2 ರಾಜ್ಯಗಳಿಗೆ “ಎಲ್’ ನಂಟು : ಗುಜರಾತ್, ಮಧ್ಯಪ್ರದೇಶದಲ್ಲಿ ಸೋಂಕು
ಸಾವು ಹೆಚ್ಚಳಕ್ಕೆ ಇದೇ ಕಾರಣ
Team Udayavani, Apr 28, 2020, 12:29 PM IST
ಹೊಸದಿಲ್ಲಿ: ದೇಶದ ಇತರೆ ರಾಜ್ಯಗಳಿಗೆ ಹೋಲಿಸಿದರೆ ಗುಜರಾತ್ ಹಾಗೂ ಮಧ್ಯಪ್ರದೇಶದಲ್ಲಿ ಕೋವಿಡ್ ಸಾವಿನ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಹೆಚ್ಚಲು ಹಾಗೂ ಗುಣಮುಖರಾಗುತ್ತಿರುವ ರೋಗಿಗಳ ಪ್ರಮಾಣ ಕಡಿಮೆಯಾಗಲು ಕಾರಣವೇನಿರಬಹುದು? ಈ ಎರಡು ರಾಜ್ಯಗಳಲ್ಲಿ ಅಬ್ಬರಿಸುತ್ತಿರುವ ಕೋವಿಡ್ ವೈರಸ್ ನ ಕಣವು ಬೇರೆಡೆಗೆ ಹೋಲಿಸಿದರೆ ಭಿನ್ನವಾಗಿರುವುದೇ?
ಹೌದು ಎನ್ನುವ ಅನುಮಾನವನ್ನು ಅನೇಕ ತಜ್ಞರು ವ್ಯಕ್ತಪಡಿಸಿದ್ದಾರೆ. ಗುಜರಾತ್ ಮತ್ತು ಮಧ್ಯಪ್ರದೇಶದಲ್ಲಿ ಸಾವಿನ ಸಂಖ್ಯೆ ಹೆಚ್ಚಾಗಲು ವುಹಾನ್ನಲ್ಲಿ ಕಾಣಿಸಿಕೊಂಡ “ಎಲ್’ ವಿಧದ ವೈರಸ್ ನ ಕಣವೇ ಕಾರಣ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಜತೆಗೆ, ಈ ಕುರಿತು ಅಧ್ಯಯನಗಳು ಆರಂಭವಾಗಿದ್ದು, ಸದ್ಯದಲ್ಲೇ ಈ ಪ್ರಶ್ನೆಗಳಿಗೆ ಉತ್ತರ ಸಿಗಲಿದೆ ಎಂದೂ ಹೇಳಿದ್ದಾರೆ.
ಕೋವಿಡ್ ವೈರಸ್ನಲ್ಲಿ ಎರಡು ರೀತಿಯ ಅಣುಗಳಿರುತ್ತವೆ. ಅವೆಂದರೆ, “ಎಸ್’ ಮತ್ತು “ಎಲ್’ ವಿಧದ ಅಣುಗಳು. ಕೇರಳ ಸೇರಿದಂತೆ ಕೆಲವು ರಾಜ್ಯಗಳಲ್ಲಿ ದಾಳಿ ಮಾಡಿರುವುದು “ಎಸ್’ ವಿಧದ ಕಣಗಳಾಗಿದ್ದರೆ, ಗುಜರಾತ್, ಮಧ್ಯಪ್ರದೇಶದಲ್ಲಿ (ವಿಶೇಷವಾಗಿ ಇಂದೋರ್ನಲ್ಲಿ) ಅಪಾಯಕಾರಿ “ಎಲ್’ ಕಣಗಳು ದಾಂಗುಡಿಯಿಟ್ಟಿವೆ. ಈ ಕಾರಣದಿಂದಾಗಿಯೇ ಈ ರಾಜ್ಯಗಳ ಮರಣ ಪ್ರಮಾಣ ಹೆಚ್ಚಿರುವುದು ಎಂದಿದ್ದಾರೆ ಆರೋಗ್ಯ ಸಚಿವಾಲಯದ ಪ್ರಧಾನ ಕಾರ್ಯದರ್ಶಿ ಜಯಂತಿ ರವಿ.
ಇಟಲಿ, ಸ್ಪೇನ್ನಲ್ಲೂ “ಎಲ್’ ದಾಳಿ: ಜಗತ್ತಿನ ಯಾವ ಪ್ರದೇಶಗಳಲ್ಲಿ ಸೋಂಕಿನಿಂದ ಹೆಚ್ಚಿನ ಸಾವು ನೋಟು ಉಂಟಾಗಿದೆಯೋ, ಅಲ್ಲೆಲ್ಲ “ಎಲ್’ ವಿಧದ ಕಣಗಳ ಕಾರುಬಾರು ಜೋರಾಗಿದೆ ಎಂದೇ ಅರ್ಥ. ಭಾರತದಲ್ಲಿ ಈ ರೀತಿಯ ಕಣವು ಗುಜರಾತ್, ಮಧ್ಯಪ್ರದೇಶದಲ್ಲಿ ಕಾಣಿಸಿಕೊಂಡರೆ, ವಿದೇಶಗಳಲ್ಲಿ ಚೀನಾದ ವುಹಾನ್, ಇಟಲಿ, ಸ್ಪೇನ್ ಮತ್ತು ನ್ಯೂಯಾರ್ಕ್ ನಲ್ಲಿ ಕಾಣಿಸಿಕೊಂಡಿವೆ. ಹೀಗಾಗಿಯೇ, ಈ ಎಲ್ಲ ಕಡೆಗಳಲ್ಲೂ ಸಾವಿನ ಸಂಖ್ಯೆ ಅಧಿಕವಾಗಿದೆ ಎಂದು ಸೋಂಕು ರೋಗಗಳ ತಜ್ಞ ಡಾ.ಅತುಲ್ ಪಟೇಲ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ