ಕಾಶ್ಮೀರದ ಒಳನಾಡಿನಿಂದ ಸೇನೆ ವಾಪಸ್‌? ಹಂತ ಹಂತವಾಗಿ ಸೇನೆ ವಾಪಸಾತಿಗೆ ಕೇಂದ್ರ ಚಿಂತನೆ

ಕಾನೂನು ಸುವ್ಯವಸ್ಥೆ, ಉಗ್ರ ನಿಗ್ರಹ ಹೊಣೆ ಸಿಆರ್‌ಪಿಎಫ್, ಪೊಲೀಸರ ಹೆಗಲಿಗೆ

Team Udayavani, Feb 21, 2023, 6:55 AM IST

ಕಾಶ್ಮೀರದ ಒಳನಾಡಿನಿಂದ ಸೇನೆ ವಾಪಸ್‌? ಹಂತ ಹಂತವಾಗಿ ಸೇನೆ ವಾಪಸಾತಿಗೆ ಕೇಂದ್ರ ಚಿಂತನೆ

ನವದೆಹಲಿ:ಜಮ್ಮು ಮತ್ತು ಕಾಶ್ಮೀರಕ್ಕಿದ್ದ ವಿಶೇಷ ಸ್ಥಾನಮಾನವನ್ನು ರದ್ದು ಮಾಡಿ ಮೂರೂವರೆ ವರ್ಷಗಳ ಬಳಿಕ ಈಗ ಕೇಂದ್ರ ಸರ್ಕಾರವು ಮತ್ತೂಂದು ಮಹತ್ವದ ನಿರ್ಧಾರವನ್ನು ಕೈಗೊಳ್ಳಲು ಸಿದ್ಧತೆ ನಡೆಸಿದೆ. ಕಣಿವೆಯ ಒಳನಾಡು ಪ್ರದೇಶದಿಂದ ಹಂತ ಹಂತವಾಗಿ ಭಾರತೀಯ ಸೇನೆಯನ್ನು ವಾಪಸ್‌ ಪಡೆಯುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ.

ಈ ಪ್ರಸ್ತಾಪಕ್ಕೆ ಒಪ್ಪಿಗೆ ಸಿಕ್ಕರೆ, ಕೇವಲ ಗಡಿ ನಿಯಂತ್ರಣ ರೇಖೆ(ಎಲ್‌ಒಸಿ)ಯಲ್ಲಿ ಮಾತ್ರವೇ ಸೇನೆಯ ನಿಯೋಜನೆ ಮುಂದುವರಿಯಲಿದೆ.

ಜಮ್ಮು ಮತ್ತು ಕಾಶ್ಮೀರದ ಒಳನಾಡು ಪ್ರದೇಶಗಳಲ್ಲಿ ಯೋಧರ ನಿಯೋಜನೆ ರದ್ದಾಗಲಿದೆ. ಈ ಕುರಿತು ಕಳೆದ 2 ವರ್ಷಗಳಿಂದಲೇ ರಕ್ಷಣಾ ಇಲಾಖೆ, ಕೇಂದ್ರ ಗೃಹ ಇಲಾಖೆ, ಸಶಸ್ತ್ರ ಪಡೆಗಳು ಹಾಗೂ ಜಮ್ಮು ಮತ್ತು ಕಾಶ್ಮೀರ ಪೊಲೀಸರ ನಡುವೆ ಚರ್ಚೆ ನಡೆಯುತ್ತಿದ್ದು, ಈಗ ಅಂತಿಮ ರೂಪ ಪಡೆಯುತ್ತಿದೆ ಎಂದು ಭದ್ರತಾ ಪಡೆಯ ಮೂಲಗಳು ತಿಳಿಸಿವೆ. ವಿಶೇಷ ಸ್ಥಾನಮಾನ ರದ್ದು ಮಾಡುವ ವೇಳೆ ಹೆಚ್ಚುವರಿ ಸೇನೆಯನ್ನು ಕಾಶ್ಮೀರದ ಒಳನಾಡು ಪ್ರದೇಶಗಳಿಗೆ ರವಾನಿಸಲಾಗಿತ್ತು.

ಸೇನೆ ಬದಲು ಸಿಆರ್‌ಪಿಎಫ್:
ಕಣಿವೆಯಿಂದ ಸೇನೆಯನ್ನು ವಾಪಸ್‌ ಕರೆಸಿಕೊಂಡ ಬಳಿಕ, ಒಳನಾಡಲ್ಲಿ ಕಾನೂನು-ಸುವ್ಯವಸ್ಥೆ ಮತ್ತು ಉಗ್ರ ನಿಗ್ರಹ ಕಾರ್ಯಾಚರಣೆಗಳ ಹೊಣೆ ಸಿಆರ್‌ಪಿಎಫ್ಗೆ ವಹಿಸಲಾಗುತ್ತದೆ ಎಂದು ಹೇಳಲಾಗಿದೆ. ಕಾಶ್ಮೀರವು ಸಹಜ ಸ್ಥಿತಿಗೆ ಬಂದಿದೆ ಎಂದು ಈಗಾಗಲೇ ಕೇಂದ್ರ ಸರ್ಕಾರ ಹೇಳುತ್ತಿದೆ. 2018ಕ್ಕೆ ಹೋಲಿಸಿದರೆ 2019ರ ಆಗಸ್ಟ್‌ 5ರಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ದಾಳಿ, ಭದ್ರತಾ ಪಡೆಗಳ ಹತ್ಯೆ ಪ್ರಕರಣಗಳು ಶೇ.50ರಷ್ಟು ಕಡಿಮೆಯಾಗಿದೆ ಎಂದೂ ಸರ್ಕಾರ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಸೇನೆ ವಾಪಸಾತಿಗೆ ಯೋಜಿಸಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ನಿಯೋಜಿಸಲ್ಪಟ್ಟಿರುವ ಯೋಧರು- 1.3 ಲಕ್ಷ
ಈ ಪೈಕಿ ಗಡಿಯಲ್ಲಿ ನಿಯೋಜಿತರಾದವರು – 80,000
ಉಗ್ರ ನಿಗ್ರಹ ಕಾರ್ಯಾಚರಣೆಯಲ್ಲಿ ತೊಡಗಿರುವವರು- 45,000
ಕಣಿವೆಯಲ್ಲಿ ನಿಯೋಜಿತರಾಗಿರುವ ಸಿಆರ್‌ಪಿಎಫ್ ಯೋಧರು- 60,000
ಜಮ್ಮು ಮತ್ತು ಕಾಶ್ಮೀರ ಪೊಲೀಸರ ಸಂಖ್ಯೆ- 83,000

 

 

 

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.