ಹರಾಜಿಗೆ “ಅನರ್ಹ” ಅಸ್ತ್ರ: ಗ್ರಾ.ಪಂ. ಚುನಾವಣೆ: ಬಿಗಿ ಕ್ರಮಕ್ಕೆ ಚುನಾವಣ ಆಯೋಗ ಚಿಂತನೆ


Team Udayavani, Dec 18, 2020, 6:20 AM IST

ಹರಾಜಿಗೆ “ಅನರ್ಹ” ಅಸ್ತ್ರ: ಗ್ರಾ.ಪಂ. ಚುನಾವಣೆ: ಬಿಗಿ ಕ್ರಮಕ್ಕೆ ಚುನಾವಣ ಆಯೋಗ ಚಿಂತನೆ

ಸಾಂದರ್ಭಿಕ ಚಿತ್ರ

ಬೆಂಗಳೂರು: ಗ್ರಾಮ ಪಂಚಾಯತ್‌ ಸ್ಥಾನಗಳಿಗಾಗಿ ಹರಾಜು-ಆಮಿಷಗಳಲ್ಲಿ ತೊಡಗಿಸಿಕೊಂಡಿರುವವರ ವಿರುದ್ಧ ಸಾಕ್ಷ್ಯ ಸಾಬೀತಾದರೆ ಅಂಥವರಿಗೆ “ಅನರ್ಹತೆ’ಯ ಬಿಸಿ ಮುಟ್ಟಿಸಲು ರಾಜ್ಯ ಚುನಾವಣ ಆಯೋಗ ಚಿಂತನೆ ನಡೆಸಿದೆ. ಈ ಸಂಬಂಧ ಆಯೋಗವು ಸರಕಾರ ದೊಂದಿಗೆ ಚರ್ಚೆ ನಡೆಸಿದ್ದು, ಪ್ರಸ್ತಾವನೆ ಸಲ್ಲಿಸಲು ಯೋಚಿಸುತ್ತಿದೆ. ಈ ಪ್ರಸ್ತಾವನೆ ಈ ಚುನಾವಣೆಗೆ ಅಲ್ಲದಿದ್ದರೂ ಮುಂದಿನ ಬಾರಿ ಅನುಕೂಲ ಆಗಬಹುದು ಎಂದು ರಾಜ್ಯ ಚುನಾವಣ ಆಯುಕ್ತ ಡಾ| ಬಿ. ಬಸವರಾಜು ತಿಳಿಸಿದ್ದಾರೆ.

ಗ್ರಾ.ಪಂ. ಸ್ಥಾನಗಳನ್ನು ಬಹಿರಂಗ ಹರಾಜು ಹಾಕು ವುದು, ಆಮಿಷಗಳಿಗೆ ಮಾರಾಟ ಮಾಡಿ ಕೊಳ್ಳುವ ಸಾಕ್ಷ é ಸಿಕ್ಕವರ ವಿರುದ್ಧ ಎಫ್ಐಆರ್‌ ದಾಖಲಿಸಿಕೊಳ್ಳಲಾಗುತ್ತಿದೆ. ಆದರೆ ಇಂತಹ ಪ್ರಕರಣಗಳಲ್ಲಿ “ಅನರ್ಹ’ಗೊಳಿಸಲು ಈಗ ಅವಕಾಶವಿಲ್ಲ. ಆದ್ದರಿಂದ ಹರಾಜು- ಆಮಿಷಗಳಲ್ಲಿ ತೊಡಗಿಸಿಕೊಂಡು ಸಾಕ್ಷ é ಸಾಬೀತಾದರೆ ಅಂಥವರನ್ನು “ಅಸಿಂಧು’ಗೊಳಿಸುವ ಬಗ್ಗೆ ಪ್ರಸ್ತಾವನೆ ಸಲ್ಲಿಸಲು ಚಿಂತನೆ ನಡೆಸಲಾಗಿದೆ ಎಂದವರು ತಿಳಿಸಿದ್ದಾರೆ.

ಎಫ್ಐಆರ್‌ ದಾಖಲಿಸಲು ಸೂಚನೆ
ಅನೇಕ ಕಡೆ ಎಫ್ಐಆರ್‌ ದಾಖಲಿಸಲಾಗಿದೆ ಎಂದು ಬಸವರಾಜು ತಿಳಿಸಿದ್ದಾರೆ. ಚುನಾವಣ ಅಕ್ರಮ ಪ್ರಕರಣ ದಾಖಲಾಗಿ ನ್ಯಾಯಾಲಯದ ಮೆಟ್ಟಿಲೇರಿದರೆ ಪಾರಾಗುವುದು ಸುಲಭವಲ್ಲ. ಅದಕ್ಕಾಗಿ ನಾಮಪತ್ರ ಪರಿಶೀಲನೆ ವೇಳೆ ಇವುಗಳ ಬಗ್ಗೆ ಚುನಾವಣಾಧಿಕಾರಿಗಳು ಕಟ್ಟುನಿಟ್ಟಾಗಿ ಪರಿಶೀಲನೆ ನಡೆಸುವಂತೆ ಸೂಚನೆ ನೀಡ ಲಾಗಿದೆ. ಅವಿರೋಧ ಆಯ್ಕೆಗಳ ಸತ್ಯಾಸತ್ಯತೆ ಪರಿಶೀಲಿಸುವ ಹಂತದಲ್ಲಿ ಬಿಗಿ ಹೆಜ್ಜೆಗಳನ್ನು ಇರಿಸಲಾಗುತ್ತಿದೆ. ಸಾಕ್ಷಿ ಸಿಕ್ಕರೆ ಎಫ್ಐಆರ್‌ ದಾಖಲಿಸಿ ಅಂತಹ ಪ್ರಕರಣಗಳನ್ನು ಪ್ರತ್ಯೇಕ ವಾಗಿ ನಿರ್ವಹಿಸುತ್ತೇವೆ ಎಂದಿದ್ದಾರೆ.

ಮತ ಮಾರಿಕೊಳ್ಳಬಾರದು
ಅವಿರೋಧ ಆಯ್ಕೆ ಹೊಸದಲ್ಲ ಮತ್ತು ಕಾಯ್ದೆಯಲ್ಲಿ ಅದಕ್ಕೆ ಅವಕಾಶವೂ ಇದೆ. ಅವಿರೋಧ ಆಯ್ಕೆ ಒಮ್ಮತದಿಂದ ಆಗಿದ್ದರೆ ಒಳ್ಳೆಯ ಬೆಳವಣಿಗೆ. ಆದರೆ ಇದಕ್ಕಾಗಿ ಆಮಿಷ, ಒತ್ತಡ, ಬೆದರಿಕೆ ಹಾಕುವುದಕ್ಕೆ ಅವಕಾಶವಿಲ್ಲ. ಈ ದಿಶೆಯಲ್ಲಿ ಆಯೋಗ ಕ್ರಮ ಕೈಗೊಳ್ಳುತ್ತಿದೆ ಎಂದು ಬಸವರಾಜು ತಿಳಿಸಿದರು. ಮತದಾರರು ಮತ ಮಾರಾಟ ಮಾಡಿಕೊಳ್ಳಬಾರದು ಎಂದು ಆಯುಕ್ತ ಬಸವರಾಜು ಮನವಿ ಮಾಡಿಕೊಂಡಿದ್ದಾರೆ.
ಎಂಟು ಎಫ್ಐಆರ್‌ ದಾಖಲು ಹರಾಜು, ಆಮಿಷಗಳ ಮೂಲಕ ಅವಿರೋಧವಾಗಿ ಆಯ್ಕೆ ಮಾಡಿರುವ ಬಗ್ಗೆ 8 ಎಫ್ಐಆರ್‌ ದಾಖಲಿಸಿಕೊಳ್ಳಲಾಗಿದೆ.

ರಾಜಕೀಯ ತಡೆ ಸವಾಲು
ಗ್ರಾ.ಪಂ. ಚುನಾವಣೆ ಪಕ್ಷ ರಹಿತ. ಈಗಿನ ರಾಜಕೀಯ ಸನ್ನಿವೇಶದಲ್ಲಿ ಹಳ್ಳಿ-ಹಳ್ಳಿಗಳಲ್ಲಿ, ಮನೆ-ಮನೆಗಳಲ್ಲಿ ರಾಜಕಾರಣ ಬಂದಿದೆ. ರಾಜಕೀಯ ಪಕ್ಷಗಳು ವ್ಯವಸ್ಥೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತವೆ. ಇದನ್ನು ತಡೆಯುವುದು ದೊಡ್ಡ ಸವಾಲು. ಆಯೋಗದಿಂದ ಮಾತ್ರ ಇದನ್ನು ಸರಿಪಡಿಸಲು ಸಾಧ್ಯವಿಲ್ಲ. ಜನರ ಸಹಕಾರ ಬೇಕು ಎಂಬುದು ಆಯುಕ್ತರ ಅಭಿಪ್ರಾಯ.

ವೆಚ್ಚಕ್ಕೆ ಮಿತಿ ಇಲ್ಲ
ಗ್ರಾ.ಪಂ. ಚುನಾವಣೆಯಲ್ಲಿ ಅಭ್ಯರ್ಥಿಗಳ ಚುನಾವಣ ವೆಚ್ಚಕ್ಕೆ ಮಿತಿ ಇಲ್ಲ. ಗ್ರಾ.ಪಂ. ಚುನಾವಣೆ ಅತ್ಯಂತ ತಳಹಂತದ್ದು. ಅದಕ್ಕೆ ದೊಡ್ಡ ಮಟ್ಟದ ಭಾರ ಹಾಕಿದರೆ ಚುನಾವಣೆ ನಡೆಯುವುದೇ ಇಲ್ಲ. ಇದರಿಂದ ಅರ್ಹರು ಹಿಂದೇಟು ಹಾಕುವ ಅಪಾಯವಿರುತ್ತದೆ ಎಂದು ಬಸವರಾಜು ಹೇಳಿದರು.
ಚುನಾವಣ ಸಿದ್ಧತೆಗಳು ಆರಂಭವಾದ ದಿನದಿಂದ ಆಡಳಿತ ಯಂತ್ರ ಆಯೋಗಕ್ಕೆ ಪೂರ್ಣ ಸಹಕಾರ ನೀಡುತ್ತಿದೆ. ಪ್ರತೀ ಜಿಲ್ಲೆಯಲ್ಲೂ ನೆರವು ಸಿಗುತ್ತಿದೆ ಎಂದರು.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.