ರೈತ ರಿಗೆ ಐದು ಲಕ್ಷ ಹೆಕ್ಟೇರ್ ಜಮೀನು; ಅರಣ್ಯ ಭೂಮಿ ಕಂದಾಯ ಇಲಾಖೆಗೆ
15 ವರ್ಷ ಹಿಂದಿನ ಕೃಷಿಕರಿಗೆೆ ಹಂಚಿಕೆ
Team Udayavani, May 5, 2022, 7:20 AM IST
ಬೆಂಗಳೂರು: ಅರಣ್ಯ ಇಲಾಖೆಯಿಂದ ಕಂದಾಯ ಇಲಾಖೆಗೆ 6 ಲಕ್ಷ ಹೆಕ್ಟೇರ್ ಭೂಮಿ ಹಸ್ತಾಂತರವಾಗಲಿದ್ದು, ಈ ಪೈಕಿ ಸುಮಾರು 5 ಲಕ್ಷ ಹೆಕ್ಟೇರ್ ಅನ್ನು 15 ವರ್ಷಗಳಿಂದ ಸಾಗುವಳಿ ಮಾಡುತ್ತಿರುವವರಿಗೆ ಹಂಚಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ಮೊದಲು ಡೀಮ್ಡ್ ಫಾರೆಸ್ಟ್ ಎಂದು ಗುರುತಿಸಿ ಅರಣ್ಯ ಇಲಾಖೆ ವಶದಲ್ಲಿದ್ದ 6 ಲಕ್ಷ ಹೆಕ್ಟೇರ್ ಭೂಮಿ ಈಗ ಕಂದಾಯ ಇಲಾಖೆಗೆ ಹಸ್ತಾಂತರ ವಾಗಲಿದೆ ಎಂದು ಹೇಳಿದರು.
ಇಲಾಖೆಯು ತನ್ನ ಅಗತ್ಯಕ್ಕೆ ಬೇಕಾದ ಭೂಮಿ ಯನ್ನು ಹೊರತುಪಡಿಸಿ ಉಳಿದ ಭೂಮಿಯನ್ನು ರೈತರಿಗೆ ಹಂಚಲಿದೆ. ಈ ಮೂಲಕ ಮೈಸೂರು, ಚಾಮರಾಜನಗರ, ಶಿವಮೊಗ್ಗ ಸಹಿತ ರಾಜ್ಯಾದ್ಯಂತ ಇರುವ ಬಗರ್ ಹುಕುಂ ಸಮಸ್ಯೆಗೆ ಶಾಶ್ವತ ತೆರೆ ಬೀಳಲಿದೆ ಎಂದು ತಿಳಿಸಿದರು.
ಕಂದಾಯ ಇಲಾಖೆಗೆ ಮರಳಿ ಬರುವ ಪೈಕಿ ಎಷ್ಟು ಪ್ರಮಾಣದ ಭೂಮಿ ಸರಕಾರದ ಅಗತ್ಯಕ್ಕೆ ಬೇಕು ಎಂದು ಗುರುತಿಸ ಲಾಗುತ್ತಿದ್ದು, ಆಸ್ಪತ್ರೆ ಸಹಿತ ಸಾರ್ವಜನಿಕ ಸೇವೆಯ ಕಟ್ಟಡಗಳಿಗೆ ಇದು ಬಳಕೆಯಾಗಲಿದೆ ಎಂದರು.
30 ವರ್ಷಗಳ ಗುತ್ತಿಗೆ
ಕೊಡಗು, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ 90 ಸಾವಿರ ಎಕರೆಗೂ ಹೆಚ್ಚು ಭೂಮಿ ಒತ್ತುವರಿ ಯಾಗಿದೆ. ಹೀಗೆ ಒತ್ತುವರಿಯಾದ ಜಮೀನನ್ನು ಒತ್ತುವರಿದಾರರಿಗೇ 30 ವರ್ಷಗಳ ಗುತ್ತಿಗೆ ಆಧಾರದ ಮೇಲೆ ನೀಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
ಕೊಡಗು ಜಿಲ್ಲೆಯಲ್ಲಿ 12 ಸಾವಿರ ಎಕರೆ, ಹಾಸನದಲ್ಲಿ 30 ಸಾವಿರ ಎಕರೆ, ಚಿಕ್ಕಮಗಳೂರು ಜಿಲ್ಲೆಯಲ್ಲಿ 45 ಸಾವಿರ ಎಕರೆ ಭೂಮಿ ಒತ್ತುವರಿ ಯಾಗಿದೆ. ಒತ್ತುವರಿಯಾದ ಭೂಮಿಯಲ್ಲಿ ಕಾಫಿ, ಏಲಕ್ಕಿ ಸಹಿತ ಹಲವು ಬೆಳೆಗಳನ್ನು ಬೆಳೆಯ ಲಾಗುತ್ತಿದೆ. ಈ ಪೈಕಿ ಐದು ಎಕರೆಗಿಂತ ಕಡಿಮೆ ಪ್ರಮಾಣದ ಒತ್ತುವರಿ ಮಾಡಿಕೊಂಡವರ ಸಂಖ್ಯೆ ಶೇ. 90ರಷ್ಟಿದೆ ಎಂದು ಸಚಿವರು ವಿವರಿಸಿದರು.
ಗುತ್ತಿಗೆಗೆ ದರ ನಿಗದಿ
ಒಂದರಿಂದ ಎರಡು ಎಕರೆ ಭೂಮಿಯನ್ನು ಒತ್ತುವರಿ ಮಾಡಿಕೊಂಡವರಿಗೆ ಎಕರೆಗೆ ವಾರ್ಷಿಕ ಒಂದೂವರೆ ಸಾವಿರ ರೂ.ನಿಂದ ಎರಡು ಸಾವಿರ ರೂ. ಗುತ್ತಿಗೆ ಮೊತ್ತ ನಿಗದಿ ಪಡಿಸಲಾಗುವುದು. 3ರಿಂದ 5 ಎಕರೆ ಭೂಮಿಯನ್ನು ಒತ್ತುವರಿ ಮಾಡಿಕೊಂಡವ ರಿಗೆ 2ರಿಂದ ಎರಡೂವರೆ ಸಾವಿರ ರೂ., 5ರಿಂದ 10 ಎಕರೆ ಮೇಲ್ಪಟ್ಟ ಭೂಮಿಯನ್ನು ಒತ್ತುವರಿ ಮಾಡಿಕೊಂಡವರಿಗೆ ಎರಡೂವರೆ ಯಿಂದ 3 ಸಾವಿರ ರೂ. ಗುತ್ತಿಗೆ ದರ ನಿಗದಿ ಪಡಿಸಲಾಗುವುದು ಎಂದರು.
ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒತ್ತುವರಿ ಭೂಮಿ ವಿಚಾರದಲ್ಲಿ ಇದೇ ನಿಯಮವನ್ನು ಅನ್ವಯಿಸಲಾಗುವುದು. ಕೆಲವು ಕಡೆ ಒತ್ತುವರಿದಾರರಿಗೆ ಖರೀದಿಗೆ ಅವಕಾಶ ನೀಡಬೇಕು ಎಂಬ ಬೇಡಿಕೆಯೂ ಇದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು
MUST WATCH
ಹೊಸ ಸೇರ್ಪಡೆ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!