ಸರ್ಕಾರಿ ಜಮೀನುಗಳನ್ನು ಸಂರಕ್ಷಿಸಿ : ಅಧಿಕಾರಿಗಳಿಗೆ ಶಾಸಕ ಮಂಜುನಾಥ್ ಸೂಚನೆ


Team Udayavani, Jan 26, 2022, 3:12 PM IST

ಹುಣಸೂರು : ನಗರದ ನರಸಿಂಹಸ್ವಾಮಿ ತಿಟ್ಟು ಬಡಾವಣೆಯಲ್ಲಿನ ಸರಕಾರಿ ಜಮೀನುಗಳನ್ನು ಸರ್ವೆ ನಡೆಸಿ ಸಂರಕ್ಷಿಸುವಂತೆ ಉಪ ವಿಭಾಗಾಧಿಕಾರಿ ವರ್ಣಿತ್ ನೇಗಿಯವರಿಗೆ ಶಾಸಕ ಎಚ್.ಪಿ.ಮಂಜುನಾಥ್ ಸೂಚಿಸಿದರು.

ನಗರದ ನರಸಿಂಹಸ್ವಾಮಿ ತಿಟ್ಟು ಬಡಾವಣೆಯ ಪೊಲೀಸ್ ವಸತಿ ಗೃಹದ ಎದುರಿನ ಎರಡು ಕಡೆ ತಲಾ ಎರಡು ಎಕರೆ ಜಮೀನು ತಮ್ಮದೆಂದು. ತಾವು ಕಳೆದ 30-40 ವರ್ಷಗಳಿಂದ ಉಳುಮೆ ಮಾಡುತ್ತಿರುವಂತೆ ಕೆಲವರು ದಾಖಲಾತಿ ಸೃಷ್ಟಿಸಿದ್ದಲ್ಲದೆ. ತೆಂಗಿನ ಸಸಿ ನೆಟ್ಟಿರುವ ಬಗ್ಗೆ ಬಂದ ದೂರನ್ನಾಧರಿಸಿ ಅಧಿಕಾರಿಗಳ ತಂಡದೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾತನಾಡಿದ ಶಾಸಕರು. ಈ ಬಡಾವಣೆಯಲ್ಲಿ ಹಿಂದಿನಿಂದ ವಾಸಿಸುತ್ತಿರುವವರಿಗೆ ಸ್ಲಂಬೋರ್ಡ್ ಹುಣಸೂರು ವತಿಯಿಂದ ನಿವೇಶನ ಕೊಡಿಸಲು ತಾವು ಮುಂದಾಗಿರುವುದನ್ನು ಬಳಕೆ ಮಾಡಿಕೊಂಡು ಅಕ್ರಮವಾಗಿ ಗುಡಿಸಲು ಹಾಕಲು ಯತ್ನಿಸುತ್ತಿರುವ ಬಗ್ಗೆ ಹಾಗೂ ಸರಕಾರಿ ಭೂಮಿಗೆ ಸಾಗುವಳಿ ನೀಡುವಂತೆ ಮಾಡಿದ್ದ ಮನವಿ 2004 ರಲ್ಲೇ ತಿರಸ್ಕೃತಗೊಂಡಿದ್ದರೂ ಮತ್ತೆ ಸಸಿಗಳನ್ನು ನೆಟ್ಟಿದ್ದಾರೆ.

ಈ ಬಗ್ಗೆ ತಕ್ಷಣವೇ ಸರ್ವೆನಡೆಸಿ. ದಾಖಲಾತಿಗಳನ್ನು ಪರಿಶೀಲಿಸಿ. ಖಾಸಗಿ ಭೂಮಿಯಾಗಿದ್ದಲ್ಲಿ ಬಿಟ್ಟುಕೊಡಿ. ಸರಕಾರಿ ಜಮೀನಾಗಿದ್ದರೆ ಮುಲಾಜಿಲ್ಲದೆ ತೆರವುಗೊಳಿಸಿ. ಕೂಡಲೇ ಕಂದಾಯ ಇಲಾಖೆ ಫಲಕ ಅಳವಡಿಸುವಂತೆ ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು.
ಬಡಾವಣೆ ನಿವಾಸಿಗಳು ಹಕ್ಕುಪತ್ರಕ್ಕಾಗಿ ಕಾಯುತ್ತಿದ್ದು. ಕೆಲವರು ರಾತ್ರೋರಾತ್ರಿ ಶೆಡ್ ಹಾಕಲು ಬರುತ್ತಿರುವ ಬಗ್ಗೆ ನಿವಾಸಿಗಳ ದೂರಿಗೆ ಈ ಬಗ್ಗೆ ತಹಸೀಲ್ದಾರ್ ಡಾ.ಅಶೋಕ್ ರಿಗೆ ಸೂಕ್ತ ಕ್ರಮವಹಿಸಬೇಕೆಂದು. ಹಾಗೂ ಪೊಲೀಸ್ ರಕ್ಷಣೆ ನೀಡುವಂತೆ ಡಿವೈಎಸ್ ಪಿ ರವಿಪ್ರಸಾದ್ ರಿಗೆ ಸೂಚಿಸಿದರು. ಈ ವೇಳೆ ಸರ್ವೆಯರ್ ಚಿಕ್ಕಸ್ವಾಮಿ ಒಂದು ವಾರಕಾಲದೊಳಗೆ ಸರ್ವೆ ಮಾಡಿಕೊಡುವುದಾಗಿ ತಿಳಿಸಿದರು.

ಇದನ್ನೂ ಓದಿ : ಉಸ್ತುವಾರಿ ಸಚಿವ ಎಸ್. ಅಂಗಾರ ಅವರಿಂದ  ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರಕ್ಕೆ ಚಾಲನೆ

ಈ ವೇಳೆ ಕೆಲವರು ಇದು ಖಾಸಗಿ ಭೂಮಿಯಲ್ಲ ಮನಗೆ ಮಂಜುರಾಗಿದೆ ಎಂದು ದಾಖಲಾತಿ ತಂದರು ಆದರೆ ಹಿಂದೆಯೂ ತಹಸೀಲ್ದಾರ್ ವಜಾ ಮಾಡಿರುವ ಬಗ್ಗೆ ಸ್ಪಷ್ಟಪಡಿಸಿದರು.

ನಂತರ ರಾತ್ರಿ ವೇಳೆ ಗುಡಿಸಲು ಹಾಕದಂತೆ ಮನವಿ ಮಾಡಿದ ಶಾಸಕರು ನಿಜವಾದ ನಿವಾಸಿಗಳಿಗೆ ನಿವೇಶನ ಕೊಡಿಸಲು ನಾನು ಬದ್ದ ಆದರೆ ಅಕ್ರಮ ಗುಡಿಸಲು ಹಾಕಿ ಗಲಾಟೆಗೆ ಆಸ್ಪದ ಕೊಡದಂತೆ ನಿವಾಸಿಗಳಿಗೆ ಮನವಿ ಮಾಡಿ. ಈ ಬಗ್ಗೆ ವಾರ್ಡ್ ಸದಸ್ಯ ಹಾಗೂ ಅಧ್ಯಕ್ಷರು ಎಚ್ಚರ ವಹಿಸಬೇಕು ಎಂದರು.

ಏನೇ ಸಮಸ್ಯೆಯಾದಲ್ಲಿ ವಾಡ್೯ ಸದಸ್ಯರನ್ನೆ ಹೊಣೆ ಮಾಡುವುದಾಗಿ ಎಚ್ಚರಿಸಿದರು. ಈ ವೇಳೆ ಇನ್ಸ್ ಪೆಕ್ಟರ್ ಗಳಾದ ಸಿ.ವಿ.ರವಿ.ಚಿಕ್ಕಸ್ವಾಮಿ.
ಆರ್.ಐ.ಗಳು. ನಗರಸಭೆ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.