ಕರಾವಳಿಯ ವಿವಿಧೆಡೆ ಉತ್ತಮ ಮಳೆ; ಕೆಲವೆಡೆ ಮನೆ, ವಿದ್ಯುತ್‌ ವ್ಯವಸ್ಥೆಗೆ ಹಾನಿ


Team Udayavani, May 7, 2022, 7:23 AM IST

ಕರಾವಳಿಯ ವಿವಿಧೆಡೆ ಉತ್ತಮ ಮಳೆ; ಕೆಲವೆಡೆ ಮನೆ, ವಿದ್ಯುತ್‌ ವ್ಯವಸ್ಥೆಗೆ ಹಾನಿ

ಮಂಗಳೂರು/ಉಡುಪಿ: ಬೆಳ್ತಂಗಡಿ, ಬಂಟ್ವಾಳ, ಪುತ್ತೂರು, ಕಾರ್ಕಳ ಸೇರಿದಂತೆ ದ.ಕ., ಉಡುಪಿ ಜಿಲ್ಲೆಗಳ ಬಹುತೇಕ ಕಡೆಶುಕ್ರವಾರ ಮಧ್ಯಾಹ್ನದ ಬಳಿಕ ಗುಡುಗು, ಮಿಂಚು ಗಾಳಿ ಸಹಿತ ಉತ್ತಮ ಮಳೆಯಾಗಿದೆ.

ಬೆಳ್ತಂಗಡಿಯ ಬಂದಾರು, ಧರ್ಮ ಸ್ಥಳ, ಉಜಿರೆ, ಗೇರುಕಟ್ಟೆ, ಉರುವಾಲು, ತಣ್ಣೀರುಪಂಥ ಬಾಯಾರು, ಪುಣಚಮೊದಲಾದೆಡೆ ಉತ್ತಮ ಮಳೆಯಾಗಿದೆ.

ಮಲ್ಪೆಯಲ್ಲಿ ಕೃತಕ ನೆರೆ
ಉಡುಪಿಯಲ್ಲಿ ಮಧ್ಯಾಹ್ನದಿಂದ ಮೋಡ ಕವಿದ ವಾತಾವರಣದಿಂದ ಕೂಡಿದ್ದು ಸಂಜೆ ವೇಳೆಗೆ ಉಡುಪಿ, ಮಲ್ಪೆ,ಬ್ರಹ್ಮಾವರ ಸುತ್ತಮುತ್ತ, ಕಾರ್ಕಳ ತಾಲೂಕಿನ ವಿವಿಧೆಡೆ ಗುಡುಗು, ಸಹಿತಮಳೆಯಾಗಿದೆ. ಮಲ್ಪೆಯಲ್ಲಿ ಶುಕ್ರವಾರ ಸಂಜೆ ಸುರಿದ ಧಾರಾಕಾರ ಮಳೆಯಿಂ ದಾಗಿ ಮಲ್ಪೆ ಮುಖ್ಯರಸ್ತೆಯಲ್ಲಿ ಕೃತಕ ನೆರೆ ಸೃಷ್ಟಿಯಾಗಿ ವಾಹನ ಸಂಚಾರಕ್ಕೆ ತೊಂದರೆಯಾಯಿತು.

ದಕ್ಷಿಣ ಅಂಡಮಾನ್‌ ಸಮುದ್ರ ಮತ್ತು ಆಗ್ನೇಯ ಬಂಗಾಲ ಕೊಲ್ಲಿ ಭಾಗದಲ್ಲಿ ಶುಕ್ರವಾರ ಬೆಳಗ್ಗಿನ ವೇಳೆ ವಾಯುಭಾರ ಕುಸಿತ ಉಂಟಾಗಿದೆ. ಮುಂದಕ್ಕೆ ಇದು ಉತ್ತರದತ್ತ ತಿರುಗಲಿದ್ದು, ಬಲಪಡೆಯುತ್ತಾ ಚಂಡಮಾರುತವಾಗಿ ಬದಲಾಗಿ ಆಂಧ್ರ-ಒಡಿಶಾ ತೀರದತ್ತ ತೆರಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದರಿಂದಾಗಿ ವಾಯುವಿನ ಚಲನೆಯೂ ಜೋರಾಗಿದ್ದು, ಕರಾವಳಿ ಭಾಗಕ್ಕೂ ದಟ್ಟ ಮೋಡಗಳೂ ಆಕಾಶದಲ್ಲಿ ತೇಲಿ ಬರುತ್ತಿವೆ. ತಾಪಮಾನವೂ ಹೆಚ್ಚಿರುವುದರಿಂದ ಇವು ಮಳೆಯಾಗಿ ಸುರಿಯುತ್ತಿವೆ. ಬೇಸಗೆ ಮಳೆ ಬಿರುಸಲಾಗಲೂ ಹವಾಮಾನದ ಬದಲಾವಣೆ ಕಾರಣವಾಗಿದೆ.

ಎಲ್ಲೋ ಅಲರ್ಟ್‌
ಹವಾಮಾನ ಇಲಾಖೆಯು ಕರಾವಳಿ ಯಲ್ಲಿ ಎಲ್ಲೋ ಅಲರ್ಟ್‌ ಘೋಷಿಸಿದೆ.

ಕನಕಮಜಲು: ತಡೆಗೋಡೆ ಕುಸಿತ
ಸುಳ್ಯ: ಸುಳ್ಯ ತಾಲೂಕಿನ ಕನಕಮಜಲಿನಲ್ಲಿ ತಡೆಗೋಡೆ ಕುಸಿದು ಅಂಗಡಿಯೊಳಗೆ ನೀರು ನುಗ್ಗಿರುವ ಘಟನೆ ಗುರುವಾರ ಸಂಭವಿಸಿದೆ.

ಕನಕಮಜಲಿನ ಶ್ರೀ ನರಿಯೂರು ರಾಮಣ್ಣ ಗೌಡ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮುಂಭಾಗದ ತಡೆಗೋಡೆ ಕುಸಿದಿದ್ದು, ಮುಂಭಾಗದಲ್ಲಿರುವ ಅಂಗಡಿಯೊಳಗೆ ಮಳೆ ನೀರು ನುಗ್ಗಿದ ಪರಿಣಾಮ ಹಲವಾರು ಅಡಿಕೆ ಗೋಣಿಚೀಲ, ಕರಿಮೆಣಸು ನೆನೆದು ಅಂದಾಜು 2 ಲಕ್ಷ ರೂ. ನಷ್ಟ ಸಂಭವಿಸಿದೆ ಎಂದು ತಿಳಿದುಬಂದಿದೆ.

ತಡೆಗೋಡೆ ಕುಸಿತದಿಂದ ಸಮೀಪದಲ್ಲಿದ್ದ ಗುಡ್ಡಪ್ಪ ಗೌಡ ದೇವರಗುಂಡ ಅವರ ಕಾರು ಶೆಡ್‌ಗೆ ಹಾನಿಯಾಗಿದೆ. ಹಮೀದ್‌ ಹಾಜಿ ಅವರ ಅಂಗಡಿಗೂ ಮಳೆ ನೀರು ನುಗ್ಗಿದೆ.

ಕಾರ್ಕಳ: ತೆಂಗಿನ ಮರ ಬಿದ್ದು ಮನೆಗೆ ಹಾನಿ
ಕಾರ್ಕಳ: ತಾಲೂಕಿನಲ್ಲಿ ಶುಕ್ರವಾರ ಸಾಯಂಕಾಲ ಗುಡುಗು ಮಿಂಚು ಸಹಿತ ಭಾರಿ ಗಾಳಿ ಮಳೆಯಾಗಿದೆ. ಕಸಬಾ ಗ್ರಾಮದ ಬಂಗ್ಲೆ ಗುಡ್ಡೆಯ ಕತಿಜಾ ಬಾನು ಅವರ ಮನೆಗೆ ತೆಂಗಿನ ಮರ ಬಿದ್ದು ಹಾನಿಯಾಗಿದೆ. 75,000 ರೂ. ನಷ್ಟ ಅಂದಾಜಿಸಲಾಗಿದೆ. ನಗರದ ಸರ್ವಜ್ಞ ವೃತ್ತದಿಂದ ಪೇಟೆಗೆ ಗೋಗುವ ದಾರಿಯ ಪಿಡಬುÉ Âಡಿ ಕ್ವಾಟ್ರಸ್‌ ಕಟ್ಟಡದ ಮೇಲೆ ಅಡಿಕೆ ಮರ ಬಿದ್ದಿದೆ. ಬಜಗೋಳಿ, ಮಾಳ, ನಕ್ತೆ, ಬೈಲೂರು, ಪೆರ್ವಾಜೆ ಸೇರಿದಂತೆ ತಾಲೂಕಿನೆಲ್ಲಡೆ ಗಾಳಿ ಮಳೆಯಾಗಿದ್ದು ವಿದ್ಯುತ್‌, ದೂರವಾಣಿ ಸೇವೆಗಳಲ್ಲಿ ವ್ಯತ್ಯಯವಾಗಿದೆ.

ಟಾಪ್ ನ್ಯೂಸ್

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.