Goa: ರಾಜ್ಯವು ದೇಶದ ಅಪಘಾತ ರಾಜಧಾನಿಯಾಗುತ್ತಿದೆ- ಆರೋಗ್ಯ ಸಚಿವ ವಿಶ್ವಜಿತ್ ರಾಣೆ

ಅಮೂಲ್ಯ ಜೀವಗಳನ್ನು ಉಳಿಸಲು ಗೋವಾಕ್ಕೆ ಬೇಕಿದೆ ಕನಿಷ್ಠ 25 ಹೊಸ ಆಂಬ್ಯುಲೆನ್ಸ್‌

Team Udayavani, Dec 14, 2023, 5:11 PM IST

vishwajith Rana

ಪಣಜಿ: ಗೋವಾ ರಾಜ್ಯವು ದೇಶದ ಅಪಘಾತ ರಾಜಧಾನಿಯಾಗುತ್ತಿದೆ ರಾಜ್ಯದಲ್ಲಿ ಹೆಚ್ಚುತ್ತಿರುವ ಅಪಘಾತಗಳ ಪ್ರಮಾಣ ಕಡಿಮೆಯಾಗಬೇಕು. ರಸ್ತೆ ಅಪಘಾತಗಳ ಆತಂಕಕಾರಿ ಹೆಚ್ಚಳವು ಗೋವಾ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಮೇಲೆ ಹೆಚ್ಚಿನ ಒತ್ತಡವನ್ನು ಉಂಟುಮಾಡುತ್ತಿದೆ. ಅಮೂಲ್ಯ ಜೀವಗಳನ್ನು ಉಳಿಸಲು ರಾಜ್ಯಕ್ಕೆ ಕನಿಷ್ಠ 25 ಹೊಸ ಆಂಬ್ಯುಲೆನ್ಸ್‌ಗಳ ಅಗತ್ಯವಿದೆ ಎಂದು ಆರೋಗ್ಯ ಸಚಿವ ವಿಶ್ವಜಿತ್ ರಾಣೆ ಹೇಳಿದರು.

ಪಣಜಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು- ರಾಜ್ಯದಲ್ಲಿ ಸಂಭವಿಸುತ್ತಿರುವ ಅಪಘಾತಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಆರೋಗ್ಯ ಸಚಿವ ವಿಶ್ವಜಿತ್ ರಾಣೆ, ಗೋವಾ ರಾಜ್ಯವು ದೇಶದ ಅಪಘಾತಗಳ ರಾಜಧಾನಿಯಾಗುತ್ತಿದೆ. ಅನೇಕ ಯುವಕರು ಅಪಘಾತಗಳಲ್ಲಿ ಸಾವನ್ನಪ್ಪುತ್ತಿದ್ದಾರೆ ಮತ್ತು ಪೋಷಕರು ತಮ್ಮ ಮಕ್ಕಳ ಬಗ್ಗೆ ಎಚ್ಚರದಿಂದಿರಬೇಕು, ಮಕ್ಕಳಿಗೆ ಎಚ್ಚರಿಕೆಯಿಂದ ವಾಹನ ಚಲಾಯಿಸಲು ಸಲಹೆ ನೀಡಬೇಕು ಎಂದು ಆರೋಗ್ಯ ಸಚಿವ ರಾಣೆ ಹೇಳಿದರು.

ಈ ಬಗ್ಗೆ ಸಾಮಾಜಿಕ ಜಾಗೃತಿ ಮೂಡಬೇಕು ಮತ್ತು ಪೋಷಕರೂ ಜವಾಬ್ದಾರಿಯಿಂದ ವರ್ತಿಸಬೇಕು. ಅಪಘಾತ ಘಟನೆಗಳ ಆತಂಕಕಾರಿ ಏರಿಕೆಯಿಂದಾಗಿ ಬಾಂಬೋಲಿಯಲ್ಲಿರುವ ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ರೋಗಿಗಳ ಒತ್ತಡದಲ್ಲಿದೆ. ಆದರೆ ನಾವು ಅದನ್ನು ಎದುರಿಸಬೇಕಾಗಿದೆ. ಪ್ರಮಾಣದ ದೃಷ್ಟಿಯಿಂದ ಗೋವಾ ದೇಶದ ಅಪಘಾತ ರಾಜಧಾನಿಯಾಗಿದೆ. ಈ ದರವನ್ನು ಕಡಿಮೆ ಮಾಡಿ ರಸ್ತೆ ಅಪಘಾತಗಳ ಬಗ್ಗೆ ಜನಜಾಗೃತಿ ಮೂಡಿಸುವುದು ಸರಕಾರದ ಕರ್ತವ್ಯ ಮಾತ್ರವಲ್ಲ ಸಮಾಜವೂ ಇದರಲ್ಲಿ ಪಾಲ್ಗೊಳ್ಳಬೇಕು ಎಂದು ಸಚಿವ ರಾಣೆ ಹೇಳಿದರು.

ರಾಜ್ಯಕ್ಕೆ ಕನಿಷ್ಠ 25 ಹೊಸ ಆಂಬ್ಯುಲೆನ್ಸ್‍ಗಳ ಅಗತ್ಯವಿದೆ. ಆಂಬ್ಯುಲೆನ್ಸ್‌ಗಳು ಹೆಚ್ಚಿನ ಒತ್ತಡದಲ್ಲಿವೆ. ಅಪಘಾತವಾದ ಏಳು ನಿಮಿಷಗಳಲ್ಲಿ ತಲುಪಬೇಕಾಗಿರುವುದರಿಂದ ಕೆಲವೊಮ್ಮೆ ಸಮಸ್ಯೆಗಳು ಎದುರಾಗುತ್ತವೆ. ಇತರ ರಾಜ್ಯಗಳಿಗೆ ಹೋಲಿಸಿದರೆ, ಗೋವಾದಲ್ಲಿ ಆಂಬ್ಯುಲೆನ್ಸ್‍ಗಳು ಅಪಘಾತದ ಸ್ಥಳವನ್ನು ತಲುಪಲು ಕಡಿಮೆ ಸಮಯ ತೆಗೆದುಕೊಳ್ಳುತ್ತದೆ, ಆದರೆ ಸುಧಾರಣೆಯ ಅವಶ್ಯಕತೆಯಿದೆ. ಸುಧಾರಿತ ಜೀವನ ಬೆಂಬಲ ವ್ಯವಸ್ಥೆಯನ್ನು ಪರಿಚಯಿಸಿದ ಏಕೈಕ ರಾಜ್ಯ ಗೋವಾ. ಆಂಬ್ಯುಲೆನ್ಸ್ ಅಗತ್ಯವಿರುವ ಪ್ರದೇಶಗಳ ನಕ್ಷೆಗಾಗಿ ನಾವು ಸಮಿತಿಯನ್ನು ರಚಿಸಿದ್ದೇವೆ. ಖಾಸಗಿ ವ್ಯಾನ್‍ಗಳು ಜನರ ಸೇವೆಯನ್ನು ಮುಂದುವರೆಸುತ್ತವೆ ಮತ್ತು ಅಗತ್ಯವಿದ್ದರೆ ಖಾಸಗಿ ವ್ಯಾನ್‍ಗಳನ್ನು ಸೇವೆಗೆ ತರಲಾಗುವುದು ಎಂದು ರಾಣೆ ಹೇಳಿದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.