SC: ಸಣ್ಣ ಪುಟ್ಟ ವಿಚಾರಕ್ಕೆಲ್ಲ ಸರಕಾರಿ ಅಧಿಕಾರಿಗಳಿಗೆ ಸಮನ್ಸ್ ಬೇಡ: ಸುಪ್ರೀಂ
ಹೈಕೋರ್ಟ್ಗಳಿಗೆ ಸುಪ್ರೀಂ ನಿಂದ ಮಾರ್ಗಸೂಚಿ
Team Udayavani, Jan 3, 2024, 11:49 PM IST
ಹೊಸದಿಲ್ಲಿ: ಸರಕಾರಿ ನೌಕರರಿಗೆ ಕೋರ್ಟ್ಗಳು ಜಾರಿ ಮಾಡುವ ಸಮನ್ಸ್ ಕುರಿತಾಗಿ ಸುಪ್ರೀಂ ಕೋರ್ಟ್ ಬುಧವಾರ ಮಾರ್ಗಸೂಚಿ ಹೊರಡಿಸಿದೆ. ಸಣ್ಣಪುಟ್ಟ ವಿಚಾರಕ್ಕೆಲ್ಲ ಸಮನ್ಸ್ ಜಾರಿ ಮಾಡಬೇಕಾಗಿಲ್ಲ ಎಂದೂ ತಿಳಿಸಿದ್ದು, ಕಡ್ಡಾಯವಾಗಿ ಮಾರ್ಗಸೂಚಿಗಳನ್ನು ಪಾಲಿಸುವಂತೆ ಎಲ್ಲ ಹೈಕೋರ್ಟ್ಗಳಿಗೂ ಸೂಚಿಸಿದೆ.
ಕೇವಲ ಅಫಿದವಿತ್ ಸಲ್ಲಿಸಿ ಇತ್ಯರ್ಥಪಡಿಸುವ ವಿಚಾರಗಳಿದ್ದರೆ, ಸಮನ್ಸ್ ನೀಡಬೇಕಾಗಿಲ್ಲ, ನ್ಯಾಯಾಲಯಗಳು ಸರಕಾರಿ ನೌಕರರು ಧರಿಸಿರುವ ಬಟ್ಟೆಯನ್ನು ನೋಡಿಕೊಂಡು ಅವರಿಗೆ ಅವಮಾನವಾಗುವಂತೆ ಟೀಕೆ ಮಾಡಬಾರದು, ಸರಕಾರಿ ಇಲಾಖೆಗಳಲ್ಲಿ ನಿಗದಿಪಡಿಸಿದ ವಸ್ತ್ರಸಂಹಿತೆಯನ್ನು ಮೀರುವಂಥ ಉಡುಗೆ ತೊಟ್ಟಿದ್ದರೆ ಮಾತ್ರ ಆಕ್ಷೇಪ ಮಾಡಬಹುದು. ಅಭಿಪ್ರಾಯಭೇದವಿದೆ ಎಂಬ ಕಾರಣಕ್ಕೆ ಸಮನ್ಸ್ ನೀಡುವುದು ಸರಿಯಲ್ಲ, ಹಾಜರಾಗುವಂತೆ ಸೂಚಿಸುವುದಿದ್ದರೂ ವೀಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗುವುದಕ್ಕೆ ಆದ್ಯತೆ ನೀಡಬಹುದು ಎಂದೂ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
ಉತ್ತರ ಪ್ರದೇಶದಲ್ಲಿ ಸರಕಾರಿ ಅಧಿಕಾರಿಯೊಬ್ಬರಿಗೆ ಕೋರ್ಟ್ ನಿಂದ ಸಮನ್ಸ್ ಜಾರಿಯಾದ ಪ್ರಕರಣದ ವಿಚಾರಣೆ ನಡೆಸಿ, ಸುಪ್ರೀಂ ಕೋರ್ಟ್ ಈ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
MUST WATCH
ಹೊಸ ಸೇರ್ಪಡೆ
ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ
Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ
Bengaluru: ಫ್ಲೈಓವರ್ಗಳಲ್ಲೂ ಕಸ ಸುರಿಯುವ ವಾಹನ ಸವಾರರು
Godrej: ಜನಪ್ರಿಯ ಗೋದ್ರೆಜ್ ಸಮೂಹ ಇಬ್ಭಾಗ: ಜಮ್ಶೆಡ್, ನಾದಿರ್ ನೂತನ ಮುಖ್ಯಸ್ಥರು
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ