ಸುದೀರ್ಘ 20 ವರ್ಷ ಸೇವೆ ಸಲ್ಲಿಸಿ ನಿವೃತ್ತಿಯಾದ ಯೋಧನಿಗೆ ಹುಟ್ಟೂರಲ್ಲಿ ಭವ್ಯ ಸ್ವಾಗತ
Team Udayavani, Feb 5, 2022, 7:54 PM IST
ಸವದತ್ತಿ : ಸುದೀರ್ಘ 20 ವರ್ಷ ಸೈನ್ಯದಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ಮರಳಿ ಸ್ವಗ್ರಾಮಕ್ಕೆ ಆಗಮಿಸಿದ ಯೋಧ ತುಕಾರಾಮ್ ಗಿರಿಯಪ್ಪ ಮುರಗೋಡರನ್ನು ತಾಲೂಕಿನ ಹಲಕಿ ಗ್ರಾಮದ ಜನತೆ ಮತ್ತು ಕರ್ನಾಟಕ ಪೊಲೀಸ್ ಮಹಾ ಸಂಘದಿಂದ ಸ್ವಾಗತಿಸಿ ಸನ್ಮಾನಿಸಲಾಯಿತು.
ಸಂಘದ ಆಡಳಿತ ಅಧಿಕಾರಿ ಎಮ್.ಎಚ್ ನದಾಫ್ ಮಾತನಾಡಿ, ಜನ್ಮ ಭೂಮಿಯನ್ನು ಯಾವುದೇ ಪ್ರತಿಫಲ ಬಯಸದೆ ತನ್ನ ಜೀವದ ಹಂಗು ತೊರೆದು ದೇಶವನ್ನು ಕಾಯುವ ಸೈನಿಕ ಎಲ್ಲರಿಗಿಂತ ದೊಡ್ಡವನು. ವೀರಯೋಧ ಮತ್ತು ಅನ್ನದಾತರಿಗೆ ನಾವು ನೀಡುವ ಗೌರವ ಸಮರ್ಪಣೆ ಇಡೀ ಜಗತ್ತಿಗೆ ಮಾದರಿಯಾಗಬೇಕು.
ತಮ್ಮ ಜೀವವನ್ನೇ ಪಣಕ್ಕಿಟ್ಟು ಹೋರಾಡುವ ವೀರರನ್ನು ಪಡೆದ ಭಾರತ ಮಾತೆ ನಿಜಕ್ಕೂ ಧನ್ಯಳು. ನಾಡಿನ ಪ್ರತಿಯೊಂದು ಗ್ರಾಮದಲ್ಲಿ ಈ ತೆರನಾದ ಯೋಧರ ಸ್ವಾಗತ ಸಂಭ್ರಮದಂತಿರಬೇಕು. ಯುವಕರ ಚಿಂತನೆಗಳು ಜಗತ್ತಿನ ಮುಂದೆ ಮಾದರಿಯಾಗಬೇಕು ನಮ್ಮ ದೇಶದ ಶಕ್ತಿ ಇಂದಿನ ಯುವ ಜನಾಂಗ ದೇಶ ಸೇವೆಗೆ ಕಂಕಣ ಬದ್ಧರಾಗಿರಬೇಕು. ನಮ್ಮ ಸಂಸ್ಕೃತಿ ಉಳಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕೆಂದರು.
ಯೋಧ ತುಕಾರಾಮ್ ಮಾತನಾಡಿ, ಈ ಸನ್ಮಾನ ಗೌರವಗಳೆಲ್ಲವೂ ತಂದೆ-ತಾಯಿ ಹಾಗೂ ದೇಶ ಸೇವೆ ಮಾಡುತ್ತಿರುವ ಎಲ್ಲ ಸೈನಿಕರಿಗೆ ಅರ್ಪಣೆ. ತಾಲೂಕಿನ ಯುವಕರಿಗೆ ಉಚಿತ ಸೇನಾ ತರಬೇತಿ ಹಾಗೂ ಬಡ ಮಕ್ಕಳ ಶಿಕ್ಷಣ ವೆಚ್ಚ ವನ್ನು ಭರಿಸುವುದಾಗಿ ಪ್ರಮಾಣ ಮಾಡಿದರು.
ಇದನ್ನೂ ಓದಿ : ಕುಳಗೇರಿ ಕ್ರಾಸ್: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಇಬ್ರಾಹಿಮ್ ಸುತಾರ ಅವರಿಗೆ ನುಡಿ ನಮನ
ಈ ವೇಳೆ ಕರ್ನಾಟಕ ಪೊಲೀಸ್ ಮಹಾ ಸಂಘದ ವಿ. ಶಶಿಧರ್ ನೇತೃತ್ವದ ಕರ್ನಾಟಕ ಪೊಲೀಸ್ ಮಹಾ ಸಂಘದ ಪರವಾಗಿ ನಿವೃತ್ತ ಯೋಧ ತುಕಾರಾಮ್ ಅವರಿಗೆ ಸನ್ಮಾನ ಮಾಡಿ ಗೌರವ ವಂದನೆ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ