ಸರ್ಕಾರಕ್ಕೆ “ನ್ಯಾಯಾಂಗ ನಿಂದನೆ’ಎಚ್ಚರಿಕೆ

ಸರ್ಕಾರಿ ಹಾಸ್ಟೆಲ್‌ಗ‌ಳ ಸಮೀಕ್ಷೆ: ಕೋರ್ಟ್‌ ಆದೇಶ ಪಾಲಿಸದ ಸರ್ಕಾರ

Team Udayavani, Dec 7, 2019, 4:44 AM IST

sw-48

ಬೆಂಗಳೂರು: ಹಿಂದುಳಿದ ವರ್ಗದ ವಿದ್ಯಾರ್ಥಿಗಳ ಉಚಿತ ವಸತಿ ನಿಲಯಗಳು ಸೇರಿ ರಾಜ್ಯದ ಸರ್ಕಾರಿ ಹಾಸ್ಟೆಲ್‌ಗಳಲ್ಲಿನ ಮೂಲಸೌಕರ್ಯಗಳು ಮತ್ತು ಸುರಕ್ಷತಾ ಸಮೀಕ್ಷೆ ನಡೆಸುವ ಬಗ್ಗೆ ಕೋರ್ಟ್‌ ಆದೇಶ ಪಾಲಿಸಲು ವಿಫ‌ಲವಾದ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಹೈಕೋರ್ಟ್‌, ನ್ಯಾಯಾಂಗ ನಿಂದನೆ ಆರೋಪದಡಿ ಏಕೆ ಕ್ರಮ ಜರುಗಿಸಬಾರದು ಎಂಬ ಬಗ್ಗೆ ವಾರದಲ್ಲಿ ಉತ್ತರಿಸುವಂತೆ ನಿರ್ದೇಶನ ನೀಡಿದೆ.

ಕೊಪ್ಪಳ ನಗರದ ಬನ್ನಿಕಟ್ಟಿ ಬಳಿಯ ಬಿಸಿಎಂ ಹಾಸ್ಟೆಲ್‌ನಲ್ಲಿ ವಿದ್ಯುತ್‌ ಅವಘಡ ಸಂಭವಿಸಿ ಐವರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಆಧರಿಸಿ ಹೈಕೋರ್ಟ್‌ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಶುಕ್ರವಾರ ಹಿರಿಯ ನ್ಯಾ. ರವಿ ಮಳಿಮಠ ಹಾಗೂ ನ್ಯಾ. ಎಂ.
ನಾಗಪ್ರಸನ್ನ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಆಗ, ಸರ್ಕಾರಿ ಹಾಸ್ಟೆಲ್‌ಗ‌ಳಲ್ಲಿನ ಮೂಲಸೌಕರ್ಯಗಳು ಹಾಗೂ ಅಲ್ಲಿನ ಸುರಕ್ಷತಾ ವ್ಯವಸ್ಥೆಯ ಬಗ್ಗೆ ಸಮೀಕ್ಷೆ
ನಡೆಸಬೇಕು. ಇದಕ್ಕಾಗಿ ಜಿಲ್ಲಾ ಮಟ್ಟದ ಸಮಿತಿ ರಚಿಸಬೇಕು ಎಂದು ಅ.30ರಂದು ನೀಡಿದ್ದ ಆದೇಶ ಪಾಲನೆ ಮಾಡದಿರುವುದನ್ನು ಗಮನಿಸಿದ ಪೀಠ, ಸರ್ಕಾರದ ನಡೆಗೆ ಅಸಮಾಧಾನ ವ್ಯಕ್ತಪಡಿಸಿತು. ಆದೇಶ ಪಾಲಿಸದಿರುವುದಕ್ಕೆ “ನ್ಯಾಯಾಂಗ ನಿಂದನೆ ಆರೋಪ’ ಪ್ರಕರಣದಡಿ ಏಕೆ ಕ್ರಮ
ಜರುಗಿಸಬಾರದು ಎಂಬುದರ ಕುರಿತು ವಾರದಲ್ಲಿ ಉತ್ತರಿಸುವಂತೆ ಸರ್ಕಾರಕ್ಕೆ ಸೂಚಿಸಿತು.

ಹಿಂದುಳಿದ ವರ್ಗದ ವಿದ್ಯಾರ್ಥಿಗಳ ಉಚಿತ ವಸತಿ ನಿಲಯಗಳಲ್ಲಿ ಒದಗಿಸಲಾಗುತ್ತಿರುವ ಮೂಲಸೌಕರ್ಯಗಳ ಸ್ಥಿತಿಗತಿ ಹೇನಿದೆ. ಹಾಸ್ಟೆಲ್‌ಗ‌ಳನ್ನು ಸ್ವಂತ, ಸರ್ಕಾರಿ ಕಟ್ಟಡಗಳಲ್ಲಿ ನಡೆಸಲಾಗುತ್ತಿದೆಯೇ ಅಥವಾ ಬಾಡಿಗೆ ಕಟ್ಟಡದಲ್ಲಿದೆಯೇ?. ಆ ಹಾಸ್ಟೆಲ್‌ಗ‌ಳಲ್ಲಿ ಏನೆಲ್ಲಾ ಸುರಕ್ಷತಾ
ಕ್ರಮಗಳನ್ನು ಅಳವಡಿಸಿಕೊಳ್ಳಲಾಗಿದೆ. ಹಾಸ್ಟೆಲ್‌ ಪ್ರವೇಶಮಿತಿ, ವಿದ್ಯಾರ್ಥಿಗಳ ಸಂಖ್ಯೆ ಸೇರಿದಂತೆ ಸಮಗ್ರ ಸಮೀಕ್ಷೆ ನಡೆಸಲು ರಾಜ್ಯದ ಎಲ್ಲ 30 ಜಿಲ್ಲೆಗಳಲ್ಲಿ ಸಮಿತಿಗಳನ್ನು ರಚಿಸಲು ಸೂಚಿಸಿತ್ತು.

ಅಲ್ಲದೇ, ಹಿಂದುಳಿದ ವರ್ಗಗಳ ಇಲಾಖೆ ಅಧೀನದಲ್ಲಿರುವ 2,438 ಹಾಸ್ಟೆಲ್‌ಗ‌ಳ ಪೈಕಿ 1,031
ಹಾಸ್ಟೆಲ್‌ಗ‌ಳು ಬಾಡಿಗೆ ಕಟ್ಟಡದಲ್ಲಿ ಇರುವ ಅಂಶವನ್ನು ಗಮನಿಸಿದ್ದ ನ್ಯಾಯಪೀಠ, ಹಾಸ್ಟೆಲ್‌ ಮಂಜೂರಾತಿ, ಹಾಗೂ ಅದನ್ನು ನಡೆಸಲು ಬಾಡಿಗೆ ಕಟ್ಟಡ ಪಡೆಯಬೇಕಾದರೆ, ಸೌಲಭ್ಯ ಒದಗಿಸಲು, ಸುರಕ್ಷತೆ ಕ್ರಮಕ್ಕೆ ನಿರ್ದಿಷ್ಠ ಮಾನದಂಡಗಳು ಇವೆಯೇ, ಇದ್ದರೆ ಮಾಹಿತಿ ಸಲ್ಲಿಸಲು
ತಿಳಿಸಿತ್ತು. ಅಂಥ ನಿಯಮಗಳಿಲ್ಲದಿದ್ದರೆ ತಿಂಗಳಲ್ಲಿ ಮಾನದಂಡ ಅಥವಾ ನಿಯಮ ರೂಪಿಸಲು ಕ್ರಮ
ಕೈಗೊಳ್ಳುವಂತೆ ಆದೇಶಿಸಿತ್ತು. ಆದರೆ, ಕೋರ್ಟ್‌ ಆದೇಶ ಪಾಲಿಸುವಲ್ಲಿ ಸರ್ಕಾರ ವಿಫ‌ಲವಾಗಿದ್ದು, ಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ.

ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿ
ಬೆಂಗಳೂರು: ರಾಜ್ಯದ ಅನುದಾನರಹಿತ ಹಾಗೂ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ 2020-21ನೇ ಸಾಲಿನ 1-10ನೇ ತರಗತಿವರೆಗಿನ ಪಠ್ಯಪುಸ್ತಕಗಳನ್ನು ಖರೀದಿಸಲು ಒಟ್ಟು ಮೊತ್ತದ ಶೇ.25 ಮುಂಗಡವಾಗಿ ಕಡ್ಡಾಯ ಪಾವತಿಸಬೇಕೆಂದು ಸೂಚಿಸಿರುವ ಆದೇಶ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ಸಂಬಂಧ ಹೈಕೋರ್ಟ್‌ ಸರ್ಕಾರಕ್ಕೆ ನೋಟಿಸ್‌ ಜಾರಿಗೊಳಿಸಿದೆ. ಈ ಕುರಿತಂತೆ ರಾಜ್ಯ ಅಲ್ಪ ಸಂಖ್ಯಾತ
ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಒಕ್ಕೂಟದ ಅಧ್ಯಕ್ಷ ಸಿ.ಆರ್‌. ಮೊಹಮ್ಮದ್‌ ಇಮ್ತಿಯಾಜ್‌ ಸಲ್ಲಿಸಿದ್ದ ಅರ್ಜಿಯು ನ್ಯಾ. ಎಸ್‌. ಸುಜಾತ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.
ವಾದ ಆಲಿಸಿದ ನ್ಯಾಯಪೀಠ, ಪ್ರತಿವಾದಿಗಳಾದ ಶಿಕ್ಷಣ ಇಲಾಖೆ ಕಾರ್ಯದರ್ಶಿ, ಆಯುಕ್ತರು ಹಾಗೂ
ಕರ್ನಾಟಕ ರಾಜ್ಯ ಪಠ್ಯಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕರಿಗೆ ನೋಟಿಸ್‌ ಜಾರಿಗೊಳಿಸಿ ಆಕ್ಷೇಪಣೆಗಳನ್ನು ಸಲ್ಲಿಸಲು ನಿರ್ದೇಶನ ನೀಡಿತು. ಅಲ್ಲದೆ, ಸುತ್ತೋಲೆ ಬಗ್ಗೆ ಮುಂದಿನ ವಿಚಾರಣೆ ವೇಳೆ ಮಾಹಿತಿ ನೀಡುವಂತೆ ಸೂಚಿಸಿತು.

ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಜಿ.ಆರ್‌. ಮೋಹನ್‌, ರಾಜ್ಯದ ಅನುದಾನರಹಿತ ಹಾಗೂ
ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ 2020-21ನೇ ಸಾಲಿನ 1- 10ನೇ ತರಗತಿವರೆಗಿನ ಪಠ್ಯಪುಸ್ತಕಗಳನ್ನು ಖರೀದಿಸಲು ಒಟ್ಟು ಮೊತ್ತದ ಶೇ.25 ಮುಂಗಡ ಹಣ ಪಾವತಿಸಬೇಕು ಎಂದು ಕರ್ನಾಟಕ ರಾಜ್ಯ ಪಠ್ಯಪುಸ್ತಕ ಸಂಘ 2019ರ ಅ.31ರಂದು ಹೊರಡಿಸಿರುವ ಆದೇಶ ಕಾನೂನು ಬಾಹಿರವಾದುದು ಎಂದರು.

ಅದೇ ರೀತಿ ಪುಸಕ್ತಗಳಿಗೆ ಬೇಡಿಕೆ ಸಲ್ಲಿಸುವಾಗಲೇ ಶೇ.10 ಹಣ ಪಾವತಿಸಬೇಕೆಂದು ಸಂಘವು ಎಲ್ಲ ಶಾಲೆಗಳಿಗೂ ಎಸ್‌ಎಂಎಸ್‌ ಸಂದೇಶ ಕಳುಹಿಸಿದೆ. ಆ ಮೂಲಕ ಪಠ್ಯಪುಸ್ತಕ ಸಂಘವು ಶಾಲೆಗಳ ಮೇಲೆ ಒತ್ತಡ ಹೇರುತ್ತಿದೆ. ಈ ರೀತಿ ಮುಂಗಡ ಹಣ ಪಾವತಿಸಬೇಕಾಗುತ್ತದೆ ಎಂಬ ಬಗ್ಗೆ ಮೊದಲೇ
ಶಾಲೆಗಳ ಜೊತೆ ಚರ್ಚೆ ನಡೆಸಿಲ್ಲ. ಹಾಗಾಗಿ ಸಂಘದ ಕ್ರಮ ನಿಯಮ ಬಾಹಿರ ಎಂದು ಹೇಳಿದ್ದಾರೆ.
ಈವರೆಗೆ ಸರ್ಕಾರ ನಿಗದಿಪಡಿಸಿರುವ ಪಠ್ಯಗಳು ಖಾಸಗಿ ಪುಸ್ತಕ ಮಾರಾಟ ಮಳಿಗೆಗಳಲ್ಲಿ ದೊರಕುತ್ತಿ
ದ್ದವು. ಇದೀಗ ಸಂಘ ಮೊದಲೇ ಬೇಡಿಕೆ ಸಲ್ಲಿಸಿ ಮುಂಗಡ ಹಣ ಪಾವತಿ ಮಾಡದಿದ್ದರೆ ಪುಸಕ್ತಗಳು
ದೊರಕದಂತೆ ಮಾಡುವ ಬೆದರಿಕೆಯೊಡ್ಡುತ್ತಿದೆ. ಮುಂಗಡ ಹಣ ಕೇಳಲು ಸಂಘಟಕಕ್ಕೆ ಅಧಿಕಾರವಿಲ್ಲ.
ಹಾಗಾಗಿ, 2019ರ ಅ.31ರಂದು ಸಂಘವು ಹೊರಡಿಸಿರುವ ಸುತ್ತೋಲೆ ರದ್ದುಗೊಳಿಸಬೇಕು ಎಂದು
ಅರ್ಜಿದಾರರು ಕೋರಿದ್ದಾರೆ.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.