗಳವಾರ ಸಂಜೆ ಆಯೋಜಿಸಿದ್ದ ಆಮ್ ಆದ್ಮಿ ಪಕ್ಷದ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿ, ಕಳೆದ ಐದು ವರ್ಷಗಳ ಹಿಂದೆ ರಾಜ್ಯದ ಜನತೆ ಕಾಂಗ್ರೆಸ್ನ 17 ಶಾಸಕರನ್ನು ಆಯ್ಕೆ ಮಾಡಿದ್ದರು. ಈ ಪೈಕಿ 15 ಶಾಸಕರು ಈಗಾಗಲೇ ಮಾರಾಟವಾಗಿದ್ದಾರೆ. ಇನ್ನು ಇಬ್ಬರು ಶಾಸಕರು ಮಾತ್ರ ಉಳಿದುಕೊಂಡಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು.
ಈ ಹಿಂದೆ ಗೋವಾದಲ್ಲಿ ಶಾಸಕರ ಕುದುರೆ ವ್ಯಾಪಾರ ನಡೆಯುತ್ತಿತ್ತು. ಆದರೆ ಈಗ ಅಭ್ಯರ್ಥಿಗಳನ್ನು ಮಾರಾಟ ಮಾಡಲಾಗುತ್ತಿದೆ. ಅಭ್ಯರ್ಥಿಗಳು ಕೋಟಿಗಟ್ಟಲೆ ಹಣಕ್ಕೆ ಮಾರಾಟವಾಗುತ್ತಿರುವುದನ್ನು ನಾವು ಕೇಳಿದ್ದೇವೆ. ಆಮ್ ಆದ್ಮಿ ಪಕ್ಷವು ಗೋವಾದಲ್ಲಿ ಮೊದಲ ” ಭ್ರಷ್ಟಾಚಾರ ಮುಕ್ತ” ಸರ್ಕಾರ ರಚಿಸಲಿದೆ ಎಂದರು.
ಇದನ್ನೂ ಓದಿ:ಅಗತ್ಯವಿದ್ದರೆ ನೈಟ್ ಕರ್ಫ್ಯೂ ಜಾರಿ ಮಾಡಿ : ಕೇಂದ್ರ ಸೂಚನೆ
ಬಿಜೆಪಿ ಅಥವಾ ಕಾಂಗ್ರೆಸ್ ಗೋವಾದಲ್ಲಿ ಗಣಿಗಾರಿಕೆಯನ್ನು ಆರಂಭಿಸಲು ಬಯಸುವುದಿಲ್ಲ. ಏಕೆಂದರೆ ಅವರ ಉದ್ದೇಶಗಳು ಸರಿಯಾಗಿಲ್ಲ. ರಾಜ್ಯದಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದ ಆರು ತಿಂಗಳೊಳಗೆ ಗಣಿಗಾರಿಕೆ ಪುನರಾರಂಭಿಸಲಿದೆ. ಗಣಿಗಾರಿಕೆ ಪುನರಾರಂಭಗೊಳ್ಳುವವರೆಗೆ ಗಣಿ ಅವಲಂಭಿತರಿಗೆ ಮಾಸಿಕ 5,000 ರೂ ಭತ್ತೆ ನೀಡಲಿದೆ ಎಂದು ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು