Hampi: ಕೇಂದ್ರದ ಸ್ವದೇಶ್ ದರ್ಶನ್ ಯೋಜನೆಗೆ ಹಂಪಿ ಆಯ್ಕೆ
Team Udayavani, Aug 20, 2023, 11:16 PM IST
ಹೊಸಪೇಟೆ: ವಿಶ್ವವಿಖ್ಯಾತ ಹಂಪಿ ಸ್ವದೇಶ್ ದರ್ಶನ್ ಯೋಜನೆಗೆ ಆಯ್ಕೆಯಾಗಿದ್ದು, ಹಂಪಿ ಪ್ರವಾಸೋ ದ್ಯಮಕ್ಕೆ ಮತ್ತಷ್ಟು ಮೆರಗು ಹೆಚ್ಚಲಿದೆ. ಹಂಪಿ ಅಭಿವೃದ್ಧಿಗೆ ಸಂಬಂಧಿಸಿ ವಿವಿಧ ಪ್ರಸ್ತಾವನೆಗಳ ಕುರಿತು ಚರ್ಚಿಸಲು ಜಿಲ್ಲಾ ಧಿಕಾರಿಗಳ ಅಧ್ಯಕ್ಷತೆ ಯಲ್ಲಿ ಆ.23ರಂದು ಸಭೆ ನಡೆಯ ಲಿದೆ. ಭಾರತೀಯ ಪುರಾತತ್ವ ಸರ್ವೆಕ್ಷಣೆ ಇಲಾಖೆ, ಹಂಪಿ ವಿಶ್ವ ಪರಂಪರೆ ಪ್ರದೇಶಾಭಿವೃದ್ಧಿ ನಿರ್ವಹಣ ಪ್ರಾಧಿಕಾರ ಸಹಿತ ಇತರ ಇಲಾಖೆಗಳು ಒಳಗೊಂಡ ಸಭೆ ಯಲ್ಲಿ ಹಂಪಿ ಪ್ರವಾಸೋದ್ಯ ಮದ ಅಭಿವೃದ್ಧಿಗೆ ರೂಪ ರೇಷೆಗಳನ್ನು ಸಿದ್ಧಪಡಿಸಲಿವೆ.
ದೇಶದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಆರಂಭಿಸಿರುವ ಸ್ವದೇಶ್ ದರ್ಶನ್ ಯೋಜನೆ ಹಂಪಿ ಪ್ರವಾ ಸೋದ್ಯಮ ಸಮಗ್ರ ಅಭಿವೃದ್ಧಿಗೆ ಮುನ್ನುಡಿ ಬರೆಯ ಲಿದೆ. ಸ್ವದೇಶ್ ದರ್ಶನ್ ಯೋಜನೆಯು ದೇಶದ ಪ್ರವಾಸೋದ್ಯಮ ಅಭಿವೃದ್ಧಿ ಪಥದಲ್ಲಿ ಹೊಸ ಮೈಲಿಗಲ್ಲಾಗಿದೆ. ಭಾರತ ದಲ್ಲಿ ಪ್ರೇಕ್ಷಣೀಯ ಸ್ಥಳಗಳ ಸಂಖ್ಯೆಗೆ ಕೊರತೆಯಿಲ್ಲ. ಹೀಗಾಗಿ ದೇಶದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಕೇಂದ್ರ ಪ್ರವಾಸೋದ್ಯಮ ಸಚಿವಾಲಯದ ಸ್ವದೇಶ್ ದರ್ಶನ್ ಯೋಜನೆ ಮಹತ್ವದ್ದಾಗಿದೆ. ವಿಭಿನ್ನ ವಿಷಯದ ಪ್ರವಾಸಿ ಸರ್ಕ್ನೂಟ್ಗಳನ್ನು ಸಂಯೋಜಿಸಲಾಗಿದೆ. ಕೇಂದ್ರ ಸರಕಾರ ಈ ಯೋಜನೆಯನ್ನು 2015ರಲ್ಲಿ ಆರಂಭಿಸಿದೆ.