Health Tips: ಕೂದಲಿನ ಆರೈಕೆಗೆ ಮನೆಯಲ್ಲೇ ತಯಾರಿಸಿ ಸುಲಭ ಮನೆಮದ್ದು…

ಶಾಂಪೂ, ಕಂಡೀಷನರ್ ಇತ್ಯಾದಿಗಳಿಂದಲೂ ಕೂದಲಿಗೆ ಮತ್ತಷ್ಟು ಹಾನಿಯಾಗುತ್ತದೆ

ಕಾವ್ಯಶ್ರೀ, Feb 21, 2023, 5:25 PM IST

Health Tips: ಕೂದಲಿನ ಆರೈಕೆಗೆ ಮನೆಯಲ್ಲೇ ತಯಾರಿಸಿ ಸುಲಭ ಮನೆಮದ್ದು…

ನಮ್ಮ ಇಂದಿನ ಜೀವನಶೈಲಿಗೆ ಅನುಗುಣವಾಗಿ ನಮ್ಮ ಆರೋಗ್ಯ ಇರುತ್ತದೆ. ಈಗಿನ ಕಾಲದಲ್ಲಿ ಆಹಾರ ಕ್ರಮದಿಂದ ಆರೋಗ್ಯದಲ್ಲಿ ಬದಲಾವಣೆಯಾಗುವುದು ಸಹಜ. ಪ್ರಸ್ತುತ ಆರೋಗ್ಯ ಸಮಸ್ಯೆಗಳಲ್ಲಿ ಕೂದಲು ಉದುರುವಿಕೆಯ ಸಮಸ್ಯೆ ಕೂಡಾ ಒಂದು.

ಮಹಿಳೆಯರು ಹಾಗೂ ಪುರುಷರು ಇಬ್ಬರಲ್ಲೂ ಕಂಡುಬರುವಂತಹ ಸಮಸ್ಯೆ ಇದು. ನಮ್ಮಲ್ಲಿ ಕೂದಲು ಉದುರುವಿಕೆ ಸಮಸ್ಯೆ ಕಂಡು ಬರಲು ಹಲವಾರು ರೀತಿಯ ಕಾರಣಗಳು ಇರಬಹುದು. ಇದರಲ್ಲಿ ಭಾವನಾತ್ಮಕ ಅಥವಾ ದೈಹಿಕ ಒತ್ತಡ, ಹೊಸ ಔಷಧಿ ಸೇವನೆ, ಕೂದಲಿನ ಕೆಟ್ಟ ಆರೋಗ್ಯ, ಸ್ವಯಂ ರಕ್ಷಿತ ರೋಗ, ಪೋಷಕಾಂಶಗಳ ಕೊರತೆ, ಜ್ವರ ಅಥವಾ ಅನಾರೋಗ್ಯ ಇತ್ಯಾದಿ.

ಅತಿಯಾದ ರಾಸಾಯನಿಕಗಳಿಂದ ಕೂದಲಿಗೆ ಮತ್ತಷ್ಟು ಹಾನಿ ಆಗುವುದು. ಆದರೆ ಕೆಲವೊಂದು ಮನೆಮದ್ದುಗಳು ತುಂಬಾ ಸುಲಭವಾಗಿ ಕೂದಲು ಉದುರುವಿಕೆ, ತುಂಡಾಗುವುದು ಮತ್ತು ತಲೆಹೊಟ್ಟನ್ನು ನಿವಾರಣೆ ಮಾಡುವುದು.

ನಾವು ಕೂದಲಿಗೆ ಬಳಸುವ ರಾಸಾಯನಿಕ ಶಾಂಪೂ, ಕಂಡೀಷನರ್ ಇತ್ಯಾದಿಗಳಿಂದಲೂ ಕೂದಲಿಗೆ ಮತ್ತಷ್ಟು ಹಾನಿಯಾಗುತ್ತದೆ. ಕೆಲ ಮನೆಮದ್ದುಗಳು ತುಂಬಾ ಸುಲಭವಾಗಿ ಕೂದಲು ಉದುರುವಿಕೆ, ತುಂಡಾಗುವುದು ಮತ್ತು ತಲೆಹೊಟ್ಟನ್ನು ನಿವಾರಣೆಗೆ ಸಹಕಾರಿಯಾಗಿದೆ. ಅದು ಯಾವುದೆಂಬ ಮಾಹಿತಿ ಇಲ್ಲಿವೆ..ನೋಡಿ..

ದಾಸವಾಳ ಮತ್ತು ಕೊಬ್ಬರಿ ಎಣ್ಣೆ:

ದಾಸವಾಳದ ನಿಯಮಿತ ಉಪಯೋಗದಿಂದ ಕೂದಲು ಬೇಗನೇ ಬಿಳಿಯಾಗುವುದನ್ನು, ತಲೆಹೊಟ್ಟು ಬರುವುದನ್ನು ಹಾಗೂ ಉದುರುವಿಕೆಯನ್ನು ತಡೆಗಟ್ಟಬಹುದು.

ಮೆಹಂದಿ ಪುಡಿ ಮತ್ತು ಹುಳಿ ಮಜ್ಜಿಗೆ:

ಎಲ್ಲರಿಗೂ ತಿಳಿದಿರುವಂತೆ ಮೆಹಂದಿ ಕೂದಲಿನ ಆರೋಗ್ಯಕ್ಕೆ ಅತ್ಯುತ್ತಮ ಮನೆಮದ್ದು. ಕೂದಲು ಬಿಳಿಯಾಗಿರುವವರು ಕೂದಲು ಬಣ್ಣಕ್ಕಾಗಿ ಮೆಹಂದಿ ಬಳಸ್ತಾರೆ.

ಮೆಹಂದಿ ಪುಡಿಯೊಂದಿಗೆ ಹುಳಿಮಜ್ಜಿಗೆ ಸೇರಿಸಿ ತಲೆಗೆ ಹಚ್ಚಿಕೊಂಡರೆ ಕೂದಲು ಮತ್ತಷ್ಟು ಅತ್ಯುತ್ತಮಗೊಳ್ಳಲು ಸಹಕಾರಿಯಾಗಿರುತ್ತೆ. ಕೂದಲು ಉದುರುವ ಸಮಸ್ಯೆ ಮತ್ತು ಕೂದಲಿನ ಬಣ್ಣಕ್ಕಾಗಿ, ತಲೆಹೊಟ್ಟನ್ನು ನಿವಾರಿಸಲು ಉಪಯೋಗವಾಗಲಿದೆ.

ಮೆಂತೆ-ಬೇವು:

ತಲೆಹೊಟ್ಟಿನ ಸಮಸ್ಯೆಗೆ ಇದು ಅತ್ಯುತ್ತಮ. ಮೂರರಿಂದ ನಾಲ್ಕು ಗಂಟೆಗಳ ಕಾಲ ಮೆಂತೆ ಕಾಳನ್ನು ನೀರಿನಲ್ಲಿ ನೆನೆಸಿಕೊಳ್ಳಿ. ನಂತರ ನೆನೆದಿರುವ ಮೆಂತೆ ಕಾಳಿಗೆ ಬೇವಿನ ಎಲೆಗಳನ್ನು ಹಾಕಿಕೊಳ್ಳಿ. ಕೆಲವು ಹನಿ ನೀರು ಹಾಕಿ ಸರಿಯಾಗಿ ಪೇಸ್ಟ್ ತಯಾರಿಸಿ. ಪೇಸ್ಟ್ ಮೃದುವಾದ ಬಳಿಕ ಅದಕ್ಕೆ ನಿಂಬೆರಸ ಮತ್ತು ಮೊಸರು ಹಾಕಿಕೊಳ್ಳಿ. ಎಣ್ಣೆಯಂಶವಿರುವ ಕೂದಲಿಗೆ ಇದನ್ನು ಹಚ್ಚಿಕೊಂಡು ಸುಮಾರು ಒಂದು ಗಂಟೆ ಕಾಲ ಹಾಗೆ ಬಿಟ್ಟು ಬಳಿಕ ತೊಳೆಯಿರಿ.

ಬಿಳಿಕೂದಲ ಸಮಸ್ಯೆಗೆ:

ಸುಮಾರು ನಾಲ್ಕರಿಂದ ಐದು ಚಮಚ ತೆಂಗಿನ ಎಣ್ಣೆಗೆ ಒಂದು ಹಿಡಿ ಕರಿಬೇವಿನ ಎಲೆಯನ್ನು ಸೇರಿಸಿ. ಮೀಡಿಯಮ್ ಉರಿಯಲ್ಲಿ ಇಟ್ಟು ಚೆನ್ನಾಗಿ ಕುದಿಸಿ, ನಂತರ ತಣ್ಣಗಾಗಲು ಬಿಡಿ. ತಣ್ಣಗಾದ ಎಣ್ಣೆಯನ್ನು ನಿತ್ಯವೂ ಕೂದಲಿಗೆ ಹಚ್ಚುವುದರಿಂದ ಸಹಕಾರಿ. ತಲೆ ಸ್ನಾನ ಮಾಡುವ ಮುನ್ನ ಈ ಎಣ್ಣೆಗೆ ಮೊಸರು ಅಥವಾ ಮಜ್ಜಿಗೆಯನ್ನು ಮಿಶ್ರಣ ಮಾಡಿ, ತಲೆಗೆ ಹಚ್ಚಿದರೆ ಕೂದಲು ಹೊಳಪು, ಕಪ್ಪು ಬಣ್ಣವನ್ನು ಪಡೆದುಕೊಳ್ಳಲು ಉಪಯೋಗವಾಗುತ್ತದೆ.

ಒಳ್ಳೆಯ ಫಲಿತಾಂಶಕ್ಕಾಗಿ ವಾರದಲ್ಲಿ ಎರಡು ಸಲ ಬಳಸಿಕೊಳ್ಳಿ. ಕೂದಲ ಆರೋಗ್ಯದ ಕಡೆಗೂ ಗಮನ ಹರಿಸಿ.

-ಕಾವ್ಯಶ್ರೀ

ಟಾಪ್ ನ್ಯೂಸ್

Building ಸಾಮಗ್ರಿ ಸಾಗಾಟ ವಾಹನಗಳ ಮುಷ್ಕರ: ಅ.3ರಂದು ಉಡುಪಿ ಜಿಲ್ಲಾ ಬಂದ್‌

Building ಸಾಮಗ್ರಿ ಸಾಗಾಟ ವಾಹನಗಳ ಮುಷ್ಕರ: ಅ.3ರಂದು ಉಡುಪಿ ಜಿಲ್ಲಾ ಬಂದ್‌

Cauvery water dispute ತಟ್ಟದ ಬಂದ್‌ ಬಿಸಿ; ಜೀವನ, ವಾಹನ ಸಂಚಾರ ಯಥಾಸ್ಥಿತಿ

Cauvery water dispute ತಟ್ಟದ ಬಂದ್‌ ಬಿಸಿ; ಜೀವನ, ವಾಹನ ಸಂಚಾರ ಯಥಾಸ್ಥಿತಿ

Dakshina Kannada ಬಿರುಸಿನ ಮಳೆ; ಮೀನುಗಾರರಿಗೆ ಮುನ್ನೆಚ್ಚರಿಕೆ

Dakshina Kannada ಬಿರುಸಿನ ಮಳೆ; ಮೀನುಗಾರರಿಗೆ ಮುನ್ನೆಚ್ಚರಿಕೆ

Malpe ಭಾರೀ ಗಾಳಿ: ದಡದತ್ತ ಧಾವಿಸಿದ ಬೋಟ್‌ಗಳು

Malpe ಭಾರೀ ಗಾಳಿ: ದಡದತ್ತ ಧಾವಿಸಿದ ಬೋಟ್‌ಗಳು

Ullal: ಕಡಲ್ಕೊರೆ‌ತ; ಅಪಾಯದಲ್ಲಿ ಮನೆಗಳು

Ullal: ಕಡಲ್ಕೊರೆ‌ತ; ಅಪಾಯದಲ್ಲಿ ಮನೆಗಳು

Udupi ಮಹಿಳಾ ದೌರ್ಜನ್ಯಕ್ಕೆ ಕಡಿವಾಣ: ಡಿಸಿ ಸೂಚನೆ

Udupi ಮಹಿಳಾ ದೌರ್ಜನ್ಯಕ್ಕೆ ಕಡಿವಾಣ: ಡಿಸಿ ಸೂಚನೆ

TrainMangaluru-Mumbai;ವಂದೇ ಭಾರತ್‌ ರೈಲು: ಶಾಸಕ ಸುನಿಲ್‌ರಿಂದ ಕೇಂದ್ರ ರೈಲ್ವೇ ಸಚಿವರಿಗೆ ಪತ್ರ

Mangaluru-Mumbai;ವಂದೇ ಭಾರತ್‌ ರೈಲು: ಶಾಸಕ ಸುನಿಲ್‌ರಿಂದ ಕೇಂದ್ರ ರೈಲ್ವೇ ಸಚಿವರಿಗೆ ಪತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಲಪ್ರಳಯದ ಮನಕಲಕುವ ಕಥಾಹಂದರದ “2018” ನಮ್ಮ ಬದುಕಿನ ಚಿತ್ರ!

ಜಲಪ್ರಳಯದ ಮನಕಲಕುವ ಕಥಾಹಂದರದ “2018” ನಮ್ಮ ಬದುಕಿನ ಚಿತ್ರ!

MOSSAD 4

ಪುಟ್ಟ ದೇಶದ ಈ ಇಂಟೆಲಿಜೆನ್ಸ್‌ ಏಜೆನ್ಸಿ ಭಾರತದ ʻರಾʼ ಗಿಂತಲೂ ಪವರ್‌ಫುಲ್‌..!

14–black-pepper

Black Pepper; ಮನೆಮದ್ದು … ಹಲವು ಆರೋಗ್ಯ ಸಮಸ್ಯೆಗಳಿಗೆ ಕಾಳುಮೆಣಸು ರಾಮಬಾಣ

those-2-runs-africas-unforgettable-world-cup-hero-lance-klusener

Cricket Stories; ಆ 2 ರನ್…ದ.ಆಫ್ರಿಕಾ ಮರೆಯಲಾಗದ ವಿಶ್ವಕಪ್ ಹೀರೋ ಲ್ಯಾನ್ಸ್ ಕ್ಲೂಸನರ್

Explained: ಸಾವಿರಾರು ಜನರ ಸಾವು…ಈಗ ಕದನ ವಿರಾಮ: ಏನಿದು ಅಜರ್‌ ಬೈಜಾನ್‌-ಅರ್ಮೇನಿಯಾ ಸಂಘರ್ಷ

Explained:ಸಾವಿರಾರು ಜನರ ಸಾವು…ಈಗ ಕದನ ವಿರಾಮ: ಏನಿದು ಅಜರ್‌ ಬೈಜಾನ್‌-ಅರ್ಮೇನಿಯಾ ಸಂಘರ್ಷ

MUST WATCH

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

ಹೊಸ ಸೇರ್ಪಡೆ

Building ಸಾಮಗ್ರಿ ಸಾಗಾಟ ವಾಹನಗಳ ಮುಷ್ಕರ: ಅ.3ರಂದು ಉಡುಪಿ ಜಿಲ್ಲಾ ಬಂದ್‌

Building ಸಾಮಗ್ರಿ ಸಾಗಾಟ ವಾಹನಗಳ ಮುಷ್ಕರ: ಅ.3ರಂದು ಉಡುಪಿ ಜಿಲ್ಲಾ ಬಂದ್‌

Cauvery water dispute ತಟ್ಟದ ಬಂದ್‌ ಬಿಸಿ; ಜೀವನ, ವಾಹನ ಸಂಚಾರ ಯಥಾಸ್ಥಿತಿ

Cauvery water dispute ತಟ್ಟದ ಬಂದ್‌ ಬಿಸಿ; ಜೀವನ, ವಾಹನ ಸಂಚಾರ ಯಥಾಸ್ಥಿತಿ

rbi

RD ಬಡ್ಡಿ ದರ ಶೇ. 6.7ಕ್ಕೆ ಏರಿಕೆ

SIDDU IMP

Karnataka: ಏಳನೇ ವೇತನ ಆಯೋಗದ ಅಧ್ಯಕ್ಷ , ಸದಸ್ಯರ ಜತೆ ಸಿಎಂ ಸಭೆ

Dakshina Kannada ಬಿರುಸಿನ ಮಳೆ; ಮೀನುಗಾರರಿಗೆ ಮುನ್ನೆಚ್ಚರಿಕೆ

Dakshina Kannada ಬಿರುಸಿನ ಮಳೆ; ಮೀನುಗಾರರಿಗೆ ಮುನ್ನೆಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.