“ಶಕ್ತಿ”ಗೆ ಶತಕೋಟಿ ಸಂಭ್ರಮ: ಗ್ಯಾರಂಟಿ ಯೋಜನೆಗಳು ಆರ್ಥಿಕ ಬೆಳವಣಿಗೆಗೆ ದಿಕ್ಸೂಚಿ- ಸಿಎಂ


Team Udayavani, Nov 24, 2023, 10:35 PM IST

SIDDARAMAYYA IMP 2

ಬೆಂಗಳೂರು: ಗ್ಯಾರಂಟಿಗಳಿಂದ ರಾಜ್ಯ ದಿವಾಳಿ ಆಗುವುದಿಲ್ಲ; ಬದಲಿಗೆ ಆರ್ಥಿಕ ಬೆಳವಣಿಗೆಗೆ ದಿಕ್ಸೂಚಿ ಆಗಲಿದೆ. ಇದಕ್ಕೆ ಅಲ್ಪಾವಧಿಯಲ್ಲೇ ಶತಕೋಟಿ ಮಹಿಳೆಯರು ಪ್ರಯಾಣಿಸುವ ಮೂಲಕ ಯಶಸ್ವಿಯಾಗಿ ನಡೆಯುತ್ತಿರುವ “ಶಕ್ತಿ’ ಯೋಜನೆ ಸಾಕ್ಷಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಶುಕ್ರವಾರ “ಶಕ್ತಿ’ ಗ್ಯಾರಂಟಿಗೆ ಶತಕೋಟಿ ಸಂಭ್ರಮ ಮತ್ತು ಅಪಘಾತ ರಹಿತ ಚಾಲಕರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಗ್ಯಾರಂಟಿಗಳಿಂದ ರಾಜ್ಯ ದಿವಾಳಿ ಆಗಲಿದೆ ಅಂತ ಪ್ರಧಾನಿ ನರೇಂದ್ರ ಮೋದಿ ಸಹಿತ ವಿಪಕ್ಷ ನಾಯಕರು ಆರಂಭದಿಂದಲೂ ಟೀಕೆ ಮಾಡುತ್ತಾ ಬಂದರು. ಆದರೆ ಬಡ ಮತ್ತು ದುರ್ಬಲ ವರ್ಗಗಳಿಗಾಗಿ ಜಾರಿಗೊಳಿಸಿದ ಈ ಗ್ಯಾರಂಟಿಗಳಿಂದ ಆರ್ಥಿಕ ಚಟುವಟಿಕೆಗಳು ಅಧಿಕವಾಗುತ್ತಿದ್ದು, ಅದರಿಂದ ರಾಜ್ಯದ ಆಂತರಿಕ ವೃದ್ಧಿ ದರ(ಜಿಡಿಪಿ)ವೂ ಹೆಚ್ಚಾಗುತ್ತದೆ. ಈ ನಿಟ್ಟಿನಲ್ಲಿ ಆರ್ಥಿಕ ವೃದ್ಧಿಗೆ ದಿಕ್ಸೂಚಿಯಾಗಿವೆ. ಇದಕ್ಕೆ ಕೇವಲ ಐದೂವರೆ ತಿಂಗಳಲ್ಲಿ ಅತ್ಯಧಿಕ ಜನಪ್ರಿಯತೆ ಗಳಿಸಿದ “ಶಕ್ತಿ’ ಯೋಜನೆಯೇ ಸಾಕ್ಷಿ ಎಂದರು.

ಬೆಂಬಲ ಸಿಕ್ಕಿದರೆ ಮತ್ತಷ್ಟು ಉತ್ತಮ ಸೇವೆ
ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಾತನಾಡಿ, ಒಂದೆಡೆ ಸಮರ್ಪಕ ಬಸ್‌ಗಳು ಇರಲಿಲ್ಲ, ಮತ್ತೂಂದೆಡೆ 2016ರಿಂದ ಒಂದೇ ಒಂದು ನೇಮಕಾತಿಯಾಗದೆ ಸಿಬಂದಿಯೂ ಇರಲಿಲ್ಲ. ಈ ಮಧ್ಯೆ ಸಾಲದ ಹೊರೆ ನಮ್ಮ ಮೇಲಿತ್ತು. ಇಂತಹ ಸಂದರ್ಭದಲ್ಲಿ “ಶಕ್ತಿ’ ಯೋಜನೆ ಜಾರಿಗೊಳಿಸಲಾಗಿತ್ತು. ಆ ಎಲ್ಲ ಸವಾಲುಗಳನ್ನು ಮೀರಿ ಯೋಜನೆ ಯಶಸ್ವಿಯಾಗಿದೆ. ನೇಮಕಾತಿ ಪ್ರಕ್ರಿಯೆ ಜತೆಗೆ ಹೊಸ ಬಸ್‌ಗಳನ್ನೂ ರಸ್ತೆಗಿಳಿಸಲಾಗುತ್ತಿದೆ. ಮುಖ್ಯಮಂತ್ರಿಗಳು ಇನ್ನಷ್ಟು ಬೆಂಬಲ ನೀಡಿದರೆ, ಪುರುಷ ಪ್ರಯಾಣಿಕರು ಮತ್ತು ವಿದ್ಯಾರ್ಥಿಗಳಿಗೆ ಇನ್ನಷ್ಟು ಉತ್ತಮ ಸೇವೆ ನೀಡಲು ಸಾಧ್ಯವಾಗಲಿದೆ ಎಂದರು.

ಚಿನ್ನದ ಪದಕ ಪ್ರದಾನ
ಕಳೆದ 15 ವರ್ಷಗಳಲ್ಲಿ ಅಪಘಾತರಹಿತ ಬಸ್‌ ಚಾಲನೆ ಮಾಡಿದ 83 ಚಾಲಕರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ ಪ್ರದಾನ ಮಾಡಲಾಯಿತು. ಅಲ್ಲದೆ “ಶಕ್ತಿ’ ಯೋಜನೆ ಜಾರಿಯಾದ ಮೊದಲ ದಿನ ಪೂಜೆ ಮಾಡಿ, ನಮಸ್ಕರಿಸಿ ಬಸ್‌ ಏರಿದ್ದ ಸಂಗೊಳ್ಳಿಯ ನಿಂಗವ್ವ ಸಿಂಗಾಡಿ ಅವರನ್ನು ಅಭಿನಂದಿಸಲಾಯಿತು.
ಸಾರಿಗೆ ಇಲಾಖೆಯ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು.

ಕಾಂಗ್ರೆಸ್‌ ಯಾವಾಗಲೂ ಮಹಿಳೆಯರ ದನಿಯಾಗಿದೆ. ಸ್ತ್ರೀಶಕ್ತಿ ಸಂಘಗಳ ಬಲವರ್ಧನೆ ಸಹಿತ ಈ ಹಿಂದೆ ಅಧಿಕಾರಕ್ಕೆ ಬಂದಾಗಲೂ ಅನೇಕ ಪೂರಕ ಯೋಜನೆಗಳನ್ನು ಜಾರಿಗೊಳಿಸಿದೆ. ಈ ಬಾರಿಯೂ ಗ್ಯಾರಂಟಿಗಳ ಮೂಲಕ ಮಹಿಳೆಯರ ಸಬಲೀಕರಣ ಮಾಡುತ್ತಿದೆ. ನೂರು ಕೋಟಿಗೂ ಮಹಿಳೆಯರು ಲಕ್ಷಾಂತರ ಕಿ.ಮೀ. ಪ್ರಯಾಣಿಸಿದ್ದಾರೆ. ಈ ಯೋಜನೆಗೆ ಮುಖ್ಯಮಂತ್ರಿಗಳು ಇನ್ನಷ್ಟು ಶಕ್ತಿ ತುಂಬುವ ಮೂಲಕ ಉತ್ತೇಜನ ನೀಡಬೇಕು.
-ಡಾ| ಜಿ.ಪರಮೇಶ್ವರ, ಗೃಹ ಸಚಿವ

ಟಾಪ್ ನ್ಯೂಸ್

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.