ರಾಜ್ಯಪಾಲರ ಭಾಷಣ: ಎಚ್ಚರಿಕೆ ಮಾತಿಗೆ ನಿರ್ಧಾರ


Team Udayavani, Feb 19, 2020, 3:10 AM IST

rajyapaklara

ಬೆಂಗಳೂರು: ರಾಜ್ಯ ವಿಧಾನ ಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಮಾಡಿರುವ ಭಾಷಣದ ಮೇಲೆ ಎಚ್ಚರಿಕೆಯಿಂದ ಮಾತನಾಡಲು ರಾಜ್ಯ ಕಾಂಗ್ರೆಸ್‌ ನಾಯಕರು ನಿರ್ಧರಿಸಿದ್ದಾರೆ.

ಮಂಗಳವಾರ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲೆ ಚರ್ಚಿಸುವಾಗ ರಾಜ್ಯ ಸರ್ಕಾರ ಯಾವುದೇ ಹೊಸ ಯೋಜನೆಗಳನ್ನು ಘೋಷಣೆ ಮಾಡಿಲ್ಲ ಎನ್ನು ವುದನ್ನು ಎತ್ತಿ ತೋರಿಸುವುದಕ್ಕೆ ಒತ್ತು ನೀಡುವಂತೆ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ರಾಜ್ಯಪಾಲರು ತಮ್ಮ ಭಾಷಣದಲ್ಲಿ ಹಿಂದಿನ ಕಾಂಗ್ರೆಸ್‌ ಸರ್ಕಾರ ಹಾಗೂ ಜೆಡಿಎಸ್‌ ಕಾಂಗ್ರೆಸ್‌ ನೇತೃತ್ವದ ಮೈತ್ರಿ ಸರ್ಕಾರದ ಯೋಜನೆಗಳ ಬಗ್ಗೆಯೇ ಹೆಚ್ಚು ಪ್ರಸ್ತಾಪ ಮಾಡಿದ್ದಾರೆ. ಆ ಯೋಜನೆಗಳ ಬಗ್ಗೆ ವಿರೋಧ ಮಾಡಿದರೆ, ನಮ್ಮ ಯೋಜನೆಗಳನ್ನು ನಾವೇ ವಿರೋಧಿಸಿದಂತಾಗುತ್ತದೆ. ಹೀಗಾಗಿ ಬಿಜೆಪಿ ಸರ್ಕಾರ ಯಾವುದೇ ಹೊಸ ಯೋಜನೆಗಳನ್ನು ಜಾರಿಗೊಳಿಸಿಲ್ಲ ಎನ್ನುವುದಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಶಾಸಕರಿಗೆ ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಇದರೊಂದಿಗೆ ರಾಜ್ಯ ಸರ್ಕಾರ ಪೊಲೀಸ್‌ ವ್ಯವಸ್ಥೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿ ರುವುದು, ಅನಗತ್ಯವಾಗಿ ದೇಶ ದ್ರೋಹದ ಪ್ರಕರಣಗಳನ್ನು ದಾಖಲಿಸಿ ಕಿರುಕುಳ ನೀಡುವುದು. ಪ್ರವಾಹ ಪರಿಹಾರ ನೀಡದಿರುವುದು, ಪ್ರತಿಪಕ್ಷಗಳ ಶಾಸಕರ ಕ್ಷೇತ್ರಗಳಿಗೆ ಅನುದಾನ ಕಡಿತ ಮಾಡಿರುವ ವಿಚಾರಗಳನ್ನು ಪ್ರಸ್ತಾಪಿಸಿ ಸರ್ಕಾರವನ್ನು ಕಟ್ಟಿ ಹಾಕುವ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ.

ರಾಜ್ಯ ಸರ್ಕಾರದ ವಿರುದ್ಧ ಸದನದಲ್ಲಿ ಹೋರಾಟ ಮಾಡಲು ಎಲ್ಲ ಶಾಸಕರು ಒಗ್ಗಟ್ಟು ಪ್ರದರ್ಶನ ಮಾಡಲು ಸಕ್ರಿಯವಾಗಿ ಸದನದ ಕಲಾಪಗಳಲ್ಲಿ ಪಾಲ್ಗೊಳ್ಳುವಂತೆ ಶಾಸಕರಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಸಭೆಯ ನಂತರ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಈ ಅಧಿವೇಶನದಲ್ಲಿ ಹಲವು ವಿಚಾರಗಳನ್ನು ಪ್ರಸ್ತಾಪಿಸಲು ನಿರ್ಧರಿಸಿದ್ದೇವೆ.

ಪೊಲೀಸ್‌ ಇಲಾಖೆ ದುರ್ಬಳಕೆ, ಯು.ಟಿ.ಖಾದರ್‌ ಮೇಲೆ ದೇಶದ್ರೋಹದ ಪ್ರಕರಣ ದಾಖಲಿಸಿರುವುದು. ಬೀದರ್‌ನ ಶಾಹೀನ್‌ ಶಾಲೆಯ ಮೇಲ್‌ ಪ್ರಕರಣ ದಾಖಲಿಸಿರುವುದು, ಕಾನೂನು ಸುವ್ಯವಸ್ಥೆ ಹದ ಗೆಟ್ಟಿರುವುದು ಹಾಗೂ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ಮಾಡುತ್ತೇವೆ ಎಂದು ಹೇಳಿದರು.

ನಗರ ಪೊಲೀಸ್‌ ಆಯುಕ್ತ ಭಾಸ್ಕರ್‌ ರಾವ್‌ ಯುನಿಫಾರ್ಮ್ ಮೇಲೆ ಸದನ ಒಳಗೆ ಬರುವುದು ತಪ್ಪು. ಅವರಿಗೆ ಕಾನೂನು ಗೊತ್ತಿಲ್ಲ ಎಂದರೆ ಹೇಗೆ? ಈ ಬಗ್ಗೆ ಸಭಾಧ್ಯಕ್ಷರು ಗಮನ ಹರಿಸಬೇಕು.
-ದಿನೇಶ್‌ ಗುಂಡೂರಾವ್‌, ಕೆಪಿಸಿಸಿ ಅಧ್ಯಕ್ಷ

ರಾಜ್ಯ ಸರ್ಕಾರ ಪ್ರತಿಪಕ್ಷಗಳನ್ನು ದಮನ ಮಾಡುವ ಕೆಲಸ ಮಾಡುತ್ತಿದೆ. ಕಾಂಗ್ರೆಸ್‌ ಶಾಸಕರ ಅನುದಾನ ಕಡಿತಗೊಳಿಸಲಾಗಿದೆ. ಪ್ರತಿಪಕ್ಷಗಳ ಅಭಿವ್ಯಕ್ತಿ ಸ್ವಾತಂತ್ರ್ಯ ಹತ್ತಿಕ್ಕಲಾಗುತ್ತಿದೆ. ಪ್ರತಿಭಟನೆಯ ಹಕ್ಕನ್ನೇ ಕಿತ್ತುಕೊಳ್ಳುತ್ತಿದ್ದಾರೆ. ಇದರ ವಿರುದ್ಧ ಧ್ವನಿ ಎತ್ತುತ್ತೇವೆ.
-ಈಶ್ವರ್‌ ಖಂಡ್ರೆ, ಕೆಪಿಸಿಸಿ ಕಾರ್ಯಾಧ್ಯಕ್ಷ.

ಟಾಪ್ ನ್ಯೂಸ್

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.