ಸಾಲಿಗ್ರಾಮ ಗುರುನರಸಿಂಹ, ಆಂಜನೇಯ ರಥೋತ್ಸವ ಸಂಪನ್ನ
Team Udayavani, Jan 16, 2022, 9:22 PM IST
ಕೋಟ: ಸಾಲಿಗ್ರಾಮ ಶ್ರೀಗುರುನರಸಿಂಹ ಹಾಗೂ ಆಂಜನೇಯ ದೇವಸ್ಥಾನದ ವಾರ್ಷಿಕ ಬ್ರಹ್ಮರಥೋತ್ಸವ ರವಿವಾರ ಸಂಪನ್ನಗೊಂಡಿತು.
ಈ ಪ್ರಯುಕ್ತ ಬೆಳಗ್ಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ರಥಾರೋಹಣ ನಡೆಯಿತು. ಭಕ್ತಾಧಿಗಳು ಗುರುನರಸಿಂಹ, ಆಂಜನೇಯನ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಸಂಜೆ ರಥಾವರೋಹಣ ನಡೆಯಿತು ಹಾಗೂ ಓಲಗಮಂಟಪದಲ್ಲಿ ವಿಶೇಷ ಪೂಜೆ ಪುನಸ್ಕಾರ, ಅಷ್ಟಾವಧನ, ಮಹಾಮಂಗಳಾರತಿ, ಶಯನೋತ್ಸವ ಕಾರ್ಯಕ್ರಮಗಳು ಕಟ್ಟುಕಟ್ಟಲೆಯಂತೆ ನಡೆಯಿತು.
ಸರಳ ರೀತಿಯಲ್ಲಿ ಆಚರಣೆ :
ವಾರಾಂತ್ಯ ಕರ್ಫ್ಯೂ ಹಿನ್ನಲೆಯಲ್ಲಿ ಎಲ್ಲಾ ಧಾರ್ಮಿಕ ಮುಂತಾದ ಕಾರ್ಯಕ್ರಮಗಳು ಸರಳ ರೀತಿಯಲ್ಲಿ ನಡೆಯಿತು. ಜಾತ್ರೆಯಲ್ಲಿ ಜನದಟ್ಟನೆ ಕೂಡ ಸಾಕಷ್ಟು ಕಡಿಮೆ ಇತ್ತು. ಸಾಂಸ್ಕೃತಿಕ ಕಾರ್ಯಕ್ರಮ, ಸಭಾ ಕಾರ್ಯಕ್ರಮ ನಿರ್ಬಂಧಿಸಲಾಗಿತ್ತು ಹಾಗೂ ಬೀದಿ ವ್ಯಾಪಾರಿಗಳ ಸಂಖ್ಯೆ ವಿರಳವಾಗಿತ್ತು.
ದೇಗುಲದ ಆಡಳಿತ ಮಂಡಳಿ ಅಧ್ಯಕ್ಷ ಡಾ| ಕೆ.ಎಸ್. ಕಾರಂತ್, ಉಪಾಧ್ಯಕ್ಷ ವೇ| ಮೂ| ಗಣೇಶ್ಮೂರ್ತಿ ನಾವಡ, ಕಾರ್ಯದರ್ಶಿ ಲಕ್ಷ್ಮೀನಾರಾಯಣ ತುಂಗ ಐರೋಡಿ, ಖಜಾಂಚಿ ಪರಶುರಾಮ್ ಭಟ್ ಎಡಬೆಟ್ಟು, ಸದಸ್ಯರಾದ, ವೇ|ಮೂ| ಜಿ.ಚಂದ್ರಶೇಖರ್ ಉಪಾಧ್ಯ ಗುಂಡ್ಮಿ, ಮಾಜಿ ಆಡಳಿತ ಮೊಕ್ತೇಸರ ಎ. ಜಗದೀಶ್ ಕಾರಂತ ಹಾಗೂ ಕೂಟ ಮಹಾಜಗತ್ತು ಸಂಘಟನೆಯ ಮುಖ್ಯಸ್ಥರು, ಗ್ರಾಮಮೊಕ್ತೇಸರರು, ಭಕ್ತಾಧಿಗಳು ಉಪಸ್ಥಿತರಿದ್ದರು.
ಸ್ಥಳೀಯಾಡಳಿತದಿಂದ ಕೋವಿಡ್ ಮುಂಜಾಗೃತೆ :-
ಸ್ಥಳೀಯ ಸಾಲಿಗ್ರಾಮ ಪ.ಪಂ. ಅಧ್ಯಕ್ಷೆ ಸುಲತಾ ಹೆಗ್ಡೆ, ಮುಖ್ಯಾಧಿಕಾರಿ ಶಿವ ನಾಯ್ಕ್, ಆರೋಗ್ಯಾಧಿಕಾರಿ ಮಮತಾ ಹಾಗೂ ಸಿಬಂದಿಗಳು ಜಾತ್ರೆಯ ಆರಂಭದಿಂದ ಕೊನೆ ತನಕ ಉಪಸ್ಥಿತರಿದ್ದು ಆಗಮಿಸಿದ ಭಕ್ತಾಧಿಗಳಲ್ಲಿ ಮಾಸ್ಕ್ ಧರಿಸುವಂತೆ ತಿಳಿಹೇಳಿದರು ಹಾಗೂ ಮಾಸ್ಕ್ ಧರಿಸದವರಿಗೆ ಪ.ಪಂ. ವತಿಯಿಂದ ಉಚಿತವಾಗಿ ಮಾಸ್ಕ್ ನೀಡಿದರು. ದೇಗುಲದ ಒಳ ಹೊರಗೆ ನೂಕುನುಗ್ಗಳಾಗದಂತೆ ಎಚ್ಚರಿಕೆ ವಹಿಸಿದ್ದು ಕಂಡು ಬಂತು. ಆರಕ್ಷಕ ಸಿಬಂದಿಗಳು, ಸ್ವಯಂ ಸೇವಕರು ಕೂಡ ಜಾತ್ರೆಯ ಯಶಸ್ವಿಗೆ ಶ್ರಮಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
MUST WATCH
ಹೊಸ ಸೇರ್ಪಡೆ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…