ಗುಂಡಿಬೈಲು- ಅಂಬಾಗಿಲು : ಕಾಮಗಾರಿ ಮತ್ತೆ ಆರಂಭ
Team Udayavani, Mar 12, 2022, 3:01 PM IST
ಉಡುಪಿ : ಗುಂಡಿಬೈಲು- ಅಂಬಾಗಿಲು ಮುಖ್ಯರಸ್ತೆಯಲ್ಲಿ ಯುಜಿಡಿ ಮತ್ತು ವಾರಾಹಿ ಕಾಮಗಾರಿ ನಡೆಯು ತ್ತಿದ್ದು, ಇಲ್ಲಿನ ನಾಗಬನ ಸಮೀಪ, ಹಾಲಿನ ಅಂಗಡಿ ಮುಂಭಾಗ ಕಳೆದ ಆರೇಳು ದಿನಗಳಿಂದ ಕೆಲಸ ಸ್ಥಗಿತಗೊಂಡಿತ್ತು.
ಪರಿಣಾಮ ಅರ್ಧಕ್ಕೆ ಕಾಮಗಾರಿ ನಡೆಸಿ ಬಿಟ್ಟಿರುವುದರಿಂದ ಸ್ಥಳೀಯರ ಓಡಾಟಕ್ಕೆ, ವ್ಯಾಪಾರಿಗಳಿಗೆ, ವಾಹನ ಸವಾರರಿಗೆ ಸಮಸ್ಯೆಯಾಗಿ ಪರಿಣಮಿಸಿತ್ತು. ಹಗಲಿಡೀ ಧೂಳಿನ ಸಮಸ್ಯೆ, ಟ್ರಾಫಿಕ್ ಜಾಮ್ ಜನರನ್ನು ಕಾಡುತ್ತಿತ್ತು. ಈ ಬಗ್ಗೆ ಉದಯವಾಣಿ ಸುದಿನ ಮಾ. 10 ರಂದು ವಿಸ್ತೃತ ವರದಿ ಪ್ರಕಟಿಸಿದ್ದು, ನಗರಸಭೆ ಮತ್ತು ಕುಡ್ಸೆಂಪ್ ಅಧಿಕಾರಿಗಳು ಪೂರಕವಾಗಿ ಸ್ಪಂದಿಸಿದ್ದಾರೆ. ನಗರಸಭೆ ಎಇಇ ಯಶವಂತ್, ಕುಡ್ಸೆಂಪ್ (ವಾರಾಹಿ ಕುಡಿಯುವ ನೀರು ಯೋಜನೆ) ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೈಪ್ಲೈನ್ ಕಾಮಗಾರಿ ವೇಳೆ ಕೆಲವು ಕಡೆಗಳಲ್ಲಿ ಸೇತುವೆಗಳ ಕಾಂಕ್ರೀಟ್ ತಡೆಗೋಡೆಗಳು ಸಿಗುತ್ತಿರುವ ಸಮಸ್ಯೆ ಬಗ್ಗೆ ಅಧಿಕಾರಿಗಳು ತಿಳಿಸಿದ್ದರು.
ಗುಂಡಿಬೈಲಿನಲ್ಲಿ ಕೆಲಸ ತಡವಾಗಲು ಕಾರಣವಾಗಿದ್ದ ಕಾಂಕ್ರೀಟ್ ತಡೆ ಗೋಡೆಯನ್ನು ಕೊರೆಯುವ ಕಾರ್ಯ ಶುಕ್ರವಾರದಿಂದ ಮತ್ತೆ ಆರಂಭಗೊಂಡಿದೆ. ನಾಗರಿಕರಿಗೆ ತೊಂದರೆಯಾಗದಂತೆ ವಿಳಂಬ ಮಾಡದೆ ಕಾಮಗಾರಿ ಮುಂದುವರಿಸುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ.
ಇದನ್ನೂ ಓದಿ : ನಗರಸಭೆಗೆ ನೂತನ ಕಟ್ಟಡ ಭಾಗ್ಯ :ಹಳೆಯ ತಾಲೂಕು ಕಚೇರಿ ಕಟ್ಟಡದ ಜಾಗದಲ್ಲಿ ನಿರ್ಮಿಸಲು ಪ್ರಸ್ತಾವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
MUST WATCH
ಹೊಸ ಸೇರ್ಪಡೆ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು