ಬೆಚ್ಚಗೆ ಕುಳಿತವರನ್ನು ಬೆಚ್ಚಿ ಬೀಳಿಸುವ ಗ್ರೂಫಿ


Team Udayavani, Aug 21, 2021, 11:37 AM IST

ಬೆಚ್ಚಗೆ ಕುಳಿತವರನ್ನು ಬೆಚ್ಚಿ ಬೀಳಿಸುವ ಗ್ರೂಫಿ

ನಾಯಕ ಕಾರ್ತಿಕ್‌ ರಾಜ್ಯದ ಪ್ರತಿಷ್ಟಿತ ಪತ್ರಿಕೆಯೊಂದರ ಪೋಟೋ ಜರ್ನಲಿಸ್ಟ್‌. ಜೀವವೈವಿದ್ಯತೆಗಳ ವಿಶೇಷ ವರದಿಯೊಂದಕ್ಕಾಗಿ ಪಶ್ಚಿಮ ಘಟ್ಟದ ದಟ್ಟ ಕಾನನದೊಳಗೆ ಪ್ರವೇಶಿಸುವ ನಾಯಕ, ಅಲ್ಲಿಯೇ ಇದ್ದ ಜಂಗಲ್‌ ಲಾಡ್ಜ್ ನಲ್ಲಿ ಉಳಿದುಕೊಂಡು ತನ್ನ ಕ್ಯಾಮೆರಾದಲ್ಲಿ ಪ್ರಕೃತಿ ಸೌಂದರ್ಯವನ್ನು ಸೆರೆ ಹಿಡಿಯುವ ಕೆಲಸದಲ್ಲಿ ನಿರತನಾಗುತ್ತಾನೆ.

ಹೀಗಿರುವಾಗ ಅದೇ ಕಾಡಿನಲ್ಲಿ ನಾಯಕನಿಗೆ ವಿಭಿನ್ನ ಸ್ವಭಾವದ ಐವರು ಅಪರಿಚಿತರು ಪರಿಚಯವಾಗುತ್ತಾರೆ. ನಂತರ ಈ ಪರಿಚಯ ನಿಧಾನವಾಗಿ ಸ್ನೇಹಕ್ಕೆ ತಿರುಗುತ್ತದೆ.ಈಐವರ ಜೊತೆ ಖುಷಿಯಿಂದ ದಿನ ಕಳೆಯುವುದರೊಳಗೆ, ಸಲೀಸಾಗಿ ಸಾಗುತ್ತಿದ್ದ ಚಿತ್ರದ ಕಥೆಗೆ ಅಲ್ಲೊಂದು ಅನಿರೀಕ್ಷಿತ ತಿರುವು ಸಿಗುತ್ತದೆ. ಇಂಟರ್ವಲ್‌ ವೇಳೆಗೆ ಆ ಐವರ ಜೊತೆಗಿದ್ದ ಹೀರೋ ಅವರ ನಿಜ ಮುಖವನ್ನು ನೋಡಿ ಬೆಚ್ಚಿ ಬೀಳುತ್ತಾನೆ! ಫ್ರೆಂಡ್‌ ಶಿಪ್‌, ಲವ್‌ ಟ್ರ್ಯಾಕ್‌ನಲ್ಲಿ ಸಾಗುತ್ತಿದ್ದ ಸಿನಿಮಾ ಹಾರರ್‌ ಟಚ್‌
ತೆಗೆದುಕೊಳ್ಳುತ್ತದೆ. ಅದು ಯಾಕೆ? ಹೇಗೆ? ಅನ್ನೋದಕ್ಕೆ ಮಧ್ಯಂತರದ ನಂತರ ಉತ್ತರ ಸಿಗುತ್ತದೆ. ಇದು ಈ ವಾರ ತೆರೆಗೆ ಬಂದಿರುವ “ಗ್ರೂಫಿ’ ಚಿತ್ರದ ಕಥೆಯ ಸಣ್ಣ ವಿವರಣೆ. ಕಥೆ ಮುಂದೇನಾಗುತ್ತದೆ ಅನ್ನೋ ಕುತೂಹಲವಿದ್ದರೆ, ಅದನ್ನ ನೀವು ತೆರೆಮೇಲೆ ನೋಡುವುದೇ ಒಳಿತು.

ಇದನ್ನೂ ಓದಿ :ಸರಕಾರಿ ಜಾಗ ಒತ್ತುವರಿ ಮಾಡಿ ಕಟ್ಟಡ ನಿರ್ಮಾಣ : ಅಧಿಕಾರಿಗಳಿಂದ ಕಾಮಗಾರಿಗೆ ತಡೆ

ಇಷ್ಟೆಲ್ಲ ಹೇಳಿದ ಮೇಲೆ “ಗ್ರೂಫಿ’ ಹಾರರ್‌ ಕಂ ಸಸ್ಪೆನ್ಸ್‌-ಥ್ರಿಲ್ಲರ್‌ ಸಿನಿಮಾ ಅನ್ನೋದು ನಿಮಗೆ ಗೊತ್ತಾಗಿರಬಹುದು. ಇಂದಿನ ಯುವ ಜನತೆಯ ಜೀವಕ್ಕೆ ಮಾರಕವಾಗುತ್ತಿರುವ ಸೆಲ್ಫಿ ಗೀಳಿನ ಎಳೆಯನ್ನ ಇಟ್ಟುಕೊಂಡು ಅದಕ್ಕೆ ಒಂದಿಷ್ಟು ‌ಸಿನಿಮ್ಯಾಟಿಕ್‌ ಅಂಶಗಳನ್ನು ಸೇರಿಸಿ ನಿರ್ದೇಶಕ ಡಿ. ರವಿ ಅರ್ಜುನ್‌ “ಗ್ರೂಫಿ’ಯನ್ನು ತೆರೆಗೆ ತಂದಿದ್ದಾರೆ. ಚಿತ್ರದ ‌ಮೊದಲಾರ್ಧ ಸ್ವಲ್ಪ
ನಿಧಾನವಾಗಿ ‌ ಸಾಗಿದರೂ, ಮಧ್ಯಂತರದಲ್ಲಿ ಕಥೆಗೆ ಸಿಗುವ ಅನಿರೀಕ್ಷಿತ ತಿರುವು ಪ್ರೇಕ್ಷಕರನ್ನ ಚಿತ್ರದ ದ್ವಿತಿಯಾರ್ಧವನ್ನು ನೋಡುವಂತೆ ಮಾಡುತ್ತದೆ.

ಚಿತ್ರಕಥೆ, ಸಂಭಾಷಣೆ ಮತ್ತು ನಿರೂಪಣೆ ಕೊಂಚ ಬಿಗಿಯಾಗಿದ್ದರೆ, “ಗ್ರೂಫಿ’ ಪ್ರೇಕ್ಷಕರಿಗೆ ಇನ್ನಷ್ಟು ‌ಪರಿಣಾಮಕಾರಿಯಾಗಿ ಮುಟ್ಟುವ ಸಾಧ್ಯತೆಗಳಿದ್ದವು.

ಇನ್ನು ಚಿತ್ರದ ಬಹುತೇಕ ಕಲಾವಿದರು‌ ಹೊಸಬರಾದರೂ, ಬಹುತೇಕ ಎಲ್ಲರದ್ದೂ ಅಚ್ಚುಕಟು ‌ r ಅಭಿನಯ. ಪೋಟೋ ಜರ್ನಲಿಸ್ಟ್‌ ಪಾತ್ರದಲ್ಲಿ ನಾಯಕ ಆರ್ಯನ್‌, ನಾಯಕಿ ಪದ್ಮಶ್ರೀ ಜೈನ್‌ ನೋಡುಗರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಉಳಿದಂತೆ ನವಪ್ರತಿಭೆಗಳಾದ ಗಗನ್‌, ಉಮಾ ಮಯೂರಿ, ಸಂಧ್ಯಾ, ಪ್ರಜ್ವಲ್‌ ತಮ್ಮ ಪಾತ್ರಗಳನ್ನು ಚೆನ್ನಾಗಿ
ಅಭಿನಯಿಸಿದ್ದಾರೆ. ತಾಂತ್ರಿಕವಾಗಿ ಚಿತ್ರದ ಎರಡು ಹೈಲೈಟ್ ಅಂಶಗಳೆಂದರೆ, ಚಿತ್ರದ ‌ಸಂಗೀತ ಮತ್ತು ಛಾಯಾಗ್ರಹಣ. ವಿಜೇತ್‌ ಕೃಷ್ಣ ಸಂಗೀತ ಕೇಳುಗರ ಕಿವಿಯಲ್ಲಿ ಗುನುಗುಡುವಂತಿದ್ದು, ಛಾಯಾಗ್ರಹಣ ಪ್ರಕೃತಿ ಸೌಂದರ್ಯವನ್ನು ಕಣ್ಣಿಗೆ ಕಟ್ಟುವಂತೆ ‌ ಕಟ್ಟಿಕೊಟ್ಟಿದೆ. ಸಂಕಲನ ಕಾರ್ಯ ಅಲ್ಲಲ್ಲಿ ಸ್ವಲ್ಪ ಮಂದವಾದಂತೆ ಕಾಣುತ್ತದೆ.

ಕೆಲವು ಸಣ್ಣಪುಟ್ಟಲೋಪಗಳನ್ನುಬದಿಗಿಟ್ಟು ನೋಡುವುದಾದರೆ, “ಗ್ರೂಫಿ’ ಒಂದು ಸಾಮಾಜಿಕ ಸಂದೇಶವನ್ನು ಇಟ್ಟುಕೊಂಡು, ಪ್ರೇಕ್ಷಕರ ಅಭಿರುಚಿಗೆ ತಕ್ಕಂತೆ ಮಾಡಿದ ಚಿತ್ರ ಎನ್ನಬಹುದು. ಬೆಚ್ಚಗೆಕೂತ ಪ್ರೇಕ್ಷಕರನ್ನು ಅಲ್ಲಲ್ಲಿ ಬೆಚ್ಚಿ ಬೀಳಿಸುವ “ಗ್ರೂಫಿ’ಯನ್ನ ಒಮ್ಮೆ ನೋಡಿಬರಲು ಅಡ್ಡಿಯಿಲ್ಲ.

– ಜಿ.ಎಸ್‌.ಕೆ ಸುಧನ್‌

ಟಾಪ್ ನ್ಯೂಸ್

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.