ಸ್ಮರಣಿಕೆಗಳ ಹರಾಜಿನಲ್ಲಿ ಭಾಗವಹಿಸುವಂತೆ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ
Team Udayavani, Sep 19, 2021, 7:50 PM IST
ನವದೆಹಲಿ:ಪ್ರಧಾನಿ ನರೇಂದ್ರ ಮೋದಿಯವರಿಗೆ ಕಳೆದ ಒಂದು ವರ್ಷದ ಅವಧಿಯಲ್ಲಿ ಬಂದಿರುವ ಸ್ಮರಣಿಕೆ ಮತ್ತು ಉಡುಗೊರೆಗಳ ಹರಾಜು ಪ್ರಕ್ರಿಯೆ ನಡೆಯುತ್ತಿದ್ದು, ಅದರಲ್ಲಿ ಭಾಗವಹಿಸಿ ಎಂದು ಪ್ರಧಾನಿ ಸಾರ್ವಜನಿಕರಿಗೆ ಕರೆ ಕೊಟ್ಟಿದ್ದಾರೆ.
“ನಮ್ಮ ಒಲಿಂಪಿಕ್ಸ್ ಮತ್ತು ಪ್ಯಾರಾಲಿಂಪಿಕ್ಸ್ ಕ್ರೀಡಾಪಟುಗಳು ನನಗೆ ಕೊಟ್ಟಿರುವ ಉಡುಗೊರೆಯೂ ಇ-ಹರಾಜಿನಲ್ಲಿ ಲಭ್ಯವಿದೆ. ಹರಾಜಿನಲ್ಲಿ ಬಂದ ಹಣವನ್ನು ನಮಾಮಿ ಗಂಗೆ ಯೋಜನೆಗೆ ಬಳಸಿಕೊಳ್ಳಲಾಗುವುದು. ಎಲ್ಲರೂ ಹರಾಜಿನಲ್ಲಿ ಭಾಗವಹಿಸಿ ’ಎಂದು ಪ್ರಧಾನಿ ಮೋದಿ ಭಾನುವಾರ ಕರೆ ನೀಡಿದ್ದಾರೆ.
ಸೆ. 17ರಿಂದ https://pmmementos.gov.in/#/ ವೆಬ್ಸೈಟ್ನಲ್ಲಿ ಇ-ಹರಾಜು ಆರಂಭವಾಗಿದ್ದು, ಅದು ಅ.7ರವರೆಗೆ ಮುಂದುವರಿಯಲಿದೆ.
ಇದನ್ನೂ ಓದಿ:ಕಾರು ಖರೀದಿಸಿ ತರುತ್ತಿದ್ದ ವೇಳೆ ಅಗ್ನಿ ಅವಘಡ : ಕಣ್ಣೆದುರೇ ಹೊತ್ತಿ ಉರಿದ ಕಾರು
10 ಕೋಟಿ ರೂ. ಪಟ್ಟಿಯಲ್ಲಿ 12 ವಸ್ತು
ಇ-ಹರಾಜು ಆರಂಭವಾಗಿ ಮೂರೇ ದಿನಗಳಲ್ಲಿ ಕೆಲವು ಸ್ಮರಣಿಕೆ/ಉಡುಗೊರೆಗಳ ಬೆಲೆ 10 ಕೋಟಿ ರೂಪಾಯಿ ತಲುಪಿದೆ. ನೀರಜ್ ಚೋಪ್ರಾ ಅವರ ಜಾವೆಲಿನ್, ಪಿವಿ ಸಿಂಧು ಅವರ ರಾಕೆಟ್, ಭವೀನಾ ಪಟೇಲ್ ಅವರ ಟೀ ಶರ್ಟ್, ಒಲಿಂಪಿಕ್ಸ್ ತಾರೆಗಳು ಆಟೋಗ್ರಾಫ್ ಹಾಕಿರುವ ಶಾಲು ಸೇರಿ ಒಟ್ಟು 12 ವಸ್ತುಗಳ ಬೆಲೆ 10 ಕೋಟಿ ರೂಪಾಯಿಗೆ ತಲುಪಿದೆ. ವಿಶೇಷವೆಂದರೆ ಈ ಎಲ್ಲ ವಸ್ತುಗಳು ಒಲಿಂಪಿಕ್ಸ್ ಮತ್ತು ಪ್ಯಾರಾಲಿಂಪಿಕ್ಸ್ ಕ್ರೀಡಾಪಟುಗಳಿಗೆ ಸಂಬಂಧಿಸಿರುವುದೇ ಆಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
MUST WATCH
ಹೊಸ ಸೇರ್ಪಡೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ