ಗ್ರಾಮೀಣ ಭಾಗದಲ್ಲಿ ಬೆಳೆಗಾರರೇ ಈಗ ವ್ಯಾಪಾರಿಗಳು
ತೋಟದಿಂದ ನೇರ ಗ್ರಾಹಕರಿಗೆ ತಾಜಾ ತರಕಾರಿ ಪೂರೈಕೆ ; ಕಡಿಮೆ ಬೆಲೆಯಲ್ಲಿ ಮಾರಾಟ
Team Udayavani, Apr 20, 2020, 5:45 AM IST
ಕುಂದಾಪುರ: ಕೋವಿಡ್ 19 ಹಿನ್ನೆಲೆಯಲ್ಲಿ ಲಾಕ್ಡೌನ್ನಿಂದಾಗಿ ಮಾರುಕಟ್ಟೆ, ಕೆಲವು ಅಂಗಡಿಗಳು ಬಂದ್ ಆಗಿದೆ. ಇದರಿಂದ ರೈತರು ತಾವು ಬೆಳೆದ ತರಕಾರಿ -ಹಣ್ಣುಗಳಿಗೆ ಸರಿಯಾದ ಮಾರುಕಟ್ಟೆ ವ್ಯವಸ್ಥೆ ಇಲ್ಲದಾಗಿದೆ. ಇದನ್ನು ಅರಿತ ರೈತರೇ ಸ್ವತಃ ತಾವು ಬೆಳೆದ ತರಕಾರಿ, ಹಣ್ಣುಗಳನ್ನು ಮಾರಾಟ ಮಾಡುತ್ತಿದ್ದಾರೆ.
ಕುಂದಾಪುರ ಹಾಗೂ ಬೈಂದೂರು ತಾಲೂಕಿನ ಹಳ್ಳಿಹೊಳೆ, ಕಮಲಶಿಲೆ, ಅಮಾಸೆಬೈಲು, ಮಡಾಮಕ್ಕಿ, ಮತ್ತಿತರ ಕಡೆಗಳಲ್ಲಿ ಈ ಸಮಯದಲ್ಲಿ ಸೌತೆಕಾಯಿ, ಬಸಳೆ, ಅಲಸಂಡೆ, ಬೆಂಡೆಕಾಯಿ, ಬಾಳೆಹಣ್ಣು, ಪಪ್ಪಾಯಿ ಮತ್ತಿತರ ಊರ ಹಣ್ಣು – ತರಕಾರಿಗಳನ್ನು ಹೆಚ್ಚಾಗಿ ಬೆಳೆಯುತ್ತಾರೆ.
ಆದರೆ ಈಗ ಕುಂದಾಪುರ, ಸಿದ್ದಾಪುರ, ಗೋಳಿಯಂಗಡಿ ಮತ್ತಿತರ ಕಡೆಗಳಲ್ಲಿ ಪ್ರತಿ ವಾರ ನಡೆಯುವ ವಾರದ ಸಂತೆ ಇಲ್ಲದಿರುವ ಕಾರಣ ತರಕಾರಿ, ಹಣ್ಣುಗಳನ್ನು ಮಾರಾಟ ಮಾಡುವುದೇ ರೈತರಿಗೆ ಸಮಸ್ಯೆಯಾಗುತ್ತಿತ್ತು. ಈಗ ಎಪಿಎಂಸಿಗೆ ಒಯ್ದರೂ ಮಾರಾಟ ವಾಗುವ ಭರವಸೆ ಇಲ್ಲ. ಅಲ್ಲಿ ನಿರೀಕ್ಷಿತ ಬೆಲೆಯೂ ಸಿಗುವ ಸಾಧ್ಯತೆ ಕಡಿಮೆ. ಇದಕ್ಕೀಗ ಕೃಷಿಕರೇ ಪರಿಹಾರ ಕಂಡುಕೊಂಡಿದ್ದು, ತಮ್ಮ ಊರು ಗಳಲ್ಲಿರುವ ಸಣ್ಣ- ಸಣ್ಣ ಪೇಟೆಗೆ ಬಂದು ಕೆಲವರು ತರಕಾರಿ, ಹಣ್ಣುಗಳನ್ನು ಮಾರಿದರೆ, ರಸ್ತೆ ಬದಿಯಲ್ಲಿ ಮನೆ ಯಿರುವ ಕೆಲವರು ಅಲ್ಲೇ ಮಾರಾಟ ಮಾಡುತ್ತಿದ್ದಾರೆ.
ಕಡಿಮೆ ಬೆಲೆ
ಸಾಮಾನ್ಯವಾಗಿ ರೈತರು ತರಕಾರಿಗಳನ್ನು ಸಂತೆಗೆ ಅಥವಾ ಅಂಗಡಿಗಳಿಗೆ ತಂದು ಕಡಿಮೆ ಬೆಲೆ ಪಡೆಯುತ್ತಿದ್ದರು. ಆದರೆ ಈಗ ಅವರೇ ಇಂತಿಷ್ಟು ದರವನ್ನು ನಿಗದಿಪಡಿಸಿ, ಮಾರಾಟ ಮಾಡುತ್ತಿದ್ದಾರೆ. ಇದರಿಂದ ಬೆಳೆಗಾರರಿಗೂ ಅನುಕೂಲ, ಗ್ರಾಹಕರಿಗೂ ಕಡಿಮೆ ಬೆಲೆಯಲ್ಲಿ ತಾಜಾ ತರಕಾರಿ ಸಿಗುವಂತಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ
Udupi; ಮಸ್ಟರಿಂಗ್ ಕೇಂದ್ರದಲ್ಲಿ ಸಕಲ ತಯಾರಿ
ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ