ರಾಮನಗರ ಬದಲು ಶಿವಮೊಗ್ಗ, ದ.ಕನ್ನಡಕ್ಕೆ ಬೆಂಗಳೂರು ಎಂದು ಹೆಸರಿಡಿ: ಬಿಎಸ್ ವೈಗೆ ಕುಮಾರಸ್ವಾಮಿ


Team Udayavani, Jan 5, 2020, 3:50 PM IST

hdk

ಬೆಂಗಳೂರು: ರಾಮನಗರ ಜಿಲ್ಲೆಗೆ ನವಬೆಂಗಳೂರು ಎಂದು ಮರುನಾಮಕರಣ ಮಾಡುವ ರಾಜ್ಯ ಸರಕಾರದ ಇರಾದೆಯ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಸರಣಿ ಟ್ವೀಟ್ ಗಳನ್ನು ಮಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ, #SaveRamanagara ಎಂಬ ಹ್ಯಾಷ್ ಟ್ಯಾಗ್ ಬಳಸಿ ಬಿ ಎಸ್ ಯಡಿಯೂರಪ್ಪ ಸರಕಾರದ ನಿರ್ಧಾರವನ್ನು ಟೀಕಿಸಿದ್ದಾರೆ.

ರಾಮನಗರದ ಹೆಸರು ಬದಲಾಯಿಸುವ ಸರ್ಕಾರದ ನಿರ್ಧಾರದ ಕುರಿತು ಕುಮಾರಸ್ವಾಮಿ ಅವರು ಮಾಡಿರುವ ಟ್ವೀಟ್ ಗಳು ಈ ಕೆಳಗಿನಂತಿವೆ.

1. ಪಕ್ಕದಲ್ಲೇ ಕಾವೇರಿ ನದಿ ಇದೆ, ಇಗ್ಗಲೂರಿನಲ್ಲಿ ‘ದೇವೇಗೌಡ ಬ್ಯಾರೇಜ್’ ಇದೆ. ಮಾಗಡಿಗೆ ಹೇಮೆ ಹರಿಯಲಿದ್ದಾಳೆ, ಚಿನ್ನದಂಥ ಭೂಮಿ ಇದೆ, ಮುಗ್ಧ ಜನರಿದ್ದಾರೆ ಬೆಂಗಳೂರಿಗೆ ಪಕ್ಕದಲ್ಲೇ ಇರುವ ಈ ಸಂಪದ್ಭರಿತ ಭೂಮಿಯನ್ನು  ಕಿತ್ತುಕೊಂಡು ಬಂಡವಾಳಶಾಹಿಗಳಿಗೆ ಹಂಚಲು ಹೆಸರೊಂದು ಅಡ್ಡಿ ಇದೆ. ನನ್ನ ಮೇಲಿನ ರಾಜಕೀಯ ವೈಷಮ್ಯವೂ ಇದೆ.

2. ರಾಮನಗರವನ್ನು ಅಭಿವೃದ್ಧಿ ಮಾಡುವ ಇಚ್ಛೆ ನಿಮಗಿದೆಯೇ ಬಿಎಸ್ವೈ ಅವರೇ? ಹಾಗಿದ್ದರೆ  ಜಿಲ್ಲೆಗೆ ನಾನು ನನ್ನ ಬಜೆಟ್ನಲ್ಲಿ ಮೀಸಲಿಟ್ಟ ಹಣವನ್ನು ಪ್ರಾಮಾಣಿಕವಾಗಿ ಬಿಡುಗಡೆ ಮಾಡಿ ಸಾಕು. ಅದನ್ನೂ ಮೀರಿದ ಅಭಿವೃದ್ಧಿ ಮಾಡುವ ಮನಸ್ಸಿದ್ದರೆ ನಿಮಗೆ ನನ್ನ, ನನ್ನ ಜನ ಸಹಕಾರ ಸದಾ ಇರಲಿದೆ. ಆದರೆ ಹೆಸರು ಬದಲಿಸಿ ಜಿಲ್ಲೆ ಸಂಸ್ಕೃತಿ, ಅಸ್ಮಿತೆಗೆ ಬೆಂಕಿ ಇಡಬೇಡಿ.

3. ಕೆಂಪೇಗೌಡರು ಬೆಂಗಳೂರು ಕಟ್ಟಿದಾಗ ಊರು ಇನ್ನು ಮುಂದೆ ಹೋಗಬಾರದು ಎಂದು  ನಾಲ್ಕು ದಿಕ್ಕುಗಳಿಗೆ ಗಡಿ ಗೋಪುರ ಕಟ್ಟಿದ್ದರು. ಆದರೆ ನಾವು ಅದನ್ನೆಲ್ಲ ಎಂದೋ ದಾಟಿದೆವು. ಕೆಂಪೇಗೌಡರ ಇಚ್ಛೆ ಮೀರಿದೆವು. ಕೆರೆ ಕಾಲುವೆ ಮುಚ್ಚಿದೆವು ಪರಿಣಾಮ ಬೆಂಗಳೂರು ಇಂದು ಸಮಸ್ಯೆಗಳ ಕೂಪ.

4. ಅಭಿವೃದ್ಧಿಯ ಹೆಸರಲ್ಲಿ ಇದೇ ಸಮಸ್ಯೆಗಳನ್ನು ರಾಮನಗರಕ್ಕೆ ವಿಸ್ತರಿಸುವುದು ಬೇಡ. ಇಲ್ಲಿಗೆ ಕೋಟಿ ಕುಳಗಳು ಬರದಿದ್ದರೂ ಬೇಡ. ಭೂಮಿ ಲೂಟಿಯಾಗದೇ ಇರಲಿ. ಕೆರೆಗಳು ಮುಚ್ಚದೇ ಇರಲಿ. ಸಮೃದ್ಧ ಜನಪದ ಸಂಸ್ಕೃತಿ ಅಳಿಯದಿರಲಿ. ಜನರ ಮುಗ್ಧತೆ ಬಲಿಯಾಗದೇ ಇರಲಿ.

5. ಅಷ್ಟಕ್ಕೂ ಹೆಸರಲ್ಲಿ ಏನಿದೆ. ಬೆಂಗಳೂರು ಎಂದ ಮಾತ್ರಕ್ಕೆ ಅಭಿವೃದ್ಧಿ ಸಾಧ್ಯವೇ? ಹಾಗಿದ್ದರೆ ರಾಜ್ಯದ ಬೇರೆ ಜಿಲ್ಲೆಗಳಿಗೆ ಇದೇ ಹೆಸರಿಡಬಹುದಲ್ಲವೇ? ಅದು ನಿಮಗೆ ಸಾಧ್ಯವೇ? ರಾಮನಗರದ ಹೆಸರು ಬದಲಾಯಿಸಲು ಬರುವ ಬಿಎಸ್ವೈ ಅವರು ಶಿವಮೊಗ್ಗಕ್ಕೆ ಬೆಂಗಳೂರು ಎಂದು ಹೆಸರಿಡಬಲ್ಲರೇ? ದಕ್ಷಿಣ ಕನ್ನಡಕ್ಕೆ?

6. ಬೆಂಗಳೂರಿನಿಂದ 100 ಕಿ.ಮೀ ವ್ಯಾಪ್ತಿಯಲ್ಲಿ ಜಮೀನು ಹೊಂದಬೇಕು ಎಂಬುದು ಇಂದಿನ ಹಣವಂತರ ಬಯಕೆ. ಇದರಲ್ಲಿ ಉತ್ತರಭಾರತೀಯರೇ ಹೆಚ್ಚು.  ಹಾಗಾಗಿಯೇ ಸಾಕಷ್ಟು ಭೂಮಿ ಫಾರಂ ಹೌಸ್ಗಳಿಗೆ ಬಲಿಯಾಗಿವೆ. ಕೃಷಿಯಿಂದ ಹಿಮ್ಮುಖವಾಗಿವೆ. ರಾಮನಗರದ ಹೆಸರು ಬದಲಾವಣೆ ಇಂಥವರಿಗಾಗಿಯೇ ಹೊರತು ರೈತರಿಗೆ ಅಲ್ಲ.

7. ರಾಮನಗರ ತಾಲೂಕು ಮೊದಲು ‘ಕ್ಲೋಸ್ ಪೇಟೆ’ ಎಂದು ಇತ್ತು. ವಿಧಾನಸೌಧದ ನಿರ್ಮಾತೃ ಕೆಂಗಲ್ ಹನುಮಂತಯ್ಯನವರು ರಾಮನಗರ ತಾಲೂಕು ಮಾಡಿದರು. ಅದೇ ಹೆಸರನ್ನು ನಾನು ಇಡೀ ಜಿಲ್ಲೆಗೆ ಇಟ್ಟಿದ್ದೇನೆ. ಅದನ್ನು ಬದಲಾಯಿಸುವುದು ಅವರಿಗೆ ಮಾಡುವ ಅಪಮಾನ.

8. ಈ ಜಿಲ್ಲೆ ಗಂಗರು ಆಳಿದ ನಾಡು.  ಬಾಲಗಂಗಾಧರನಾಥರ, ಶಿವಕುಮಾರ ಶ್ರೀಗಳ ಜನ್ಮಭೂಮಿ. ರಾಜ್ಯಕ್ಕೆ ನಾಲ್ಕು ಮುಖ್ಯಮಂತ್ರಿಗಳನ್ನು ಕೊಟ್ಟ ಶಕ್ತಿಸ್ಥಳ. ಇದೆ ಹೆಸರನ್ನು ಬೆಂಗಳೂರು ಎಂದು ಬದಲಿಸಿದರೆ ಜಿಲ್ಲೆಯ ಐತಿಹ್ಯ ಅಳಿಯಲಿದೆ.

9. ರಾಮನಗರ ಜಿಲ್ಲೆಯ ಸುತ್ತ ಸಪ್ತ ಬೆಟ್ಟಗಳಿವೆ. ಏಳು ಬೆಟ್ಟಗಳ ನಡುವೆ  ಇರುವುದೇ ರಾಮದೇವರ ಬೆಟ್ಟ. ಅದಕ್ಕಾಗಿಯೇ ರಾಮನಗರ ತಾಲೂಕು ಆಗಿದೆ. ರಾಮನ ಹೆಸರನ್ನೇ ಜಿಲ್ಲೆಗೂ ಇಟ್ಟಿದ್ದೇನೆ‌. ಇದನ್ನು ಮೀರಿ ಹೆಸರು ಬದಲಿಸಿದರೆ ಅದು ಬಿಜೆಪಿಯೇ ಪ್ರತಿಪಾದಿಸುವ ಸಿದ್ಧಾಂತಗಳಿಗೆ ಮಾಡಿದ ಅಪಚಾರ. ರಾಮನ ಹೆಸರಿಗೆ ಆಗುವ ಅಪಮಾನ.

10. ಹೆಸರು ಬದಲಿಸುವ ನಿರ್ಧಾರದಿಂದ ಸರ್ಕಾರ ಕೂಡಲೇ ಹಿಂದೆ ಸರಿಯಬೇಕು. ಇಲ್ಲದಿದ್ದರೆ ಹೋರಾಟ ಅನಿವಾರ್ಯ.

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.