ಕರಾವಳಿಯಾದ್ಯಂತ ಭಕ್ತಿ ಸಂಭ್ರಮದ ಗೋಪೂಜೆ

ಉಡುಪಿ: ವಿವಿಧೆಡೆ ಗೋಪೂಜೆ ಸಂಪನ್ನ

Team Udayavani, Nov 7, 2021, 4:15 AM IST

ಕರಾವಳಿಯಾದ್ಯಂತ ಭಕ್ತಿ ಸಂಭ್ರಮದ ಗೋಪೂಜೆ

ಉಡುಪಿ/ ಮಂಗಳೂರು: ಶ್ರೀಕೃಷ್ಣಮಠ ಸಹಿತ ವಿವಿಧ ಮಠಗಳು, ಧಾರ್ಮಿಕ ದತ್ತಿ ಇಲಾಖೆಯ ಅಧೀನದ ನೂರಾರು ದೇವಸ್ಥಾನಗಳು ಮತ್ತು ಖಾಸಗಿ ಆಡಳಿತದ ದೇವಸ್ಥಾನಗಳಲ್ಲಿ ಶುಕ್ರವಾರ ಗೋಪೂಜೆಯನ್ನು ನಡೆಸಲಾಯಿತು.

ಶ್ರೀಕೃಷ್ಣಮಠದ ಕನಕನ ಕಿಂಡಿ ಎದುರು ಪರ್ಯಾಯ ಅದಮಾರು ಮಠದ ಶ್ರೀಈಶಪ್ರಿಯತೀರ್ಥ ಶ್ರೀಪಾದರು, ಪಲಿಮಾರು ಉಭಯ ಶ್ರೀಗಳು, ಪೇಜಾವರ ಶ್ರೀಗಳು ಗೋಪೂಜೆ ನಡೆಸಿದರು.

ಕೊಲ್ಲೂರು, ಮಂದಾರ್ತಿ ಸಹಿತ ಜಿಲ್ಲೆಯ ಎ ಶ್ರೇಣಿಯ 23 ದೇವಸ್ಥಾನಗಳು, ಬಿ ಶ್ರೇಣಿಯ 19 ಮತ್ತು 866 ಸಿ ಶ್ರೇಣಿಯ ದೇವಸ್ಥಾನ ಗಳಲ್ಲಿ ಗೋಪೂಜೆ ನಡೆಸಬೇಕೆಂದು ಜಿಲ್ಲಾಡಳಿತ ನೀಡಿದ ಸೂಚನೆ ಮೇರೆಗೆ ವಿವಿಧ ದೇವಸ್ಥಾನಗಳಲ್ಲಿ ಗೋಪೂಜೆ ನಡೆಯಿತು. ಅಧಿಸೂ ಚಿತ ವಲ್ಲದ ಖಾಸಗಿ ಆಡಳಿತದ ಆನೆಗುಡ್ಡೆ, ಸಾಲಿಗ್ರಾಮ, ವಿವಿಧೆಡೆ ಗಳಲ್ಲಿರುವ ವೆಂಕಟರಮಣ ದೇವಸ್ಥಾನ ಗಳಲ್ಲಿಯೂ ಗೋಪೂಜೆ ಸಂಪನ್ನ ಗೊಂಡಿತು. ಮನೆಗಳಲ್ಲಿಯೂ ಗೋಪೂಜೆ ನಡೆಯಿತು.

ಗುರುವಾರ ರಾತ್ರಿ ವಿವಿಧೆಡೆ ಬಲೀಂದ್ರ ಪೂಜೆ ನಡೆಯಿತು. ಕೃಷಿಕರು ಗದ್ದೆಗಳಲ್ಲಿ ದೀಪಗಳನ್ನಿರಿಸಿ ಬಲೀಂದ್ರನನ್ನು ಗ್ರಾಮೀಣ ಶೈಲಿಯಲ್ಲಿ ಕರೆದು ಪೂಜೆ ಸಲ್ಲಿಸಿದರು.

ತುಳಸೀ ಸಂಕೀರ್ತನೆ
ಶ್ರೀಕೃಷ್ಣಮಠದಲ್ಲಿ ಉತ್ಥಾನ ದ್ವಾದಶಿಯವರೆಗೆ (ನ. 16) ನಡೆಯುವ ತುಳಸೀ ಪೂಜೆ, ಸಂಕೀರ್ತನೆ ಶುಕ್ರವಾರ ಆರಂಭ ಗೊಂಡಿತು. ಪ್ರತಿನಿತ್ಯ ರಾತ್ರಿ ಪೂಜೆ ಬಳಿಕ ವಾದಿರಾಜಸ್ವಾಮಿಗಳ ಸಂಕೀರ್ತನೆಗಳನ್ನು ಹಾಡಿ ತುಳಸೀ ಪೂಜೆಯನ್ನು ನಡೆಸಲಾಗುತ್ತದೆ.

ಇದನ್ನೂ ಓದಿ:2026ರಲ್ಲಿ ಚಂದ್ರನಲ್ಲಿ ರೋವರ್‌; ಆಸ್ಟ್ರೇಲಿಯಾ ಬಾಹ್ಯಾಕಾಶ ಸಂಸ್ಥೆ, ನಾಸಾದಿಂದ ಹೊಸ ಯೋಜನೆ

ಪಟಾಕಿ: ಕಣ್ಣಿಗೆ ಗಾಯ
ಉಡುಪಿ: ಜಿಲ್ಲೆಯಲ್ಲಿ ದೀಪಾವಳಿ ಹಬ್ಬದ ಆಚರಣೆ ವೇಳೆ ಪಟಾಕಿ ಸಿಡಿದು ಮೂವರು ಮಕ್ಕಳು ಸೇರಿದಂತೆ ಐದು ಮಂದಿಯ ಕಣ್ಣಿಗೆ ಗಾಯವಾಗಿರುವ ಬಗ್ಗೆ ವರದಿಯಾಗಿದೆ.

3 ಸೆಂಟ್ಸ್‌ನಲ್ಲಿ 60 ದೇಸೀ ಗೋವು
ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಕೆ.ರಘುಪತಿ ಭಟ್‌ ಅವರು ದೊಡ್ಡಣಗುಡ್ಡೆಯ ಕಮಲಮ್ಮನವರು ಕೇವಲ 3 ಸೆಂಟ್ಸ್‌ ಜಾಗದಲ್ಲಿ ಸಾಕುತ್ತಿರುವ 60 ದನಗಳ ದೇಸೀ ಗೋಶಾಲೆಯಲ್ಲಿ ಪೂಜೆ ಸಲ್ಲಿಸಿದರು.

ಮಂಗಳೂರು: ದೀಪಾವಳಿ ಹಬ್ಬದ ಮೂರನೇ ದಿನವಾದ ಶುಕ್ರವಾರ ಕರಾವಳಿಯಾದ್ಯಂತ ಗೋಪೂಜೆಯನ್ನು ಭಕ್ತಿ ಸಂಭ್ರಮದಿಂದ ನೆರವೇರಿಸಲಾಯಿತು.

ಮುಜರಾಯಿ ಇಲಾಖೆಯ ಎಲ್ಲ ದೇವಾಲಯಗಳಲ್ಲಿ ಈ ಬಾರಿ ಗೋಪೂಜೆ ನಡೆಸುವಂತೆ ರಾಜ್ಯ ಸರಕಾರ ಸೂಚನೆ ಹೊರಡಿಸಿದ್ದ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿರುವ ಪ್ರಮುಖ ದೇವಾಲಯಗಳು ಸೇರಿದಂತೆ ಎಲ್ಲ ಮುಜರಾಯಿ ದೇವಸ್ಥಾನಗಳು ಹಾಗೂ ಇತರ ಪ್ರಮುಖ ಕ್ಷೇತ್ರಗಳಲ್ಲಿ ಗೋಪೂಜೆ ನೆರವೇರಿತು. ಕುಕ್ಕೆಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸಚಿವ ಎಸ್‌. ಅಂಗಾರ ಅವರು ಗೋಪೂಜೆ ನೆರವೇರಿಸಿದರು.

ಜಿಲ್ಲೆಯಲ್ಲಿರುವ ಗೋಶಾಲೆಗಳಲ್ಲಿ ಗೋಪೂಜೆಯು ಭಕ್ತಿ ಸಡಗರದಿಂದ ನಡೆಯಿತು. ವಿವಿಧ ಸಂಘಟನೆಗಳಿಂದಲೂ ಜಿಲ್ಲೆಯ ವಿವಿಧೆಡೆ ಸಾರ್ವಜನಿಕ ಗೋಪೂಜೆ ನೆರವೆೇರಿತು. ಮನೆಗಳಲ್ಲಿ ಗೋವುಗಳಿಗೆ ಸ್ನಾನ ಮಾಡಿಸಿ ಶೃಂಗರಿಸಿ ಹೂವಿನ ಹಾರಹಾಕಿ ಆರತಿ ಬೆಳಗಿ ನಮಿಸಿದರು.

ಶುಕ್ರವಾರ ಬಲಿಪಾಡ್ಯ ಆಚರಣೆ ಜರಗಿತು. ಕೆಲವು ಕಡೆಗಳಲ್ಲಿ ಲಕ್ಷ್ಮಿ ಪೂಜೆ ನಡೆಯಿತು. ದೀಪಾವಳಿ ಸಂದರ್ಭದಲ್ಲೂ ವಾಹನ ಪೂಜೆ ಮಾಡುವ ಸಂಪ್ರದಾಯ ಅನುಸರಿಸಿಕೊಂಡು ಬರುತ್ತಿರುವವರು ವಾಹನಗಳಿಗೆ ಪೂಜೆ ಮಾಡಿಸಿದರು.

ಈ ಬಾರಿ ಕೊರೊನಾ ನಿರ್ಬಂಧಗಳು ಬಹುತೇಕ ಸಡಿಲಗೊಂಡಿರುವ ಹಿನ್ನಲೆಯಲ್ಲಿ ದೀಪಾವಳಿ ಸಂದರ್ಭದಲ್ಲಿ ಪಟಾಕಿ ಸಂಭ್ರಮ ಜೋರಾಗಿತ್ತು. ಮನೆಮಂದಿ ಮಕ್ಕಳ ಜತೆಗೆ. ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಟಾಪ್ ನ್ಯೂಸ್

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.