ಗೂಡ್ಸ್ ವಾಹನ ಮತ್ತು ಬೈಕ್ ನಡುವೆ ಅಪಘಾತ : ಬೈಕ್ ಸವಾರನಿಗೆ ಗಾಯ
Team Udayavani, Aug 7, 2021, 2:46 PM IST
ಹನೂರು: ಗೂಡ್ಸ್ ವಾಹನ ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಾಯಗೊಂಡಿರುವ ಘಟನೆ ಪಟ್ಟಣದ ಗೌರಿಶಂಕರ ಕಲ್ಯಾಣ ಮಂಟಪದ ಸಮೀಪ ಜರುಗಿದೆ.
ತಾಲೂಕಿನ ಮಾರ್ಟಳ್ಳಿ ಗ್ರಾಮದ ಪ್ರಭು ಎಂಬಾತನೇ ಗಾಯಗೊಂಡ ವ್ಯಕ್ತಿಯಾಗಿದ್ದು, ಶನಿವಾರ ಬೆಳಗ್ಗೆ 8ಗಂಟೆಯ ಸಮಯದಲ್ಲಿ ಹನೂರು ಪಟ್ಟಣದಿಂದ ಕೊಳ್ಳೇಗಾಲದತ್ತ ತೆರಳುತ್ತಿದ್ದರು. ಇದೇ ವೇಳೆ ಕೊಳ್ಳೇಗಾಲದಿಂದ ಹನೂರು ಪಟ್ಟಣಕ್ಕೆ ಆಗಮಿಸುತ್ತಿದ್ದ ಸರಕು ಸಾಗಾಣಿಕೆ ವಾಹನ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಪರಿಣಾಮ ದ್ವಿಚಕ್ರ ವಾಹನ ಸವಾರ ಪ್ರಭುವಿಗೆ ತೀವ್ರ ಪೆಟ್ಟಾಗಿದೆ.
ಸುದ್ದಿ ತಳಿದ ಹನೂರು ಪಿಎಸ್ಐ ಸಿದ್ದಲಿಂಗೇಗೌಡ ಸ್ಥಳಕ್ಕೆ ತೆರಳಿ ಸ್ಥಳ ಪರಿಶಿಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ವಾಹನಗಳನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಇದನ್ನೂ ಓದಿ :ಕೇಳಿದ ಖಾತೆ ಸಿಗದೆ ಇದ್ದರೆ ಶಾಸಕನಾಗಿಯೇ ಇರುತ್ತೇನೆ: ಆನಂದ್ ಸಿಂಗ್ ಅಸಮಾಧಾನ