ನಷ್ಟದಲ್ಲೇ ಮತ್ತೆ ಸರಕಾರಿ ಬಸ್‌ ಸಂಚಾರ ಆರಂಭ

ಕೆಎಸ್‌ಆರ್‌ಟಿಸಿ: ದಿನವೊಂದಕ್ಕೆ 15 ಲಕ್ಷ ರೂ.ಆದಾಯ ಕೊರತೆ

Team Udayavani, Jun 8, 2020, 6:11 AM IST

ನಷ್ಟದಲ್ಲೇ ಮತ್ತೆ ಸರಕಾರಿ ಬಸ್‌ ಸಂಚಾರ ಆರಂಭ

ವಿಶೇಷ ವರದಿ -ಪುತ್ತೂರು: ಎರಡುವರೆ ತಿಂಗಳುಗಳ ಬಳಿಕ ಪೂರ್ಣ ಪ್ರಮಾಣದಲ್ಲಿ ಬಸ್‌ ಓಡಾಟ ಆರಂಭಿಸಲು ಕೆಎಸ್‌ಆರ್‌ಟಿಸಿ ಪುತ್ತೂರು ವಿಭಾಗದಲ್ಲಿ ಸಿದ್ಧತೆ ನಡೆದಿದೆ. ಒಂದೆಡೆ ಕೋವಿಡ್-19 ಸಂಕಷ್ಟ, ಇನ್ನೊಂದೆಡೆ ನಿರೀಕ್ಷಿತ ಆದಾಯ ಕೊರತೆ ನಡುವೆ ಸರಕಾರಿ ಬಸ್‌ ಮತ್ತೆ ಸಂಚರಿಸಬೇಕಿದೆ.

ಪುತ್ತೂರು ಕೆಎಸ್‌ಆರ್‌ಟಿಸಿ ವಿಭಾಗ ಪ್ರತಿ ದಿನ 75 ಲಕ್ಷ ರೂ. ಆದಾಯ ನಿರೀಕ್ಷಿಸುತ್ತದೆ. ಆದರೆ ಕೋವಿಡ್-19 ಎಫೆಕ್ಟ್ ಮೊದಲೇ 60 ಲಕ್ಷ ರೂ. ಸಂಗ್ರಹಗೊಂಡು 15 ಲಕ್ಷ ರೂ. ಕೊರತೆ ಉಂಟಾಗುತ್ತಿತ್ತು. ತಿಂಗಳ ಅಂಕಿ ಅಂಶದಲ್ಲಿ ಕೆಲವು ಘಟಕ ಲಾಭದಲ್ಲಿದ್ದರೆ, ಇನ್ನು ಕೆಲವು ಘಟಕ ನಷ್ಟ ಅನುಭವಿಸುತ್ತವೆ. ಇಲ್ಲಿ ಖರ್ಚು-ವೆಚ್ಚ ಸರಿ ಸಮವಾದರೂ ಲಾಭ ಸಿಗುತ್ತಿಲ್ಲ. ಮುಖ್ಯವಾಗಿ ಗರಿಷ್ಠ ಪ್ರಮಾಣದಲ್ಲಿ ರಿಯಾಯಿತಿ ದರ ಪಾಸ್‌ ವಿತರಣೆ ಕೂಡ ಆದಾಯ ಸಂಗ್ರಹದ ಮೇಲೆ ಪರಿಣಾಮ ಬೀರಿದೆ ಎನ್ನುತ್ತಿದೆ ಅಂಕಿ ಅಂಶ.

ಪ್ರತಿ ಬಸ್‌ನ ಪ್ರತಿ ಕಿ.ಮೀ. ಓಡಾಟಕ್ಕೆ ತಲಾ 36 ರೂ. ಖರ್ಚು ತಗಲುತ್ತದೆ. ವಿಭಾಗ ವ್ಯಾಪ್ತಿಯಲ್ಲಿ 560 ಬಸ್‌ಗಳಿದ್ದು, ಅವುಗಳಿಗೆ ಪ್ರತಿ ಕಿ.ಮೀ.ಗೆ 20,160 ರೂ.ಖರ್ಚು ತಗಲುತ್ತದೆ. ಆದರೆ ಕೆಎಸ್‌ಆರ್‌ಟಿಸಿಗೆ ಪ್ರತಿ ಕಿ.ಮೀ.ಗೆ ಸಿಗುವ ಆದಾಯ 22ರಿಂದ 25 ರೂ. ತನಕ ಮಾತ್ರ. ಅಂದರೆ ಒಟ್ಟು ಬಸ್‌ನ ಪ್ರತಿ ಕಿ.ಮೀ.ಗೆ 25 ರೂ. ಸಂಗ್ರಹದಂತೆ ಲೆಕ್ಕ ಹಾಕಿದರೆ 14,000 ರೂ. ಮಾತ್ರ ಲಭಿಸಿದಂತಾಗುತ್ತದೆ. ಅಂದರೆ ಪ್ರತಿ ಕಿ.ಮೀ.ನಲ್ಲಿ ನಿರೀಕ್ಷಿತ ಆದಾಯದಲ್ಲಿ 6,000 ರೂ. ಗಳಷ್ಟು ಕೊರತೆ ಉಂಟಾಗಿದೆ.

ಕೋವಿಡ್-19 ಎಫೆಕ್ಟ್ : ನಷ್ಟ
ಕೋವಿಡ್-19 ಬಳಿಕ ಮೇ 19ರಿಂದ ಕೆಎಸ್‌ಆರ್‌ಟಿಸಿ ಉಪವಿಭಾಗದ ಎಲ್ಲ ಘಟಕ ವ್ಯಾಪ್ತಿಯಲ್ಲಿ ಒಟ್ಟು 50 ಬಸ್‌ ಓಡಾಟ ಆರಂಭಿಸಿವೆ. ಜೂ. 7ರ ವೇಳೆ 130 ಬಸ್‌ಗಳು ಓಡಾಡುತ್ತಿವೆ. ಆದಾಯ ಪ್ರಮಾಣ ಕುಸಿತ ಕಂಡು ನಷ್ಟದಲ್ಲಿ ಸಂಚರಿಸುತ್ತಿದೆ. ಉದಾಹರಣೆಗೆ ಪುತ್ತೂರು-ಮಂಗಳೂರು ನಡುವೆ ಈ ಹಿಂದೆ ಪ್ರತಿ ಕಿ.ಮೀ.ಗೆ 25 ರೂ. ಆದಾಯ ಬರುತ್ತಿದ್ದರೆ, ಈಗ 21 ರೂ.ನಷ್ಟು ಮಾತ್ರ ಸಂಗ್ರಹವಾಗುತ್ತಿದೆ. ಹಾಗೇ ಪುತ್ತೂರು-ಬೆಂಗಳೂರು ಬಸ್‌ನಲ್ಲಿ 32 ರೂ. ಇದ್ದ ಆದಾಯ ಈಗ 14 ರೂ.ನಿಂದ 20 ರೂ.ನೊಳಗಿದೆ. ಜತೆಗೆ ಈ ಹಿಂದೆ 4ರಿಂದ 8 ಟ್ರಿಪ್‌ ಓಡಾಡುತ್ತಿದ್ದ ಮಾರ್ಗದಲ್ಲಿ ಈಗ 2 ಟ್ರಿಪ್‌ ಮಾತ್ರ ಸಂಚರಿಸುತ್ತಿವೆ.

35 ಶೇ.ನೌಕರರು ಕರ್ತವ್ಯಕ್ಕೆ ಹಾಜರು
ಕೆಎಸ್‌ಆರ್‌ಟಿಸಿ ಪುತ್ತೂರು ವಿಭಾಗೀಯ ವ್ಯಾಪ್ತಿಯಲ್ಲಿ 6 ತಾಲೂಕುಗಳು ಒಳಗೊಂಡಿವೆ. ಪುತ್ತೂರು, ಸುಳ್ಯ, ಬಂಟ್ವಾಳ, ಬೆಳ್ತಂಗಡಿ ಹಾಗೂ ಮಡಿಕೇರಿ ಘಟಕಗಳಿವೆ. ಒಟ್ಟು 2,400 ಮಂದಿ ಸಿಬಂದಿಯಿದ್ದಾರೆ. ಈ ಪೈಕಿ ಶೇ. 33ರಷ್ಟು ನೌಕರರು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಜೂ. 8ರಿಂದ ಇದರ ಪ್ರಮಾಣ ಹೆಚ್ಚಾಗಲಿದೆ. ಹೊರ ಜಿಲ್ಲೆಯ ನೌಕರರು ಕರ್ತವ್ಯಕ್ಕೆ ಮರಳಿ ಬರುತ್ತಿದ್ದಾರೆ. ಆರೋಗ್ಯ ಪ್ರಮಾಣ ಪತ್ರ, ತಪಾಸಣೆ ಬಳಿಕವಷ್ಟೇ ಕರ್ತವ್ಯಕ್ಕೆ ಸೇರಿಸಲಾಗುತ್ತಿದೆ. ಈ ಬಾರಿ ಸಿಬಂದಿಗೆ ಕೋವಿಡ್-19 ಪರಿಣಾಮ ಆದಾಯ ಕೊರತೆ ಉಂಟಾಗಿ ವೇತನ ಪಾವತಿ ವಿಳಂಬವಾಗಿದೆ.

ಪ್ರಯಾಣಿಕರ ಸಂಖ್ಯೆ ಹೆಚ್ಚಳ ನಿರೀಕ್ಷೆ
ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಸೀಮಿತ ಸಂಖ್ಯೆಯಲ್ಲಿ ಮಾತ್ರ ಬಸ್‌ ಓಡಾಟ ನಡೆಸುತ್ತಿದೆ. ಪ್ರಯಾಣಿಕ ಸಂಖ್ಯೆ ಇಳಿಮುಖದಿಂದ ಆದಾಯದಲ್ಲಿ ಇಳಿಮುಖವಾಗಿದೆ. ಜೂ. 8ರಿಂದ ದೇವಾಲಯಗಳು ಪುನರಾರಂಭದಿಂದ ಪ್ರಯಾಣಿಕರ ಸಂಖ್ಯೆ ಹೆಚ್ಚಳಗೊಳ್ಳುವ ನಿರೀಕ್ಷೆ ಇದೆ. ಪ್ರಯಾಣಿಕರ ಸಂಖ್ಯೆ ಆಧರಿಸಿ ಬಸ್‌ ಓಡಾಟ ಹೆಚ್ಚಳದ ಬಗ್ಗೆ ನಿರ್ಧರಿಸಲಾಗುವುದು.
 - ನಾಗೇಂದ್ರ ಕುಮಾರ್‌, ವಿಭಾಗೀಯ
ನಿಯಂತ್ರಣಾಧಿಕಾರಿ, ಪುತ್ತೂರು ಕೆಎಸ್‌ಆರ್‌ಟಿಸಿ ವಿಭಾಗೀಯ ಕಚೇರಿ

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

Naxal: ಕೂಜಿಮಲೆ: ಮತ್ತೆ ನಕ್ಸಲ್‌ ಸಂಚಾರ? ಎಎನ್‌ಎಫ್ ಶೋಧ ಚುರುಕು!

Naxal: ಕೂಜಿಮಲೆ: ಮತ್ತೆ ನಕ್ಸಲ್‌ ಸಂಚಾರ? ಎಎನ್‌ಎಫ್ ಶೋಧ ಚುರುಕು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.