ಚಿಕ್ಕಬಳ್ಳಾಪುರ: ಜಿಪಂ ಅಧ್ಯಕ್ಷರ ರಾಜೀನಾಮೆಗೆ ಕೈ ವರಿಷ್ಠರ ಸೂಚನೆ
Team Udayavani, Sep 23, 2019, 3:57 PM IST
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಪಂ ಅಧ್ಯಕ್ಷರಾಗಿ ಕಾರ್ಯ ನಿರ್ವವಹಿಸುತ್ತಿದ್ದ ಹೆಚ್.ವಿ.ಮಂಜುನಾಥ್ ಅವರನ್ನು ರಾಜೀನಾಮೆ ನೀಡುವಂತೆ ಕಾಂಗ್ರೆಸ್ ವರಿಷ್ಟರು ಸೂಚಿಸಿರುವುದು ಜಿಲ್ಲೆಯ ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲ ಕೆರಳಿಸಿದೆ.
ಈ ಹಿಂದೆ ಒಮ್ಮೆ ಜಿಪಂ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದ ಹೆಚ್.ವಿ.ಮಂಜುನಾಥ, ವರಿಷ್ಟರ ಸೂಚನೆಯಂತೆ ರಾಜೀನಾಮೆ ವಾಪಸ್ಸು ಪಡೆದು ಅಧ್ಯಕ್ಷರಾಗಿ ಮುಂದುವರೆದಿದ್ದರು. ಆದರೆ ಇದೀಗ ಮತ್ತೆ ರಾಜೀನಾಮೆ ಪಡೆದಿರುವುದು ಸಾಕಷ್ಟು ಕುತೂಹಲ ಕೆರಳಿಸಿದೆ. ಸದ್ಯ ಜಿಪಂ ಅಧ್ಯಕ್ಷ ಮಂಜುನಾಥ ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯದ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಸರ್ಕಾರದ ಪ್ರದಾನ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಜಿಪಂ ಅಧ್ಯಕ್ಷ ಮಂಜುನಾಥ ಹೇಳಿದ್ದೇನು?
ಬದಲಾದ ರಾಜಕೀಯ ಪರಿಸ್ಥಿತಿಗಳ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಸ್ಥಾನಕ್ಕೆ ನೀಡಿದ ರಾಜೀನಾಮೆಯನ್ನು ತಾತ್ಕಾಲಿಕವಾಗಿ ಹಿಂಪಡೆಯಲು ಪಕ್ಷ ಸೂಚಿಸಿದ ಹಿನ್ನೆಲೆಯಲ್ಲಿ ಮತ್ತೆ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆದಿದ್ದೆ. ಈ ಅವಧಿಯಲ್ಲೂ ಈ ಸ್ಥಾನದಿಂದ ನಿರ್ವಹಿಸಬೇಕಾದ ಕರ್ತವ್ಯವನ್ನು ಆತ್ಮಸಾಕ್ಷಿಗನುಗುಣವಾಗಿ ನಿರ್ವಹಿಸಿದ್ದೇನೆ.
ಆ ತಾತ್ಕಾಲಿಕ ಅವಧಿ ಮುಗಿದಿದ್ದು, ಇಂದಿನಿಂದ ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಸ್ಥಾನದಿಂದ ನಿರ್ಗಮಿಸಿದ್ದೇನೆ ಎಂದರು.
ಅವಕಾಶ ಕಲ್ಪಿಸಿದ ಪಕ್ಷದ ನಿರ್ದೇಶನಗಳಿಗೆ ಬದ್ಧರಾಗಿ ನಡೆಯುವುದು ಇಂದಿನ ರಾಜಕೀಯ ಪರಿಸ್ಥಿತಿಯಲ್ಲಿ ಸಾರ್ವಜನಿಕ ಜೀವನದ ನೀತಿ ಸಂಹಿತೆಯ ಭಾಗವೆಂದು ಭಾವಿಸುತ್ತೇನೆ. ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದಗಳು ಎಂದ ಅವರು, ಮೂರು ಹಂತಗಳ ಪಂಚಾಯ್ತಿರಾಜ್ ವ್ಯವಸ್ಥೆ ಯಶಸ್ವಿಯಾಗಿ ಅಧಿಕಾರ ವಿಕೇಂದ್ರೀಕರಣದ ಆಶಯಗಳು ಈಡೇರಬೇಕೆಂದರೆ ಜನಪ್ರತಿನಿಧಿಗಳಿಗೆ ಇನ್ನೂ ಹೆಚ್ಚಿನ ಸ್ವಾತಂತ್ರ್ಯ, ಅನುದಾನ ಮತ್ತು ಸಮಯ ಇರಬೇಕೆಂಬ ನನ್ನ ಈ ಹಿಂದಿನ ಅನಿಸಿಕೆಯನ್ನು ಮತ್ತೊಮ್ಮೆ ಪುನರುಚ್ಚರಿಸಬಯಸುತ್ತೇನೆ. ಹಾಗೆಯೇ ಅಧಿಕಾರ ವಿಕೇಂದ್ರೀಕರಣದ ಉದ್ದೇಶವನ್ನು ತಳಮಟ್ಟದ ಜನಪ್ರತಿನಿಧಿಗಳು ಮನಗಾಣದಿದ್ದರೂ ಅಪಾಯವಿದೆ. ಈ ಹಿನ್ನೆಲೆಯಲ್ಲಿ ತಜ್ಞರ ಮಾರ್ಗದರ್ಶನದಲ್ಲಿ ಸಾರ್ವಜನಿಕ ಚರ್ಚೆ ನಡೆಯಲಿ ಎಂದು ಆಶಿಸುತ್ತೇನೆ ಎಂದರು.
ಪ್ರಕಾಶ್ ಗೆ ಅಧ್ಯಕ್ಷ ಸ್ಥಾನ
ಸದ್ಯ ಚಿಕ್ಕಬಳ್ಳಾಪುರದ ಅರ್ನಹ ಶಾಸಕ ಡಾ.ಕೆ.ಸುಧಾಕರ್ ಪರ ಗುರುತಿಸಿಕೊಂಡಿರುವ ಜಿಲ್ಲೆಯ ಮಂಚೇನಹಳ್ಳಿ ಜಿಪಂ ಸದಸ್ಯ ಪಿ.ಎನ್.ಪ್ರಕಾಶ್ ಗೆ ಅಧ್ಯಕ್ಷ ಸ್ತಾನ ನೀಡಿ ಅವರನ್ನು ಪಕ್ಷದಲ್ಲಿಯೆ ಉಳಿಸಿಕೊಳ್ಳುವ ತಂತ್ರ ನಡೆಸಿ ಹೆಚ್. ವಿ.ಮಂಜುನಾಥರಿಂದ ರಾಜೀನಾಮೆ ಪಡೆಯಲಾಗಿದೆ ಎನ್ನಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್