Ayodhya: ಅಯೋಧ್ಯೆಯಲ್ಲಿ ಕರ್ನಾಟಕ ಸರಕಾರದಿಂದ ಅತಿಥಿಗೃಹ ?
100 ಕೋ.ರೂ. ವೆಚ್ಚ, ಉ.ಪ್ರ. ಒಪ್ಪಿದರೆ ಬಜೆಟಲ್ಲಿ ಸೇರ್ಪಡೆ- ರಾಜ್ಯದ 100 ರಾಮ ದೇಗುಲ ಪುನರುಜ್ಜೀವನಕ್ಕೂ 100 ಕೋ.ರೂ.!
Team Udayavani, Jan 25, 2024, 1:39 AM IST
ಬೆಂಗಳೂರು: ಶ್ರೀರಾಮನ ಭವ್ಯ ದೇಗುಲ ನಿರ್ಮಾಣವಾಗಿರುವ ಅಯೋಧ್ಯೆಗೆ ಕರ್ನಾಟಕದಿಂದ ಭಾರೀ ಪ್ರಮಾಣದಲ್ಲಿ ಯಾತ್ರಿಗಳು ತೆರಳುತ್ತಿದ್ದಾರೆ. ಇದರ ಬೆನ್ನಲ್ಲೇ ರಾಜ್ಯ ಸರಕಾರ ಅಯೋಧ್ಯೆಯಲ್ಲಿ 100 ಕೋಟಿ ರೂ. ಮೊತ್ತದ ವಸತಿಗೃಹ ನಿರ್ಮಿಸಲು ಚಿಂತನೆ ನಡೆಸಿದೆ.
ರಾಜ್ಯ ಸರಕಾರ ಹಳೆಯ ಪ್ರಸ್ತಾವ ವೊಂದಕ್ಕೆ ಜೀವ ನೀಡುವ ಮೂಲಕ, ರಾಮಭಕ್ತರ ವಿಶ್ವಾಸ ಗಳಿಸುವ ಪ್ರಯತ್ನಕ್ಕೆ ಕೈಹಾಕಿದೆ. ಉತ್ತರ ಪ್ರದೇಶ ಸರಕಾರ ಒಪ್ಪಿದರೆ ಅಯೋಧ್ಯೆಯಲ್ಲಿ ತಿರುಪತಿ ಮಾದರಿ ಬೃಹತ್ ಅತಿಥಿಗೃಹ ನಿರ್ಮಾಣದ ಬಗ್ಗೆ ಬಜೆಟ್ನಲ್ಲಿ ಪ್ರಸ್ತಾವಿಸಲು ಯೋಜಿಸಿದೆ.
ಈ ಹಿಂದೆ ರಾಜ್ಯದಲ್ಲಿ ಬಿಜೆಪಿ ಸರ ಕಾರ ಅಧಿಕಾರದಲ್ಲಿದ್ದಾಗ ಅಂದಿನ ಸಿಎಂ ಬಸವರಾಜ ಬೊಮ್ಮಾಯಿ, ಅಯೋಧ್ಯೆಯಲ್ಲಿ ಕರ್ನಾಟಕ ಸರಕಾರದಿಂದ ಅತಿಥಿಗೃಹ ನಿರ್ಮಾಣಕ್ಕೆ ಜಾಗ ನೀಡುವಂತೆ ಪತ್ರ ಬರೆಯ ಲಾಗಿತ್ತು. ಆದರೆ ಅದಕ್ಕೆ ಸ್ಪಂದನೆ ಸಿಗದೇ ಇದ್ದ ಹಿನ್ನೆಲೆಯಲ್ಲಿ ರಾಜ್ಯದ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಮತ್ತೂಮ್ಮೆ ಉತ್ತರಪ್ರದೇಶ ಸರ ಕಾರಕ್ಕೆ ಪತ್ರ ಬರೆದು, 175 ಕೊಠಡಿಗಳು ಹಾಗೂ ಕರ್ನಾಟಕ ಶೈಲಿಯ ಕ್ಯಾಂಟೀನ್ ನಿರ್ಮಾಣಕ್ಕೆ ಅಗತ್ಯವಾದ ಭೂಮಿ ಮಂಜೂರು ಮಾಡುವಂತೆ ಮನವಿ ಮಾಡಿದ್ದರು.
ಈ ಪತ್ರಕ್ಕೆ ಅಂಗೀಕಾರ ನೀಡುವಂತೆ ಮುಜರಾಯಿ ಇಲಾಖೆ ಹಿರಿಯ ಅಧಿಕಾರಿಯೊಬ್ಬರನ್ನು ಕಳುಹಿಸಿ ಒಪ್ಪಿಗೆ ಪಡೆಯುವ ಬಗ್ಗೆಯೂ ಚಿಂತನೆ ನಡೆಸಲಾಗುತ್ತಿದೆ. ಜತೆಗೆ ಈ ಬಾರಿಯ ಬಜೆಟ್ನಲ್ಲಿ ಸುಮಾರು 100 ಕೋಟಿ ರೂ.ಗಳನ್ನು ಈ ಉದ್ದೇಶಕ್ಕಾಗಿ ಮುಜರಾಯಿ ಇಲಾಖೆಗೆ ನಿಗದಿ ಮಾಡುವಂತೆ ಸಿಎಂ ಅವರಿಗೆ ಮನವಿ ಮಾಡಲು ನಿರ್ಧರಿಸಲಾಗಿದೆ. ಅಷ್ಟೇ ಅಲ್ಲದೆ ರಾಜ್ಯದಲ್ಲಿರುವ ಸುಮಾರು 100 ಹಳೆಯ ಶ್ರೀರಾಮ ಮಂದಿರಗಳ ಪುನರುಜ್ಜೀವನಕ್ಕಾಗಿ 100 ಕೋಟಿ ರೂ. ಮೀಸಲಿಡುವಂತೆಯೂ ಬಜೆಟ್ನಲ್ಲಿ ಪ್ರಸ್ತಾವಿಸುವುದಕ್ಕೆ ಇಲಾಖೆ ಮುಂದಾಗಿದೆ.
ಇದರೊಂದಿಗೆ ಕಾಂಗ್ರೆಸ್ ರಾಮವಿರೋಧಿ ಎಂಬ ಭಾವನೆಯನ್ನು ಹೊಡೆದು ಹಾಕುವುದಕ್ಕೂ ಸರಕಾರದ ಕೆಲವು ಸಚಿವರು ಪ್ರಯತ್ನಿಸಿದ್ದಾರೆ ಎನ್ನಲಾಗಿದೆ. ಅಯೋಧ್ಯೆಯಲ್ಲಿ ಪ್ರಾಣ ಪ್ರತಿಷ್ಠಾಪನೆ ದಿನ ರಾಜ್ಯದ ಎಲ್ಲ ಮುಜರಾಯಿ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸುವುದಕ್ಕೆ ಸಚಿವ ರಾಮಲಿಂಗಾ ರೆಡ್ಡಿ ಆದೇಶ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ