ಕ್ಷೌರದಂಗಡಿಗಳಿಗೆ ಮಾರ್ಗಸೂಚಿ
Team Udayavani, May 20, 2020, 8:41 PM IST
ಸಾಂದರ್ಭಿಕ ಚಿತ್ರ.
ಬೆಂಗಳೂರು: ಕ್ಷೌರದಂಗಡಿಯಲ್ಲಿ ಸಿಬಂದಿ ಮತ್ತು ಗ್ರಾಹಕರಿಗೆ ಸೋಂಕು ಹರಡದಂತೆ ನಿಯಂತ್ರಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾರ್ಗಸೂಚಿ ನೀಡಿದೆ.
ಜ್ವರ, ಶೀತ, ಕೆಮ್ಮು ಸೋಂಕು ಲಕ್ಷಣವಿರುವರಿಗೆ ಪ್ರವೇಶ ನಿಷೇಧಿಸಬೇಕು. ಪ್ರವೇಶ ದ್ವಾರದಲ್ಲಿ ಕಡ್ಡಾಯವಾಗಿ ಸ್ಯಾನಿಟೈಸರ್ ಇಟ್ಟಿರಬೇಕು. ಅಂಗಡಿಯ ಎಲ್ಲ ಸಿಬಂದಿ ಕಡ್ಡಾಯವಾಗಿ ಮಾಸ್ಕ್, ತಲೆಗವಸು ಮತ್ತು ಅಪ್ರಾನ್ ಧರಿಸಿರಬೇಕು.
ಒಬ್ಬರಿಗೆ ಬಳಸಿದ ಟವೆಲ್, ಪೇಪರ್ ಶೀಟ್ ಅನ್ನು ಬೇರೊಬ್ಬರಿಗೆ ಬಳಸುವಂತಿಲ್ಲ. ಕ್ಷೌರಕ್ಕೆ ಬಳಸುವ ಪ್ರತಿ ಸಾಧನವನ್ನೂ ಶೇ. 7ರಷ್ಟು ಲೈಸಾಲ್ ದ್ರಾವಣದಿಂದ ಅರ್ಧ ಗಂಟೆ ಸ್ಯಾನಿಟೈಸ್ ಮಾಡಬೇಕು. ಪ್ರತಿ ಗ್ರಾಹಕನಿಗೆ ಕ್ಷೌರ ಮಾಡಿದ ಬಳಿಕ ಸಿಬಂದಿ ಹ್ಯಾಂಡ್ ವಾಶ್ ಮಾಡಿಕೊಳ್ಳಬೇಕು. ಅಂಗಡಿಯ ನೆಲ, ಗೋಡೆ ಸೇರಿದಂತೆ ಎಲ್ಲ ಪ್ರದೇಶವನ್ನೂ ಶೇ. 1 ಹೈಡ್ರೋಕ್ಲೋರೈಟ್ ಮಿಶ್ರಣದ ನೀರಿನಿಂದ ನಿತ್ಯ ಎರಡು ಬಾರಿ ಶುಚಿಗೊಳಿಸಬೇಕು ಎಂದು ಆರೋಗ್ಯ ಇಲಾಖೆ ಆಯುಕ್ತರು ಮಾರ್ಗಸೂಚಿಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ