ಬಿಜೆಪಿ ಸರಕಾರ ಬಂದ ಬಳಿಕ ಗೋ ಕಳ್ಳತನ ಪ್ರಕರಣ ಹೆಚ್ಚು: ಶಾಸಕ ಖಾದರ್ ಆರೋಪ
Team Udayavani, Dec 8, 2021, 7:45 AM IST
ಮಂಗಳೂರು: ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ಗೋ ಕಳ್ಳತನ ಪ್ರಕರಣ ಹೆಚ್ಚಾಗುತ್ತಿದ್ದು, ಸರಕಾರ ಜಾರಿಗೆ ತಂದಿರುವ ಗೋಹತ್ಯೆ ನಿಷೇಧ ಕಾಯ್ದೆ ಜನರ ಕಣ್ಣಿಗೆ ಮಣ್ಣೆರಚುವ ತಂತ್ರವಾಗಿದೆ ಎಂದು ಶಾಸಕ ಯು.ಟಿ. ಖಾದರ್ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದಾರೆ.
ಬಿಜೆಪಿ ಸರಕಾರ ತನ್ನ ವೈಫಲ್ಯವನ್ನು ಮರೆಮಾಚಲು ಪೊಲೀಸರ ಮೇಲೆ ಗೂಬೆ ಕೂರಿಸುತ್ತಿದೆ. ರಾಜ್ಯ ದಲ್ಲಿ 14 ಗೋಮಾಂಸ ರಫ್ತು ಘಟಕಗಳಿದ್ದು, ಅದನ್ನು ಯಾಕೆ ಮುಚ್ಚಿಸಿಲ್ಲ. ಗೋ ಕಳ್ಳತನ ಪ್ರಕರಣಗಳನ್ನು ನಿಲ್ಲಿಸಲು ಆಗದಿದ್ದಾಗ ಗೋಹತ್ಯೆ ನಿಷೇಧ ಕಾಯ್ದೆ ಸರಕಾರದ ಕೇವಲ ನಾಟಕವೇ ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ಪಂಚಾಯತ್ರಾಜ್ ವ್ಯವಸ್ಥೆಗೆ ಶಕ್ತಿ ತುಂಬುವ ಕಾರ್ಯವನ್ನು ಮಾಡಿ ಅಧಿಕಾರ ವಿಕೇಂದ್ರೀಕರಣದ ಮೂಲಕ ತಳ ಮಟ್ಟದಲ್ಲಿ ಜನರಿಗೆ ಅಧಿಕಾರ ನೀಡಿತ್ತು. ಬಿಜೆಪಿ ಸರಕಾರ ಅದನ್ನು ಕಿತ್ತು ಕೊಳ್ಳುವ ಕಾರ್ಯ ಮಾಡುತ್ತಿದೆ ಎಂದರು.
ಇದನ್ನೂ ಓದಿ:ಗುತ್ತಿಗೆಯಲ್ಲಿ ಅಕ್ರಮ : ನ್ಯಾಯಾಂಗ ತನಿಖೆ ಕೋರಿ ಎಎಪಿಯಿಂದ ರಾಜ್ಯಪಾಲರ ಭೇಟಿ
ನಳಿನ್ ಕಾಂಗ್ರೆಸ್ಗೆ ಸೇರಲಿ
ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಬರಲಿ ಎನ್ನುವ ಸಂಸದ ನಳಿನ್ ಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿ, ನಳಿನ್ ಕಾಂಗ್ರೆಸ್ ಸೇರುವುದು ಒಳಿತು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
MUST WATCH
ಹೊಸ ಸೇರ್ಪಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ
Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!
Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ
Glanders infection: ಗ್ಲ್ಯಾಂಡರ್ಸ್ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ