ಅನ್ನ ಕೊಡುವ ಹೊನ್ನಿನಂತಾ ಮಣ್ಣಿಗೆ ಕನ್ನ; ಇದು ಮೈನಿಂಗ್ ಅಲ್ಲ, ಮಣ್ಣು ಮಾಫಿಯಾ…

ಇಟ್ಟಿಗೆ ಸುಡುವ ಕೆಲಸ ಮಾಡುತ್ತಿರುವುದು ಮಾತ್ರ ಕೃಷಿಗೆ ಮಾರಕವಾಗುತ್ತಿದೆ ಎನ್ನುತ್ತಿದ್ದಾರೆ ಕೃಷಿ ತಜ್ಞರು.

Team Udayavani, Feb 15, 2022, 5:48 PM IST

ಅನ್ನ ಕೊಡುವ ಹೊನ್ನಿನಂತಾ ಮಣ್ಣಿಗೆ ಕನ್ನ; ರೈತರಿಂದ ಸ್ವಯಂಕೃತ ಅಪರಾಧ

ಧಾರವಾಡ: ಕೆದರಿ ಗುಡ್ಡ ಹಾಕಿರುವ ಕೆನೆ ಪದರದಂತಹ ಫಲವತ್ತಾದ ಮಣ್ಣು, ಗೋಮಾಳ, ಸರ್ಕಾರಿ ಜಾಗದಲ್ಲಿನ ಮಣ್ಣಿಗೂ ಬಿತ್ತು ರೌಡಿ ಶೀಟರ್‌ಗಳ ಕಣ್ಣು. ಅನ್ನ ಬೆಳೆಯವ ಮಣ್ಣಿಗೆ ಕನ್ನ ಹಾಕುತ್ತಿರುವ ಇಟ್ಟಿಗೆ ಭಟ್ಟಿ ಮಾಲೀಕರು. ಅನ್ನ ಬೆಳೆಯುವ ಹೊನ್ನಿನಂತಾ ಮಣ್ಣಿಗೆ ಬಿತ್ತು ಕಣ್ಣು.

ಹೌದು. ರೀಯಲ್‌ ಎಸ್ಟೇಟ್‌ ಫಲವತ್ತಾದ ಭೂಮಿ ನುಂಗಿ ಹಾಕಿದ್ದು ಹಳೆಯ ಸುದ್ದಿ. ಅಭಿವೃದ್ಧಿ ಯೋಜನೆಗಳಾದ ವಿಮಾನ ನಿಲ್ದಾಣ, ಅಷ್ಟಪಥ ರಸ್ತೆಗಳು, ಸರ್ಕಾರಿ ಕಚೇರಿಗಳು, ಕ್ರೀಡಾಂಗಣಗಳ ನಿರ್ಮಾಣಕ್ಕೆ ಮಾತ್ರ ಫಲವತ್ತಾದ ಭೂಮಿ ಬಲಿಯಾಗುತ್ತದೆ ಎನ್ನುವ ಕೂಗು ಈವರೆಗೂ ಕೇಳಿ ಬಂದಿತ್ತು. ಆದರೆ ಇದೀಗ ದೇಶಿ ಭತ್ತದ ಅನ್ನ ಅದರಲ್ಲೂ ವರ್ಷಕ್ಕೆ ಕನಿಷ್ಠ ಎರಡು ಉತ್ತಮ ಬೆಳೆ ಬೆಳೆಯುವ ಧಾರವಾಡ ಜಿಲ್ಲೆಯಲ್ಲಿನ ಅರೆಮಲೆನಾಡು ಪ್ರದೇಶದ ಹಳ್ಳಿಗಳಲ್ಲಿನ ಫಲವತ್ತಾದ ಭೂಮಿಯನ್ನು ಹಾಡಹಗಲೇ ಕೊಳ್ಳೆ ಹೊಡೆಯಲಾಗುತ್ತಿದ್ದು, ಮೈನಿಂಗ್‌ ಮಾಫಿಯಾದಂತೆ ಮಣ್ಣು ಮಾಫಿಯಾ ಕೂಡ ಹೆಡೆ ಎತ್ತಿದೆ.

ರೈತರಿಂದ ಸ್ವಯಂಕೃತ ಅಪರಾಧ : ರಾಸಾಯನಿಕ ಕೃಷಿಯಿಂದ ವರ್ಷದಿಂದ ವರ್ಷಕ್ಕೆ ಭೂಮಿಯಲ್ಲಿನ ಫಲವತ್ತತೆ ಕ್ಷೀಣಿಸುತ್ತಿದ್ದು, ರೈತರು ಉತ್ತಮ ಇಳುವರಿ ಪಡೆಯಲು ಹರಸಾಹಸ ಪಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿಯೇ ಬೆಳೆ ಬೆಳೆಯುವ ಕೆನೆ ಭರಿತ ಮಣ್ಣನ್ನು ಸದ್ದಿಲ್ಲದೇ ಕೊಂಡುಕೊಂಡು ಇಟ್ಟಿಗೆ ಭಟ್ಟಿಗಳಿಗೆ ಹಾಕಿಕೊಳ್ಳುವ ಮಾಫಿಯಾ ತಲೆ ಎತ್ತಿದ್ದು, ಬಡವರು, ಸಾಲದ ಸುಳಿಯಲ್ಲಿ ಸಿಲುಕಿದ ರೈತರು ಮತ್ತು ಶೋಕಿ ಮಾಡುವವರ ಖರ್ಚಿಗೆ ಹಣ ಕೊಡುವ ದಲ್ಲಾಳಿಗಳು ರೈತರ ಹೊಲದಲ್ಲಿನ ಫಲವತ್ತಾದ ಮಣ್ಣನ್ನು ಹೊಲಗಳಿಂದ ಎತ್ತಿ ಗುಡ್ಡೆ ಹಾಕಿಕೊಳ್ಳುತ್ತಿದ್ದಾರೆ.

ಬೆಳೆ ಬೆಳೆಯುವ ಭೂಮಿಯಲ್ಲಿನ ಮೊದಲ 3-4 ಅಡಿ ಮಣ್ಣು ಅತ್ಯಂತ ಶ್ರೇಷ್ಠವಾದದ್ದಾಗಿದ್ದು, ಇದರಿಂದಲೇ ಉತ್ತಮ ಬೆಳೆ ಸಾಧ್ಯ. ಆದರೆ ಇಟ್ಟಿಗೆ ಭೂ ಮಾಫಿಯಾ ಇದೇ ಮಣ್ಣನ್ನು ಕೊಳ್ಳೆ ಹೊಡೆದುಕೊಳ್ಳುತ್ತದೆ.

ಸರ್ಕಾರಿ ಗೋಮಾಳಗಳು ಬರ್ಬಾದ್‌: ಜಿಲ್ಲೆಯಲ್ಲಿ ಇಂದಿಗೂ ಗಾಂವಠಾಣಾ, ಸರ್ಕಾರಿ ಗೋಮಾಳ, ಕೆರೆ ಕುಂಟೆಗಳಲ್ಲಿ ಖರಾಬು ಜಮೀನು, ಹಳ್ಳಗಳ ದಡಗಳು, ಕೆರೆಯ ಅಂಗಳಗಳು ಸೇರಿದಂತೆ ಎಲ್ಲಾ ಕಡೆಗೂ ಫಲವತ್ತಾದ ಮಣ್ಣು ಇದ್ದೇ ಇದೆ. 27 ಸಾವಿರ ಹೆಕ್ಟೇರ್‌ನಷ್ಟು ಸರ್ಕಾರಿ ಪಡಾ ಭೂಮಿ ಇದ್ದು. ಈ ಪೈಕಿ 700 ಹೆಕ್ಟೇರ್‌ ಪ್ರದೇಶ ಅತಿಕ್ರಮಣಕ್ಕೆ ಒಳಗಾಗಿದೆ.

ಈ ಭೂಮಿಯಲ್ಲಿನ ಫಲವತ್ತಾದ ಮಣ್ಣನ್ನು ರಾತ್ರೋರಾತ್ರಿ ಇಟ್ಟಿಗೆ ಭಟ್ಟಿ ತಯಾರಿಸುವ ಉದ್ಯಮಿಗಳು ಕೊಳ್ಳೆ ಹೊಡೆದು ಲಕ್ಷ ಲಕ್ಷ ಮೆಟ್ರಿಕ್‌ ಟನ್‌ಗಳ ಲೆಕ್ಕದಲ್ಲಿ ಶೇಖರಿಸಿಕೊಳ್ಳುತ್ತಿದ್ದಾರೆ. ನಿಜಕ್ಕೂ ಈ ಭೂಮಿಗಳು ಪರಿಸರ ಸೂಕ್ಷ್ಮ ಸಂವೇದಿ(ಇಕೋ ಝೋನ್‌) ಪ್ರದೇಶಳಾಗಿದ್ದವು. ಗಿಡಮರ, ಹೂ-ಬಳ್ಳಿ, ಜಾನುವಾರುಗಳಿಗೆ ಹುಲ್ಲು, ನೀರು ಸಂಗ್ರಾಹಕಗಳಾಗಿ ಅಂತರ್ಜಲ ವೃದ್ಧಿಗೂ ಇವು ಸಹಕಾರಿಯಾಗಿವೆ. ಆದರೆ ಇಲ್ಲಿನ ಫಲವತ್ತಾದ ಮಣ್ಣನ್ನು ವಿಪರೀತ ಪ್ರಮಾಣದಲ್ಲಿ ಕೊಳ್ಳೆ ಹೊಡೆಯಲಾಗುತ್ತಿದ್ದು,ವರ್ಷದಿಂದ ವರ್ಷಕ್ಕೆ ಗೋಮಾಳಗಳು ಗೊರಚು ಮಣ್ಣಿನ ಪಡಾ ಜಾಗಗಳಾಗುತ್ತಿವೆ.

ಕೆರೆಯ ಮಣ್ಣಿಗೂ ಗುನ್ನ: ಇನ್ನು ಸರ್ಕಾರಿ ಲೆಕ್ಕದಲ್ಲೂ ಮೂಗು ತೂರಿಸುವ ರೌಡಿ ಶೀಟರ್‌ಗಳು ತಮ್ಮ ಇಟ್ಟಿಗೆ ಉದ್ಯಮ ನಡೆಸುವುದಕ್ಕಾಗಿ ಕೆಲ ಅಧಿಕಾರಿಗಳು, ಗ್ರಾಪಂನ ಸ್ಥಳೀಯ ಪುಡಿ ರಾಜಕಾರಣಿಗಳ ಪಟಾಲಂಗೆ ಪಾರ್ಟಿ ಕೊಟ್ಟು ಕೆರೆಗಳಿಂದ ಹೂಳೆತ್ತುವ ಫಲವತ್ತಾದ ಮಣ್ಣನ್ನೆ ಹೊತ್ತುಕೊಂಡು ಹೋಗುತ್ತಿದ್ದಾರೆ.

ಸಾಮಾನ್ಯವಾಗಿ ರೈತ ಸಮುದಾಯ ಕೆರೆಯಲ್ಲಿನ ಫಲವತ್ತಾದ ಮಣ್ಣನ್ನು ಮರಳಿ ಭೂಮಿಗೆ ಹಾಕಿ ಉತ್ತಮ ಬೆಳೆ ಬೆಳೆಯವುದಕ್ಕೆ ತಯಾರಿ ಮಾಡಿಕೊಳ್ಳುವುದು ರೂಢಿಯಲ್ಲಿದೆ. ಸಾಂಪ್ರದಾಯಿಕ ಕೃಷಿ ಪದ್ಧತಿಯಲ್ಲಿ ಈ ಕೆರೆ ಮಣ್ಣಿಗೆ ವಿಶಿಷ್ಟ ಸ್ಥಾನವಿದ್ದು, ಗೊಬ್ಬರಕ್ಕೆ ಸರಿಸಮವಾದ ಭೂ ಪೋಷಕಾಂಶಗಳನ್ನು ಈ ಮಣ್ಣು ಹೊಂದಿರುತ್ತದೆ. ಆದರೆ ಇದರಿಂದ ಇಟ್ಟಿಗೆ ಸುಡುವ ಕೆಲಸ ಮಾಡುತ್ತಿರುವುದು ಮಾತ್ರ ಕೃಷಿಗೆ ಮಾರಕವಾಗುತ್ತಿದೆ ಎನ್ನುತ್ತಿದ್ದಾರೆ ಕೃಷಿ ತಜ್ಞರು.

ಅರಣ್ಯ ಭೂಮಿಯೂ ಸ್ವಾಹಃ: ಇನ್ನು ಮಣ್ಣು ನುಂಗುವವರಿಗೆ ಅರಣ್ಯ ಭೂಮಿಯೂ ಹೊರತಾಗಿಲ್ಲ. ರಾಜಕೀಯ ಬಲ ಬಳಸಿಕೊಂಡು ಅಧಿಕಾರ ವರ್ಗವನ್ನು ಒಳಗೆ ಹಾಕಿಕೊಂಡು ಆಯ ಕಟ್ಟಿನ ಅರಣ್ಯ ಭೂಮಿಯಲ್ಲಿನ ಫಲವತ್ತಾದ ಮಣ್ಣು ಮತ್ತು ಉತ್ತಮ ಗುಣಮಟ್ಟದ ಕಲ್ಲುಗಳನ್ನು ಕೂಡ ಈ ಮಣ್ಣು ಮಾಫಿಯಾ ಕೊಳ್ಳೆ ಹೊಡೆಯುತ್ತಿದೆ.

ಸರ್ಕಾರ ಮಾಡಬೇಕಾಗಿದ್ದೇನು?
ಮರಳು ಮಾಫಿಯಾ, ಮೈನಿಂಗ್‌ ಮಾಫಿಯಾ, ಕಲ್ಲು ಗಣಿಗಾರಿಕೆ ಮಾಫಿಯಾ, ಟಿಂಬರ್‌ ಮಾಫಿಯಾಗಳ ಕಾಲ ಮುಗಿದು ಹೋಗಿದ್ದು ಇದೀಗ ಮಣ್ಣು ಮಾಫಿಯಾ ನಿಧಾನಕ್ಕೆ ತಲೆ ಎತ್ತುತ್ತಿದೆ. ಧಾರವಾಡ ಜಿಲ್ಲೆಯಲ್ಲಿ ಇಟ್ಟಿಗೆ ಭಟ್ಟಿಗಳ ಉದ್ಯಮಕ್ಕೆ ಭಾರಿ ಬಲ ಬಂದಿದೆ. ಇಟ್ಟಿಗೆ ಮಾರಾಟ ವರ್ಷದಿಂದ ವರ್ಷಕ್ಕೆ ಹತ್ತಾರು ಪಟ್ಟು ಹೆಚ್ಚಾಗುತ್ತಿದ್ದು, ಫಲವತ್ತಾದ ಮಣ್ಣು, ಹಳೆ ಕಾಲದ ಹುಣಸೆ ಮರಗಳು ಕಣ್ಣು ಮುಚ್ಚಿ ಕಣ್ಣು ತೆಗೆಯುವುದರಲ್ಲಿ ಮಾಯವಾಗುತ್ತಿವೆ. ಕೂಡಲೇ ಈ ಮಾಫಿಯಾಕ್ಕೆ ಸರ್ಕಾರ ಕಡಿವಾಣ ಹಾಕಿ, ಫಲವತ್ತಾದ ಮಣ್ಣಿನ ರಕ್ಷಣೆಗೆ ಅಗತ್ಯವಾದ ಕಾನೂನು ರೂಪಿಸಬೇಕಿದೆ.

ಒಂದು ಟಿಪ್ಪರ್‌ ಮಣ್ಣಿಗೆ 550 ರೂ.ನಂತೆ ಮಣ್ಣನ್ನು ಕೊಂಡು ಸಂಗ್ರಹಿಸಿ ಇಡುತ್ತೇವೆ. ಮುಂದಿನ ವರ್ಷ ಮಣ್ಣು ಸಿಕ್ಕದೇ ಹೋಗಬಹುದು. ಅಥವಾ ಸರ್ಕಾರ ಕಠಿಣ ಕಾನೂನು ತರಬಹುದು. ಅದಕ್ಕೆ ಈಗಲೇ ಸಂಗ್ರಹಿಸುತ್ತಿದ್ದೇವೆ.
ಪ್ರದೀಪ್‌ ಲೆಗೋಡೆ, ಇಟ್ಟಿಗೆ ವ್ಯಾಪಾರಿ,ಕಲಘಟಗಿ

ಹೊಲದಲ್ಲಿನ ಮಣ್ಣು ಮನೆ ಸಂತಿ ಮತ್ತು ದಿನಸಿ ಖರ್ಚಿಗೆ ಮಾರಾಟ ಮಾಡಿದ್ದೇವೆ. ಮಣ್ಣು ಮಾರಾಟದಿಂದ ಹೊಲಗಳಿಗೆ ಹಾನಿಯಾಗುತ್ತದೆ. ಆದರೆ ಸದ್ಯಕ್ಕೆ ಇದು ಅನಿವಾರ್ಯ.
ಲಕ್ಷ್ಮಣ ತಳವಾರ, ಮುಗದ-ಮಂಡಿಹಾಳ ರೈತ

*ಡಾ.ಬಸವರಾಜ ಹೊಂಗಲ್

ಟಾಪ್ ನ್ಯೂಸ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.