ದೇವರು ದೊಡ್ಡವನು…ಸಾಕಾರಗೊಂಡ ಎಮ್ಮೆಕರೆ ಅಂತಾರಾಷ್ಟ್ರೀಯ ಈಜುಕೊಳ
ಆಟದ ಮೈದಾನವೂ ಇರುವುದರಿಂದ ಆರಂಭದಲ್ಲಿ ಸ್ಥಳೀಯರಿಂದ ವಿರೋಧವೂ ವ್ಯಕ್ತವಾಗಿತ್ತು.
Team Udayavani, Mar 9, 2023, 11:05 AM IST
ಮಂಗಳೂರು: ಎಮ್ಮೆಕರೆಯಲ್ಲಿ ಅಂತಾರಾಷ್ಟ್ರೀಯ ಈಜುಕೊಳ ನಿರ್ಮಾಣ ಸಂಬಂಧ 2014 ಮತ್ತು ಅದಕ್ಕೂ ಪೂರ್ವ ದಲ್ಲಿ ಚಟುವಟಿಕೆ ಆರಂಭವಾಗಿತ್ತು. ಕೊನೆಗೂ ಅಂತಿಮ ಹಂತಕ್ಕೆ ಬಂದಿದ್ದು, ಶೀಘ್ರ ಉದ್ಘಾಟನೆಯಾಗುವ ಸಂಭವವಿದೆ.
ಇದುವರೆಗೆ ಈಜು ಸ್ಪರ್ಧೆಗೆ ತರಬೇತು ಪಡೆಯುವ ಕ್ರೀಡಾಪಟುಗಳು ಮಹಾನಗರ ಪಾಲಿಕೆಯ ಲೇಡಿಹಿಲ್ ಬಳಿಯ ಈಜುಕೊಳವನ್ನೇ ಆಶ್ರಯಿಸಬೇಕಿತ್ತು. ಈ ಕೊಳದಲ್ಲಿ ತರಬೇತಿ ಪಡೆಯುವುದು ಕಷ್ಟ ಎನ್ನುವುದನ್ನು ಅರಿತು, ಆಗ ಕ್ರೀಡಾ ಸಚಿವರಾಗಿದ್ದ ಅಭಯಚಂದ್ರ ಅವರು ಎಮ್ಮೆಕೆರೆಯಲ್ಲಿ ಈಜು ಕೊಳ ನಿರ್ಮಾಣಕ್ಕೆ ಮುನ್ನುಡಿ ಬರೆದಿದ್ದರು. ಆದರೆ ಅಲ್ಲಿ ಆಟದ ಮೈದಾನವೂ ಇರುವುದರಿಂದ ಆರಂಭದಲ್ಲಿ ಸ್ಥಳೀಯರಿಂದ ವಿರೋಧವೂ ವ್ಯಕ್ತವಾಗಿತ್ತು.
ಅದೂ ಇದೂ ಎನ್ನುತ್ತಾ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿತ್ತು. ಈಗ ಸ್ಮಾರ್ಟ್ ಸಿಟಿ ಯೋಜನೆಯಡಿ ಕಾಮಗಾರಿಯನ್ನು ಕೈಗೆತ್ತಿಕೊಂಡು, 24.94 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಈಜುಕೊಳ ನಿರ್ಮಿಸಲಾಗಿದೆ. ಮಾರ್ಚ್ ಅಂತ್ಯದೊಳಗೆ ಕಾಮಗಾರಿ ಮುಗಿಸುವ ಉದ್ದೇಶ ಸ್ಮಾರ್ಟ್ ಸಿಟಿ ಲಿಮಿಟೆಡ್ನದ್ದು. ಅದು ಸಾಧ್ಯವಾದರೆ ಹಳೆಯ ಯೋಜನೆ ಯೊಂದು ಸಾರ್ವಜನಿಕರ ಬಳಕೆಗೆ ಲಭಿಸಿದಂತಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್