ಸುಸೂತ್ರವಾಗಿ ನಡೆದ ಕಾಮೆಡ್-ಕೆ
Team Udayavani, May 13, 2019, 3:06 AM IST
ಬೆಂಗಳೂರು: ಕರ್ನಾಟಕ ವೈದ್ಯಕೀಯ, ಎಂಜಿನಿಯರಿಂಗ್ ಹಾಗೂ ದಂತ ವೈದ್ಯಕೀಯ ಕಾಲೇಜುಗಳ ಒಕ್ಕೂಟದ (ಕಾಮೆಡ್-ಕೆ) ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆ ಬಹುತೇಕ ಕಡೆಗಳಲ್ಲಿ ಸುಗಮವಾಗಿ ನಡೆದಿದ್ದು, ತಾಂತ್ರಿಕ ತೊಂದರೆಯಿಂದ ಒಂದರೆಡು ಕೇಂದ್ರದಲ್ಲಿ ಸ್ವಲ್ಪ ವಿಳಂಬವಾಗಿದ್ದರೂ ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆಯಾಗಿಲ್ಲ.
ದೇಶದ 133 ನಗರಗಳ 248 ಕೇಂದ್ರಗಳು, ರಾಜ್ಯದ 24 ನಗರಗಳ 90 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದೆ. ದೇಶಾದ್ಯಂತ ನೋಂದಣಿ ಮಾಡಿಕೊಂಡಿದ್ದ 70,163 ವಿದ್ಯಾರ್ಥಿಗಳಲ್ಲಿ 58,834 (ಶೇ.83.85) ಹಾಗೂ ರಾಜ್ಯದ 21,417 ವಿದ್ಯಾರ್ಥಿಗಳಲ್ಲಿ 18,901 (ಶೇ.88.25) ವಿದ್ಯಾರ್ಥಿಗಳು ಹಾಜರಾಗಿದ್ದರು. ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ರಸಾಯನಶಾಸ್ತ್ರ, ಭೌತಶಾಸ್ತ್ರ ಹಾಗೂ ಗಣಿತ ಪರೀಕ್ಷೆಗಳು ತಲಾ 60 ಅಂಕಗಳಿಗೆ ನಡೆದಿದೆ.
ರಸಾಯನಶಾಸ್ತ್ರ ಮತ್ತು ಭೌತಶಾಸ್ತ್ರ ಪ್ರಶ್ನೆಗಳಿಗಿಂತ ಗಣಿತ ವಿಷಯದ ಪ್ರಶ್ನೆಗಳು ಸ್ವಲ್ಪ ಕಠಿಣವಾಗಿದ್ದವು ಮತ್ತು ತಾಂತ್ರಿಕ ತೊಂದರೆಯಿಂದ ಕೆಲವೊಂದು ಕಂಪ್ಯೂಟರ್ ಲಾಗಿ ಇನ್ ಆಗುತ್ತಿರಲಿಲ್ಲ. ಕೇಂದ್ರದ ಮುಖ್ಯಸ್ಥರು ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆಯಾಗದಂತೆ ತಾಂತ್ರಿಕ ಸಮಸ್ಯೆ ಸರಿಪಡಿಸಿದ್ದಾರೆ ಎಂದು ವಿದ್ಯಾರ್ಥಿಗಳು ಮಾಹಿತಿ ನೀಡಿದರು.
ಆನ್ಲೈನ್ ಪರೀಕ್ಷೆಯಾಗಿರುವುದರಿಂದ ಬೆಂಗಳೂರಿನ ಕೆಲವು ಕೇಂದ್ರಗಳಲ್ಲಿ ಅಭ್ಯರ್ಥಿಗಳ ಲಾಗಿನ್ ಮಾಡಲು ಸ್ವಲ್ಪ ವಿಳಂಬವಾಗಿತ್ತು. ಆದರೆ, ಪರೀಕ್ಷೆ ಮಾತ್ರ ನಿಗದಿತ ಅವಧಿಯಲ್ಲಿಯೇ ಪೂರ್ಣಗೊಂಡಿದೆ. ರಾಜ್ಯದ ಯಾವುದೇ ಕಡೆ ಪರೀಕ್ಷಾ ಅಕ್ರಮಗಳು ಕಂಡುಬಂದಿಲ್ಲ.
ಮೇ 16ರಂದು ತಾತ್ಕಾಲಿಕ ಮಾದರಿ ಉತ್ತರಗಳನ್ನು ಪ್ರಕಟಿಸಲಾಗುತ್ತದೆ. ಮೇ 24ರಂದು ಅಂತಿಮ ಉತ್ತರಗಳನ್ನು ಪ್ರಕಟಿಸಲಾಗುತ್ತದೆ. ಮೇ 27ರಂದು ಫಲಿತಾಂಶ ಪ್ರಕಟಿಸಲಾಗುತ್ತದೆ. ದೇಶದ 120ಕ್ಕೂ ಅಧಿಕ ಶಿಕ್ಷಣ ಸಂಸ್ಥೆ ಹಾಗೂ 21ಕ್ಕೂ ಅಧಿಕ ಖಾಸಗಿ ವಿಶ್ವವಿದ್ಯಾಲಯಗಳ ಎಂಜಿನಿಯರಿಂಗ್ ಸೀಟುಗಳು ಕಾಮೆಡ್-ಕೆ ಪರೀಕ್ಷೆಯ ರ್ಯಾಂಕಿಂಗ್ ಮೂಲಕ ಹಂಚಿಕೆಯಾಗಲಿದೆ ಎಂದು ಕಾಮೆಡ್-ಕೆ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಸ್.ಕುಮಾರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ