Karnataka: ವಿಶೇಷ ಚೇತನ ವಿದ್ಯಾರ್ಥಿಗಳಿಗೆ ವಿನಾಯಿತಿ ಪ್ರಕಟಿಸಿದ ಸರಕಾರ
Team Udayavani, Oct 16, 2023, 11:39 PM IST
ಬೆಂಗಳೂರು: ಒಂದರಿಂದ 9ನೇ ತರಗತಿಯಲ್ಲಿ ರಾಜ್ಯ ಪಠ್ಯಕ್ರಮದಲ್ಲಿ ಓದುತ್ತಿರುವ ವಿಶೇಷ ಅಗತ್ಯವುಳ್ಳ ವಿದ್ಯಾರ್ಥಿಗಳಿಗೆ ಷರತ್ತುಬದ್ಧ ಪರೀಕ್ಷಾ ವಿನಾಯಿತಿಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನೀಡಿದೆ. ಈ ವರೆಗೆ ಬೋರ್ಡ್ ಪರೀಕ್ಷೆ (10ನೇ ಮತ್ತು 12ನೇ ತರಗತಿ)ಗೆ ಮಾತ್ರ ಸೀಮಿತವಾಗಿದ್ದ ಈ ಸೌಲಭ್ಯ ಇನ್ನು ಮೌಲ್ಯಾಂಕನ ಮತ್ತು ವಾರ್ಷಿಕ ಪರೀಕ್ಷೆಗೂ ವಿಸ್ತರಣೆಗೊಳ್ಳಲಿದೆ.
ಅಂಧತ್ವ, ಮಿತದೃಷ್ಟಿ, ಬರೆಯಲು ದೈಹಿಕ ತೊಂದರೆ ಹೊಂದಿರುವ, ಲೋಕೋಮೋಟರ್ ನ್ಯೂನತೆ, ನರದೌರ್ಬಲ್ಯ ಹೊಂದಿರುವ ಅಭ್ಯರ್ಥಿಗಳಿಗೆ ಬರಹಗಾರ/ಓದುಗಾರರ ಸೌಲಭ್ಯದೊಂದಿಗೆ ಹೆಚ್ಚುವರಿ ಸಮಯ ತೆಗೆದುಕೊಳ್ಳಲು ಅವಕಾಶ ನೀಡಲಾಗಿದೆ. ಅಭ್ಯರ್ಥಿಯ ತರಗತಿಗಿಂತ ಒಂದು ತರಗತಿ ಕಡಿಮೆ ಇರುವ ಬರಹಗಾರ/ಓದುಗಾರರನ್ನು ಶಾಲಾ ಮುಖ್ಯಸ್ಥರು ಅಥವಾ ಅಭ್ಯರ್ಥಿಯೇ ಆಯ್ಕೆ ಮಾಡಿಕೊಳ್ಳಬಹುದು. ನೆಲ ಮಹಡಿಯಲ್ಲಿ ಪ್ರತ್ಯೇಕ ಕೋಣೆಯಲ್ಲಿ ಪರೀಕ್ಷೆ ನಡೆಸಬೇಕು. ವೈದ್ಯಕೀಯ ಪ್ರಮಾಣ ಪತ್ರದ ಆಧಾರದ ಮೇಲೆ ಶಿಕ್ಷಣ ಮಾಧ್ಯಮದ ಒಂದು ಭಾಷೆಯನ್ನು ಮಾತ್ರ ಅಧ್ಯಯನ ಮಾಡಿ ಉಳಿದ ಎರಡು ಭಾಷೆಗಳಿಗೆ ವಿನಾಯಿತಿ ನೀಡಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ