ದಿನಪತ್ರಿಕೆಗಳು, ಹಾಲು ವಿತರಕರಿಗೆ ಗುಂಪು ವಿಮೆ
Team Udayavani, Apr 21, 2020, 5:47 AM IST
ಸಾಂದರ್ಭಿಕ ಚಿತ್ರ..
ಬೆಂಗಳೂರು: ದಿನಪತ್ರಿಕೆಗಳು ಮತ್ತು ಹಾಲು ವಿತರಿಸುವವರಿಗೆ “ಗುಂಪು ಆರೋಗ್ಯ ವಿಮೆ’ ಭಾಗ್ಯ ಸಿಕ್ಕಿದೆ. ದಿನಪತ್ರಿಕೆ ಮತ್ತು ಹಾಲು ವಿತರಿಸುವ ಹುಡುಗರಿಗೆ ಈ ಯೋಜನೆ ಇರಲಿದ್ದು 70 ಲಕ್ಷ ರೂ. ಮೀಸಲಿಡಲಾಗಿದೆ ಎಂದು ಬಿಬಿಎಂಪಿ ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷ ಎಲ್. ಶ್ರೀನಿವಾಸ್ ಹೇಳಿದರು.
ಕನ್ನಡ ಪತ್ರಿಕೋದ್ಯಮ ಉಳಿಸಿ ಬೆಳೆಸುವ ಉದ್ದೇಶದಿಂದ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಸಾರವಾಗುವ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳು, ದಿನಪತ್ರಿಕೆ, ವಾರಪತ್ರಿಕೆ, ಪಾಕ್ಷಿಕ ಪತ್ರಿಕೆಗಳನ್ನು ಜನರಿಗೆ ತಲುಪಿಸಲು ಹಾಗೂ ಅವುಗಳನ್ನು ಉತ್ತೇಜಿಸಲು ಪ್ರತಿ ವಾರ್ಡ್ನ ಆಯ್ದ ಸ್ಥಳಗಳಲ್ಲಿ ಒಂದು ಮಳಿಗೆ ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಇದಕ್ಕಾಗಿ 1 ಕೋಟಿ ರೂ. ಮೀಸಲಿಡಲಾಗಿದೆ.
ಮುದ್ರಣ ಮತ್ತು ದೃಶ್ಯ ಮಾಧ್ಯಮಗಳ ಪತ್ರಕರ್ತರಿಗೆ ಆರೋಗ್ಯ ದೃಷ್ಟಿಯಿಂದ ನೆರವಾಗಲು 15 ಲಕ್ಷ ರೂ. ಅನುದಾನದಲ್ಲಿ
“ಅಪಘಾತ ವಿಮೆ’ ಜಾರಿಗೆ ತರಲಾಗುವುದು. ಅದೇ ರೀತಿ ಪಾಲಿಕೆ ಮಾಹಿತಿ ವರದಿ ಮಾಡುವ ಮಾಧ್ಯಮ ವರದಿಗಾರರಿಗೆ ವೈದ್ಯಕೀಯ ಚಿಕಿತ್ಸೆಗಾಗಿ ಮೇಯರ್ ವಿವೇಚನೆ ಅಡಿ ಅನುದಾನ ನೀಡಲು 1 ಕೋಟಿ ರೂ. ಅನುದಾನ ಒದಗಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್