Cinema: ಸರಕಾರ ಚಿತ್ರನಗರಿ ನಿರ್ಮಿಸಬೇಕು: ವಾಣಿಜ್ಯ ಮಂಡಳಿ ಮುಖ್ಯಸ್ಥರ ಆಗ್ರಹ
Team Udayavani, Jan 25, 2024, 12:16 AM IST
ಬೆಂಗಳೂರು: ಕನ್ನಡ ಚಿತ್ರರಂಗದ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಸರಕಾರಕ್ಕೆ ಮನವಿ ಸಲ್ಲಿಸಿದ್ದು, ಆದಷ್ಟು ಬೇಗ ಫಿಲಂ ಸಿಟಿ ನಿರ್ಮಾಣ ಮಾಡಬೇಕು ಎಂದು ಕೋರಿದ್ದೇವೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್.ಎಂ.ಸುರೇಶ್ ಹೇಳಿದ್ದಾರೆ.
ಬುಧವಾರ “ಉದಯವಾಣಿ’ ಕಚೇರಿಯಲ್ಲಿ ನಡೆದ ಸಂವಾದದಲ್ಲಿ ಭಾಗವಹಿಸಿದ ಅವರು, ಕನ್ನಡ ಚಿತ್ರರಂಗದ ಸವಾಲು, ಬೆಳವಣಿಗೆ ಸಹಿತ ಹಲವು ವಿಚಾರಗಳ ಕುರಿತು ಚರ್ಚಿಸಿದರು. “ಕನ್ನಡ ಚಿತ್ರರಂಗಕ್ಕೆ ಮುಖ್ಯವಾಗಿ ಚಿತ್ರನಗರಿಯ ಅಗತ್ಯವಿದೆ. ಪ್ರತಿ ಸರಕಾರಗಳು ಚಿತ್ರನಗರಿಗೆ ಜಾಗ ಘೋಷಣೆ ಮಾಡುತ್ತವೆ. ಆದರೆ ಇದುವರೆಗೆ ಅದು ಕಾರ್ಯರೂಪಕ್ಕೆ ಬಂದಿಲ್ಲ. ಫಿಲಂ ಸಿಟಿ ನಿರ್ಮಾಣವಾಗಬೇಕು ಎಂಬುದು ಚಿತ್ರರಂಗದ ಹಲವು ವರ್ಷಗಳ ಬೇಡಿಕೆ. ಫಿಲಂ ಸಿಟಿ ಎಲ್ಲಾದರೂ ಆಗಲಿ, ಆದರೆ ಆದಷ್ಟು ಬೇಗ ನಿರ್ಮಾಣವಾಗಲಿ. ಇದರಿಂದ ಇಡೀ ಚಿತ್ರೋದ್ಯಮಕ್ಕೇ ಅನುಕೂಲವಾಗುತ್ತದೆ. ಈಗಾಗಲೇ ಮುಖ್ಯಮಂತ್ರಿಯವರಲ್ಲಿ ಕನ್ನಡ ಚಿತ್ರರಂಗಕ್ಕೆ ಅಗತ್ಯವಾಗಿ ಆಗಬೇಕಾದ ಕಾರ್ಯಗಳ ಕುರಿತು ಚರ್ಚಿಸಿದ್ದೇವೆ. ಅವರ ಕಡೆಯಿಂದ ಸಕಾರಾತ್ಮಕ ಪ್ರತಿಕ್ರಿಯೆ ಬಂದಿದೆ. ಹಾಗಾಗಿ, ಈ ಬಾರಿಯ ಬಜೆಟ್ನಲ್ಲಿ ಕನ್ನಡ ಚಿತ್ರರಂಗ ನಿರೀಕ್ಷೆ ಇಟ್ಟಿದೆ’ ಎಂದರು. ಇದರ ಚಲನಚಿತ್ರ ಪ್ರಶಸ್ತಿ, ಸಬ್ಸಿಡಿ ಸಹಿತ ಹಲವು ವಿಚಾರಗಳ ಕುರಿತು ಸರಕಾರದ ಗಮನ ಸೆಳೆದಿರುವುದಾಗಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
MUST WATCH
ಹೊಸ ಸೇರ್ಪಡೆ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ