ರೇಣುಗೆ ಕೈ ತಪ್ಪಿದ ಸಚಿವ ಸ್ಥಾನ; ಹಳದಮ್ಮದೇವಿ ಪ್ರಸಾದ ವೈರಲ್!
Team Udayavani, Aug 7, 2021, 4:55 PM IST
ಹೊನ್ನಾಳಿ: ಶಾಸಕ ಎಂ.ಪಿ. ರೇಣುಕಾಚಾರ್ಯ ಅವರಿಗೆ ಸಚಿವ ಸ್ಥಾನ ಲಭಿಸುವುದಿಲ್ಲ ಎಂದು ತಾಲೂಕಿನ ಮಾರಿಕೊಪ್ಪ ಗ್ರಾಮದ
ಗ್ರಾಮ ದೇವತೆ ಹಾಗೂ ಹೊನ್ನಾಳಿ ಹಿರೇಕಲ್ಮಠದ ಚನ್ನಪ್ಪಸ್ವಾಮಿ ಅವರ ಸಹೋದರಿ ಹಳದಮ್ಮದೇವಿ ಪ್ರಸಾದ ಕೊಟ್ಟಿರುವ ವಿಷಯ ಈಗ ಅಂತರಜಾಲದಲ್ಲಿ ವೈರಲ್ ಆಗಿದೆ.
ಸಿಎಂ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರಿಗೆ ಸಚಿವ ಸ್ಥಾನ ದೊರಕುವ ಬಗ್ಗೆ ರೇಣುಕಾಚಾರ್ಯ
ಅಭಿಮಾನಿಗಳು, ಕಾರ್ಯಕರ್ತರು ಕಳೆದ ವಾರ ಹಳದಮ್ಮದೇವಿಗೆ ವಿಶೇಷ ಪೂಜೆ ಸಲ್ಲಿಸಿ ಸಚಿವ ಸಂಪುಟದಲ್ಲಿ ಸ್ಥಾನ ಸಿಗುವುದಾದರೆ ಬಲಗಡೆ ಹೂ ಕೊಡು, ಸಚಿವ ಸ್ಥಾನ ದೊರೆಯದಿದ್ದರೆ ಎಡಗಡೆ ಹೂ ಕೊಡು ತಾಯಿ ಎಂದು ಬೇಡಿಕೊಂಡಾಗ ಎಡಗಡೆ ಹೂಗಳು ಉದರಿದ್ದವು ಎಂದು ತಿಳಿದು ಬಂದಿದೆ.
ಇದನ್ನೂ ಓದಿ:ಟೋಕಿಯೊ ಒಲಿಂಪಿಕ್ಸ್: ಕಂಚು ಗೆದ್ದ ಕುಸ್ತಿಪಟು ಭಜರಂಗ್ ಪೂನಿಯಾ
ಮಾರಿಕೊಪ್ಪ ಗ್ರಾಮದ ಹಳದಮ್ಮದೇವಿ ಲಕ್ಷಾಂತರ ಭಕ್ತರ ಪಾಲಿನ ಆರಾಧ್ಯ ದೇವಿ. ಭಕ್ತರ ಇಷ್ಟಾರ್ಥ ಸಿದ್ಧಿಸುವ ದೇವಿ ಎಂದು ಪ್ರಖ್ಯಾತಿ ಇದೆ. ಕಾಕತಾಳಿಯವೋ ಏನೋ ಎಂಬಂತೆ ಬಿಎಸ್ವೈ ಆಪ್ತರಾಗಿದ್ದ ರೇಣುಕಾಚಾರ್ಯ ಅವರಿಗೆ ಈ ಬಾರಿ ಸಚಿವ ಸ್ಥಾನ ಗ್ಯಾರಂಟಿ ಎಂಬ ಮಾತು ಸುಳ್ಳಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ
Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ
Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು
ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ