ಗೋಕರ್ಣ: IRB ಕಾಮಗಾರಿ ಯಡವಟ್ಟು- ಅಪಾಯದಲ್ಲಿ ವಾಹನ ಸವಾರರು
ಕಲ್ಲು ಬೀಳುವ ಸಾಧ್ಯತೆ ಅಧಿಕವಾಗಿರುವುದರಿಂದ ಇದು ವಾಹನದ ಮೇಲೆ ಬಿದ್ದರೆ ಅನಾಹುತ ಕಟ್ಟಿಟ್ಟ ಬುತ್ತಿ
Team Udayavani, Apr 13, 2023, 11:55 AM IST
ಗೋಕರ್ಣ: ಇಲ್ಲಿಯ ಸಮೀಪದ ಬಳಲೆ-ಮಾದನಗೇರಿ ಬಳಿ ಹಾದು ಹೋಗಿರುವ ಚತುಷ್ಪಥ ಹೆದ್ದಾರಿ ಹಲವು ಅನಾಹುತಗಳಿಗೆ ರಹದಾರಿಯಾಗಿದ್ದು, ವಾಹನ ಸವಾರರು, ಪ್ರಯಾಣಿಕರು ಭಯಭೀತಿಯಿಂದಲೇ ಸಂಚರಿಸಬೇಕಾಗಿದೆ. ನಾಲ್ಕು ರಸ್ತೆ ಕೂಡುವ ಮಾದನಗೇರಿಯಲ್ಲಿ ಮೇಲ್ಸೇತುವೆ ನಿರ್ಮಿಸದೆ ಇರುವುದು ಇನ್ನಷ್ಟು ಆತಂಕ ಹೆಚ್ಚಿಸಿದೆ.
ಶಿರೂರಿನಲ್ಲಿ ಬಂಡೆಗಳನ್ನು ಕೊರೆದು ರಸ್ತೆ ಮಾಡಲಾಗಿದೆ. ಆದರೆ ಇದು ಅವೈಜ್ಞಾನಿಕವಾಗಿ ಕೊರೆಯಲಾಗಿದ್ದು, ಬಂಡೆಯಂಚಿನಿಂದಲೇ ರಸ್ತೆ ನಿರ್ಮಿಸಿರುವುದರಿಂದ ಯಾವುದೇ ಕ್ಷಣದಲ್ಲಿ ಬಂಡೆ ಕುಸಿಯುವ ಅಥವಾ ಸೀಳುಬಿಟ್ಟ ಸಣ್ಣ ಪುಟ್ಟ ಕಲ್ಲುಗಳು ಬೀಳುವ ಸಾಧ್ಯತೆಯಿದೆ. ಇನ್ನು ಮಳೆಗಾಲದಲ್ಲಿ ನೀರಿನ ಒತ್ತಡಕ್ಕೆ ಒಡೆದುನಿಂತ ಕಲ್ಲು ಬೀಳುವ ಸಾಧ್ಯತೆ ಅಧಿಕವಾಗಿರುವುದರಿಂದ ಇದು ವಾಹನದ ಮೇಲೆ ಬಿದ್ದರೆ ಅನಾಹುತ ಕಟ್ಟಿಟ್ಟ ಬುತ್ತಿ.
ಸ್ಥಳೀಯರು ಕೂಡ ಈ ಬಗ್ಗೆ ಐಆರ್ಬಿ ಕಂಪನಿಯವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಕೋಡ್ಸಣಿ ಸಮೀಪದ ಗಂಗಾವಳಿ ಸೇತುವೆ ಬಳಿ ತೀರಾ ಅಪಾಯಕಾರಿ ತಿರುವು ಇರುವುದರಿಂದ ಇಲ್ಲಿ ಆಗಾಗ ವಾಹನಗಳು ಪಲ್ಟಿಯಾಗುತ್ತಿರುವುದು ಕಂಡುಬರುತ್ತಿದೆ.ಪಟ್ಟಣದ ಹುಲಿದೇವರ ವಾಡದಲ್ಲಿ ನಾಲ್ಕು ರಸ್ತೆ ಕೂಡು ರಸ್ತೆಯಲ್ಲಿ ಇನ್ನುವರೆಗೂ ಚತುಷ್ಪಥ ರಸ್ತೆ ನಿರ್ಮಿಸದೆ ಏಕಮುಖವಾಗಿವುದರಿಂದ ವಾಹನ ಸವಾರರು ವೇಗವಾಗಿ ಬಂದು ನಂತರ ಎದುರಿಗೆ ಬರುವ ವಾಹನವನ್ನು ನೋಡಿ ಗಾಬರಿಗೊಂಡು ಅಪಘಾತಗಳು ಸಂಭವಿಸುತ್ತದೆ.
ಇನ್ನು ಅವರ್ಸಾದಲ್ಲಿ ಹಾಗೂ ಮಾದನಗೇರಿಯಲ್ಲಿ ಮೇಲ್ಸೇತುವೆ ನಿರ್ಮಿಸುವಂತೆ ಅನೇಕ ಬಾರಿ ಪ್ರತಿಭಟನೆ ನಡೆಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗೆ ಸಾಕಷ್ಟು ಕಡೆಗಳಲ್ಲಿ ಇನ್ನೂ ರಸ್ತೆ ಪೂರ್ಣ ಪ್ರಮಾಣದಲ್ಲಿ ಮುಗಿದಿಲ್ಲ. ಅದು ಕೂಡ ತೀರಾ ಅಪಾಯಕಾರಿಯಾಗಿರುವುದರಿಂದ ಆಗಾಗ ಸಣ್ಣಪುಟ್ಟ ಅಪಘಾತಗಳು ಸಾಮಾನ್ಯ ಎಂಬಂತಾಗಿದೆ. ಇನ್ನಾದರೂ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಇಂತಹ ಹತ್ತಾರು ಸಮಸ್ಯೆಗಳನ್ನು ಸರಿಪಡಿಸಬೇಕಾಗಿದೆ.
ಇಲ್ಲದಿದ್ದರೆ ಅಪಘಾತಗಳ ಸಂಖ್ಯೆ ಹೆಚ್ಚುತ್ತಲೇ ಹೋಗಲಿದೆ.
*ನಾಗರಾಜ ಮಂಜಗುಣಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ
ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’
PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ