ಆನ್‌ಲೈನ್‌ ಗೇಮಿಂಗ್‌ಗೆ GST


Team Udayavani, Aug 1, 2023, 11:16 PM IST

ONLINE GAMES

ಬೆಂಗಳೂರು: ಆನ್‌ಲೈನ್‌ ಬೆಟ್ಟಿಂಗ್‌ ಗೇಮ್‌ಗಳಿಗೆ ರಾಜ್ಯ ಜಿಎಸ್‌ಟಿ ತೆರಿಗೆ ವಿಧಿಸುವಂತೆ ಜಿಎಸ್‌ಟಿ ಕೌನ್ಸಿಲ್‌ ಸಭೆಯಲ್ಲಿ ರಾಜ್ಯ ಸರಕಾರ ಒತ್ತಾಯಿಸಲು ನಿರ್ಧರಿಸಿದೆ.
ಕಂದಾಯ ಸಚಿವ ಹಾಗೂ ಜಿಎಸ್‌ಟಿ ಕೌನ್ಸಿಲ್‌ ಸದಸ್ಯ ಕೃಷ್ಣ ಬೈರೇಗೌಡ ಸುದ್ದಿಗಾರರಿಗೆ ಮಂಗಳವಾರ ಈ ವಿಷಯ ತಿಳಿಸಿದ್ದು, ಶೇ. 28ರಷ್ಟು ತೆರಿಗೆ ವಿಧಿಸುವ ಸಾಧ್ಯತೆ ಇದೆ. ಎರಡು-ಮೂರು ವಿಧಾನದ ಮೂಲಕ ತೆರಿಗೆ ವಿಧಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ ಎಂದು ಹೇಳಿದರು.

ಆನ್‌ಲೈನ್‌ ಬೆಟ್ಟಿಂಗ್‌ ಗೇಮ್‌ಗಳಿಂದ ಯುವಕರು ಬಲಿಯಾಗುತ್ತಿದ್ದಾರೆ. ಎಷ್ಟೋ ಕುಟುಂಬಗಳು ಬೀದಿಗೆ ಬಂದಿವೆ. ಕೆಲವರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಗಳು ನಮ್ಮ ಗಮನಕ್ಕೆ ಇವೆ. ಹೀಗಾಗಿ ಇಂತಹ ಗೇಮ್‌ ಗಳಿಗೆ ಟ್ಯಾಕ್ಸ್‌ ವಿಧಿಸುವ ಬಗ್ಗೆ ಚರ್ಚಿಸುತ್ತಿದ್ದೇವೆ. ನಾಳೆ ನಡೆಯುವ ಜಿಎಸ್‌ಟಿ ಸಭೆಯಲ್ಲಿ ವಿವರಣೆ ಕೊಡುತ್ತೇವೆ. ಕಡಿಮೆ ಟ್ಯಾಕ್ಸ್‌ ಹಾಕುವುದರಿಂದ ಉತ್ತೇಜನ ಕೊಟ್ಟಂತೆ ಆಗುತ್ತದೆ. ನಮ್ಮ ರಾಜ್ಯದ ನಿಲುವು ರಾಷ್ಟಕ್ಕೂ ಕೂಡ ಒಳ್ಳೆಯದಾಗುತ್ತದೆ ಎಂದರು.
ಅಧಿಕಾರದ ಗುಂಗಿನಲ್ಲೆ ಸಂಘಟನೆ ಮರೆಯಬಾರದು

ದಿಲ್ಲಿಯಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ಸಭೆ ಕರೆದಿದೆ. ಲೋಕಸಭಾ ಚುನಾವಣೆ ಸಂಬಂಧ ಸಭೆ ಇದೆ. ಒಂಬತ್ತು ವರ್ಷಗಳಲ್ಲಿ ಬಿಜೆಪಿ ಸರಕಾರದಿಂದ ಅಭಿವೃದ್ಧಿ ಆಗಿಲ್ಲ. ಕೇಂದ್ರದಲ್ಲಿ ಅಭಿವೃದ್ಧಿ ಮಾಡುವ ಸರಕಾರ ಬರಬೇಕು. ಐಎನ್‌ಡಿಐಎ ಮೈತ್ರಿಕೂಟಕ್ಕೆ ಒಳ್ಳೆಯ ಫ‌ಲಿತಾಂಶ ಬರಬೇಕು. ಹೀಗಾಗಿ ನಾವು ಈಗಿನಿಂದಲೇ ತಂತ್ರಗಾರಿಕೆ ಮಾಡಬೇಕು. ನಾವು ಎಚ್ಚರ ತಪ್ಪುವಂತಿಲ್ಲ. ಮುಂದಿನ ಚುನಾವಣೆ ಗೆಲ್ಲುವ ಬಗ್ಗೆ ಗಂಭೀರ ಚರ್ಚೆ ನಡೆಸಿ ಗೆಲ್ಲುವ ಅಭ್ಯರ್ಥಿ ಹುಡುಕಬೇಕಿದೆ ಎಂದು ಅಭಿಪ್ರಾಯಪಟ್ಟರು.

ಎಐಸಿಸಿ ರಿಪೋರ್ಟ್‌ ಕಾರ್ಡ್‌ ಕೇಳುವುದಿಲ್ಲ

ಅಧಿಕಾರದ ಗುಂಗಿನಲ್ಲಿ ಸಂಘಟನೆ ಮರೆಯಬಾರದು. ಗೆಲುವು ಪಡೆಯಲು ಏನೆಲ್ಲಾ ತಂತ್ರಗಾರಿಕೆ ಮಾಡಬೇಕು ಅನ್ನೋ ಬಗ್ಗೆ ಚರ್ಚೆ ನಡೆಸುತ್ತೇವೆ. ಬಿ.ಕೆ. ಹರಿಪ್ರಸಾದ್‌ ಅವರ ಹೇಳಿಕೆ ಹಿನ್ನೆಲೆಯಲ್ಲಿ ಈ ಸಭೆ ನಡೆಸುತ್ತಿಲ್ಲ. ಇದು ಕೇವಲ ಚುನಾವಣ ತಯಾರಿ ಸಭೆ. ಪಕ್ಷ ಅಂದ ಮೇಲೆ ಅಭಿಪ್ರಾಯ ಭೇದ ಇರುತ್ತದೆ. ಕುಟುಂಬದಲ್ಲಿಯೇ ಭಿನ್ನ ಅಭಿಪ್ರಾಯಗಳು ಇರುತ್ತವೆ. ಇದನ್ನು ಬಗೆಹರಿಸಲು ಹೈಕಮಾಂಡ್‌ ಮಾತುಕತೆ ನಡೆಸಿದೆ.

ಹಲವು ರಾಜ್ಯಗಳಲ್ಲಿ ಇಂತಹ ಸಮಸ್ಯೆ ಇದ್ದಾಗ ಹೈಕಮಾಂಡ್‌ ಯಶಸ್ವಿಯಾಗಿ ನಿಭಾಯಿಸಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವೇ ವಿಭಾಗವಾಯಿತು ಎಂಬಂತೆ ಚರ್ಚೆ ನಡೆಯಿತು. ಆದರೆ ಒಟ್ಟಾಗಿ ಹೋಗಿ ಗೆದ್ದು ಬಂದಿದ್ದೇವೆ. ಲೋಕಸಭೆಯನ್ನೂ ಒಟ್ಟಾಗಿ ಎದುರಿಸುತ್ತೇವೆ. ಸಚಿವರ ರಿಪೋರ್ಟ್‌ ಕಾರ್ಡ್‌ ಕೇಳಿರುವ ಬಗ್ಗೆ ಮಾಹಿತಿ ಇಲ್ಲ. ಅದು ಮುಖ್ಯಮಂತ್ರಿಗಳ ಜವಾಬ್ದಾರಿ. ಎಐಸಿಸಿ ಸದ್ಯಕ್ಕೆ ರಿಪೋರ್ಟ್‌ ಕಾರ್ಡ್‌ ಕೇಳುವುದಿಲ್ಲ ಎಂದು ಕೃಷ್ಣ ಬೈರೇಗೌಡ ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.