ಚಿನ್ನ ಸ್ಮಗ್ಲರ್‌ಗಳಿಗೆ ಹವಾಲಾ ನಂಟು? ರಾಷ್ಟ್ರೀಯ ತನಿಖಾ ದಳದಿಂದ ಮತ್ತಷ್ಟು ಒಳಸುಳಿವು


Team Udayavani, Jul 19, 2020, 1:29 PM IST

ಚಿನ್ನ ಸ್ಮಗ್ಲರ್‌ಗಳಿಗೆ ಹವಾಲಾ ನಂಟು? ರಾಷ್ಟ್ರೀಯ ತನಿಖಾ ದಳದಿಂದ ಮತ್ತಷ್ಟು ಒಳಸುಳಿವು

ತಿರುವನಂತಪುರ: ಕೇರಳ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿರುವ ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾದಳ (ಎನ್‌ಐಎ)ದ ಅಧಿಕಾರಿಗಳು ಚಿನ್ನ ಕಳ್ಳಸಾಗಣೆದಾರರಿಗೆ ಹವಾಲಾ ಹಾಗೂ ಭಯೋತ್ಪಾದಕ ಸಂಘಟನೆಗಳ ಜತೆ ಇರ ಬಹುದಾದ ನಂಟಿನ ಕುರಿತು ತನಿಖೆ ಆರಂಭಿಸಿದ್ದಾರೆ.

ಪ್ರಕರಣದ ಶಂಕಿತ ಆರೋಪಿ ಫ‌ರೀದ್‌, ಪರಾರಿಯಾಗಿದ್ದು, ಈತನ ಪತ್ತೆಗೆ ಇಂಟರ್‌ಪೋಲ್‌ನ ನೆರವು ಕೋರ ಲಾಗಿದೆ. ಈತ ಹವಾಲಾ ಜಾಲದ ಪ್ರಮುಖ ಸೂತ್ರದಾರನಾಗಿದ್ದು, ಸದ್ಯ ಈತ ಯುಎಇಯಲ್ಲಿ ಇರಬಹುದು. ಕೇರಳದಲ್ಲಿ ಕಳ್ಳಸಾಗಣೆ ಮಾಡಲಾಗುವ ಚಿನ್ನದಿಂದ ಬರುವ ಹಣವನ್ನು ಹವಾಲಾ ಜಾಲದ ಮೂಲಕ ದುಬಾೖ ಹಾಗೂ ಇತರ ಮಧ್ಯಪ್ರಾಚ್ಯ ದೇಶಗಳಿಗೆ ಕಳುಹಿಸಲಾಗುತ್ತದೆ.

ಈ ಕಳ್ಳ ವ್ಯವಹಾರ ಫ‌ರೀದ್‌ನ ಮೇಲ್ವಿಚಾರಣೆಯಲ್ಲಿ ನಡೆಯುತ್ತಿರುವ ಸಾಧ್ಯತೆಯಿದೆ. ಅಲ್ಲದೆ, ಭಯೋತ್ಪಾದಕ ಸಂಘಟನೆಗಳ ಜತೆಗೂ ಈ ಜಾಲ ನಂಟು ಹೊಂದಿರುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.

ಕಳ್ಳಸಾಗಣೆ ಮಾಡಲಾಗುವ ಸರಕಿನ ಮೇಲೆ ಯುಎಇ ರಾಯಭಾರ ಕಚೇರಿಯ ನಕಲಿ ದಾಖಲೆಗಳು, ಲಾಂಛನಗಳು ಹಾಗೂ ಚಿಹ್ನೆಗಳನ್ನು ಅಂಟಿಸಲಾಗುತ್ತದೆ. ಆ ಮೂಲಕ ವಿಮಾನ ನಿಲ್ದಾಣಗಳಲ್ಲಿ ಈ ಸರಕಿಗೆ ರಾಜತಾಂತ್ರಿಕ ವಿನಾಯಿತಿ ಪಡೆಯಲಾಗುತ್ತದೆ ಎಂದು ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ, ಕನಿಷ್ಠ 3-4 ಸರಕು ಸಾಗಣೆ ವಿಮಾನಗಳಲ್ಲಿ ಚಿನ್ನದ ಕಳ್ಳಸಾಗಣೆ ಮಾಡಲಾಗಿದ್ದು, ಇವುಗಳ ಮೌಲ್ಯ ಸುಮಾರು 40-45 ಕೋಟಿ ರೂ.ಗಳಷ್ಟಾಗಬಹುದು ಎಂದು ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ಹೀಗಾಗಿ, 13 ವಿಮಾನಗಳಲ್ಲಿ ಸಾಗಿಸಲಾದ ಸರಕುಗಳನ್ನು ಪರಿಶೀಲನೆಗೆ ಒಳಪಡಿಸಲು ಅಧಿಕಾರಿಗಳು ನಿರ್ಧರಿಸಿದ್ದಾರೆ. ಅಲ್ಲದೆ, ಈ ಚಿನ್ನ ಕಳ್ಳಸಾಗಣೆಯ ಫ‌ಲಾನುಭವಿಗಳನ್ನು ಪತ್ತೆ ಹಚ್ಚಿ, ಅವರನ್ನೂ ತನಿಖೆಗೆ ಒಳಪಡಿಸಲು ಮುಂದಾಗಿದ್ದಾರೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.