3 ವರ್ಷಗಳಿಂದ ಪಾವತಿಯಾಗಿಲ್ಲ ಭತ್ತೆ!

ಸರಕಾರಿ ಪಾಲಿಟೆಕ್ನಿಕ್‌ ಅರೆಕಾಲಿಕ ಉಪನ್ಯಾಸಕರ ಸಂಕಷ್ಟ

Team Udayavani, Jun 29, 2020, 6:43 AM IST

3 ವರ್ಷಗಳಿಂದ ಪಾವತಿಯಾಗಿಲ್ಲ ಭತ್ತೆ!

ಮಂಗಳೂರು: ರಾಜ್ಯಾದ್ಯಂತ ಇರುವ ಸರಕಾರಿ ಪಾಲಿಟೆಕ್ನಿಕ್‌ ಕಾಲೇಜುಗಳ ಅರೆಕಾಲಿಕ ಉಪನ್ಯಾಸಕರ ಭತ್ತೆ 3 ವರ್ಷಗಳಿಂದ (2017 ರಿಂದ) ಪಾವತಿಯಾಗದೆ ಬಾಕಿ ಇದ್ದು, ಉಪನ್ಯಾಸಕರು ಜೀವನ ನಿರ್ವಹಣೆಗೆ ಪರದಾಡುವಂತಾಗಿದೆ.

ತಾಂತ್ರಿಕ ಶಿಕ್ಷಣ ಇಲಾಖೆಯ ಅಂಕಿ- ಅಂಶಗಳ ಪ್ರಕಾರ 3 ವರ್ಷಗಳಲ್ಲಿ ಅರೆಕಾಲಿಕ ಉಪನ್ಯಾಸಕರಿಗೆ ಪಾವತಿಸಲು ಬಾಕಿ ಇರುವ ಮೊತ್ತ 10.33 ಕೋಟಿ ರೂ.! ಭತ್ತೆ ಪಾವತಿಗೆ ಬೇಕಾಗಿರುವ ಒಟ್ಟು 33.20 ಕೋಟಿ ರೂ.ಗಳ ಪೈಕಿ 22.86 ಕೋಟಿ ರೂ. ಬಿಡುಗಡೆ ಆಗಿದ್ದು ಕೆಲವು ಪಾಲಿಟೆಕ್ನಿಕ್‌ಗಳ ಉಪನ್ಯಾಸಕರಿಗೆ ಕೆಲವು ತಿಂಗಳಲ್ಲಿ ಪಾವತಿ ಆಗಿದೆ.

18 ಬಾರಿ ಪ್ರಸ್ತಾವನೆ!
ಬಾಕಿ ಭತ್ತೆ ಪಾವತಿಸಲು ಹೆಚ್ಚುವರಿ ಅನುದಾನ ಒದಗಿಸು ವಂತೆ ಕೋರಿ ತಾಂತ್ರಿಕ ಶಿಕ್ಷಣ ಇಲಾಖೆಯು 2018ರಿಂದ ಇದುವರೆಗೆ (2020 ಮೇ 15 ತನಕ) 18 ಬಾರಿ ಪ್ರಸ್ತಾವನೆಗಳನ್ನು ಸರಕಾರಕ್ಕೆ ಕಳುಹಿಸಿದೆ. ಆದರೂ ಅನುದಾನ ಬಂದಿಲ್ಲ!

ಮಂಗಳೂರಿನಲ್ಲಿ 1 ಕೋ.ರೂ. ಭತ್ತೆ
ಮಂಗಳೂರಿನ ಕೆಪಿಟಿ ಮತ್ತು ಡಬ್ಲ್ಯೂ ಪಿಟಿಗಳಲ್ಲಿ 2 ವರ್ಷಗಳಿಂದ ಅರೆಕಾಲಿಕ ಉಪನ್ಯಾಸಕರಿಗೆ 1 ಕೋಟಿ ರೂ. ಪಾವತಿ ಬಾಕಿ ಇದೆ. ಕೆಪಿಟಿಯ 57 ಉಪನ್ಯಾಸಕರಿಗೆ 2018- 19ರಲ್ಲಿ 23 ಲಕ್ಷ ರೂ. ಹಾಗೂ 2019-20ರಲ್ಲಿ 50 ಲಕ್ಷ ರೂ. ಸಹಿತ ಒಟ್ಟು 73 ಲಕ್ಷ ರೂ. ಬಾಕಿ ಇದೆ. ಡಬ್ಲ್ಯೂ ಪಿಟಿಯಲ್ಲಿ 2018- 19ರಲ್ಲಿ 19 ಉಪನ್ಯಾಸಕರಿಗೆ 3.45 ಲಕ್ಷ ರೂ. ಹಾಗೂ 2019-20ರಲ್ಲಿ 21 ಉಪನ್ಯಾಸಕರಿಗೆ 23.63 ಲಕ್ಷ ರೂ. ಸೇರಿದಂತೆ ಒಟ್ಟು 27.08 ಲಕ್ಷ ರೂ. ಬಾಕಿ ಇದೆ.

ರಾಜ್ಯದಲ್ಲಿ 85 ಸರಕಾರಿ ಪಾಲಿಟೆಕ್ನಿಕ್‌ಗಳಿದ್ದು, 1,038 ಮಂದಿ ಅರೆಕಾಲಿಕ ಉಪನ್ಯಾಸಕರಿದ್ದಾರೆ. ದ.ಕ.ದಲ್ಲಿ 3 ಸರಕಾರಿ ಪಾಲಿಟೆಕ್ನಿಕ್‌ಗಳಿದ್ದು, ಮಂಗಳೂರಿನ ಕೆಪಿಟಿಯಲ್ಲಿ ರಾಜ್ಯದಲ್ಲಿಯೇ ಅತ್ಯಧಿಕ (57) ಸಂಖ್ಯೆಯ ಅರೆಕಾಲಿಕ ಉಪನ್ಯಾಸಕರಿದ್ದಾರೆ.

ಅರೆಕಾಲಿಕ ಉಪನ್ಯಾಸಕರಿಗೆ ಮಾಸಿಕ ಭತ್ತೆ 7,500 ರೂ. ಇತ್ತು. 10 ವರ್ಷಗಳ ಹೋರಾಟದ ಬಳಿಕ ಇತ್ತೀಚೆಗೆ 12,500 ರೂ.ಗೇರಿದೆ. ಕೆಲಸ ಕೇವಲ 8 ತಿಂಗಳು ಮಾತ್ರ. ಈ 8 ತಿಂಗಳ ಭತ್ತೆ ಪಾವತಿಗೂ ವಿಳಂಬ ನೀತಿ ಖೇದಕರ. ಸರಕಾರದ ನೀತಿಗೆ ಬೇಸತ್ತು ಚಿಕ್ಕಮಗಳೂರಿನ ಸರಕಾರಿ ಪಾಲಿಟೆಕ್ನಿಕ್‌ನಿಂದ ಈಗಾಗಲೇ ಕೆಲವು ಉಪನ್ಯಾಸಕರು ಕೆಲಸ ತೊರೆದಿದ್ದಾರೆ.

ಮಾನವೀಯ ನಡೆ
ಶೈಕ್ಷಣಿಕ ಚಟುವಟಿಕೆಗಳನ್ನು ಸಮರ್ಪಕವಾಗಿ ನಿರ್ವಹಿಸಿದರೂ ಉಪನ್ಯಾಸಕರಿಗೆ ನ್ಯಾಯವಾಗಿ ಸಿಗಬೇಕಾದ ಮೊತ್ತ ಪಾವತಿಸದ ಸರಕಾರದ ನೀತಿ ಅಮಾನವೀಯ. ಕೊರೊನಾದ ಈ ಸಂಕಷ್ಟದ ಕಾಲದಲ್ಲಾದರೂ ಬಾಕಿ ಇರುವ ಗೌರವ ಧನ ಬಿಡುಗಡೆಯಾದರೆ ಕೊಂಚ ನೆಮ್ಮದಿ ಕಾಣಬಹುದು.
– ಎಂ. ಪ್ರಶಾಂತ್‌, ಅಧ್ಯಕ್ಷರು, ಅ.ಕ. ಸರಕಾರಿ ಪಾಲಿಟೆಕ್ನಿಕ್‌ ಅರೆಕಾಲಿಕ ಉಪನ್ಯಾಸಕರ ಸಂಘ

ಪಾವತಿಗೆ ಕ್ರಮ
85 ಸರಕಾರಿ ಪಾಲಿಟೆಕ್ನಿಕ್‌ಗಳಲ್ಲಿರುವ ಅರೆಕಾಲಿಕ ಉಪನ್ಯಾಸಕರ ಭತ್ತೆ ಪಾವತಿಸಲು 2020- 21ನೇ ಸಾಲಿನಲ್ಲಿ ಸರಕಾರವು ಹೊಸ ಉಪ ಶೀರ್ಷಿಕೆಯನ್ನು ಸೃಜಿಸಿ 12.86 ಕೋ.ರೂ. ಒದಗಿಸಿದ್ದು, ಹಿಂದಿನ ವರ್ಷಗಳಲ್ಲಿ ಬಾಕಿ ಇರುವ ಮೊತ್ತವನ್ನು 2020- 21ನೇ ಸಾಲಿನಲ್ಲಿ ಒದಗಿಸಲಾದ ಅನುದಾನದಲ್ಲಿ ಭರಿಸಲು ಕ್ರಮ ಕೈಗೊಳ್ಳಲಾಗುವುದು.
– ಡಾ| ಅಶ್ವತ್ಥ ನಾರಾಯಣ,
ಉಪ ಮುಖ್ಯಮಂತ್ರಿ ಹಾಗೂ
ತಾಂತ್ರಿಕ ಶಿಕ್ಷಣ ಸಚಿವರು

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.