ಹಿಜಾಬ್-ಕೇಸರಿ ವಿವಾದ : 6 ಪ್ರಕರಣ ದಾಖಲು ; ಎಸ್ಪಿ ರಿಷ್ಯಂತ್ ಹೇಳಿಕೆ
Team Udayavani, Feb 10, 2022, 11:16 AM IST
ಹರಿಹರ: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ನಡೆದ ಹಿಜಾಬ್ -ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಒಟ್ಟು 6 ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ
ನಡೆಯುತ್ತಿದೆ ಎಂದು ಎಸ್ಪಿ ಸಿ.ಬಿ. ರಿಷ್ಯಂತ್ ತಿಳಿಸಿದ್ದಾರೆ.
ಗಲಾಟೆ ನಡೆದ ಸ್ಥಳಕ್ಕೆ ಪ್ರಭಾರಿ ಐಜಿಪಿ ಸತೀಶ್ ಕುಮಾರ್ ಅವರೊಂದಿಗೆ ಬುಧವಾರ ಭೇಟಿ ನೀಡಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಕಲ್ಲು ತೂರಾಟ ನಡೆಸಿ
ಪೊಲೀಸರನ್ನು ಗಾಯಗೊಳಿಸಿರುವ ಹಾಗೂ ವಾಹನ ಜಖಂಗೊಳಿಸಿರುವ ಬಗ್ಗೆ ನಾಲ್ಕು ಪ್ರಕರಣಗಳು, ಕಾಲೇಜು ಆವರಣದೊಳಗೆ ವಿದ್ಯಾರ್ಥಿಗಳ ಪರಸ್ಪರ ಗಲಾಟೆ ಮತ್ತು ಕಲ್ಲು
ತೂರಾಟದಲ್ಲಿ ಗಾಯಗೊಂಡಿರುವ ಕುರಿತು ತಲಾ ಒಂದೊಂದು ಪ್ರಕರಣ ದಾಖಲಿಸಿಕೊಂಡಿದ್ದು, ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ ಎಂದರು.
ಗಲಾಟೆ ಬಗ್ಗೆ ಸಾಕಷ್ಟು ವಿಡಿಯೋ ಮತ್ತು ಫೋಟೋಗಳು ಲಭ್ಯವಿದ್ದು, ಇವುಗಳನ್ನು ಪರಿಶೀಲಿಸಿ ತಪ್ಪಿತಸ್ಥರನ್ನು ನಿಖರವಾಗಿ ಗುರುತಿಸಲಾಗುವುದು. ಅಂಥವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅಮಾಯಕರನ್ನಾಗಲಿ, ಅನವಶ್ಯಕವಾಗಿ ಯಾರನ್ನೇ ಆಗಲಿ ಪ್ರಕರಣದಲ್ಲಿ ಸಿಲುಕಿಸುವ, ಬಂಧಿಸುವ ಪ್ರಶ್ನೆಯೇ ಇಲ್ಲ. ಕಾಲೇಜಿನ ಸಿಬ್ಬಂದಿ ಹಾಗೂ ಶಾಸಕರೊಂದಿಗೆ ಘಟನೆ ಬಗ್ಗೆ ಚರ್ಚಿಸಲಾಗಿದೆ.
ಘಟನೆ ನಡೆದಾಗ ಹಾಜರಿದ್ದ ಹಲವಾರು ಮುಖಂಡರೂ ಸಂಪರ್ಕದಲ್ಲಿದ್ದು, ಅವರಿಂದಲೂ ಮಾಹಿತಿ ಪಡೆಯಲಾಗುತ್ತಿದೆ. ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರು ಯಾವುದೇ ಗುಂಪಿಗೆ
ಸೇರಿದ್ದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು. ಹರಿಹರ ನಗರದಲ್ಲಿ 144 ಸೆಕ್ಷನ್ ಜಾರಿಯಲ್ಲಿದ್ದು ಅನವಶ್ಯಕ ಓಡಾಟ, ಗುಂಪುಗೂಡುವಿಕೆ ನಿಷೇಧಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ
ಹೆಚ್ಚುವರಿ ಪೊಲೀಸ್ ಪಡೆ ನಿಯೋಜಿಸಿ ಸೂಕ್ತ ಬಂದೋಬಸ್ತ್ ಮಾಡಲಾಗಿದ್ದು ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ ಎಂದರು.
ಪ್ರಭಾರಿ ಡಿವೈಎಸ್ಪಿ ಬಸವರಾಜಪ್ಪ, ಸಿಪಿಐ ಯು. ಸತೀಶ್ಕುಮಾರ್ ಇದ್ದರು.
ಇದನ್ನೂ ಓದಿ : ಹಿಜಾಬ್ ವಿವಾದ ಅಂತರರಾಷ್ಟ್ರೀಯ ಮಟ್ಟದಿಂದ ಇಲ್ಲಿಗೆ ಬರುತ್ತದೆ : ಸಿಎಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
MUST WATCH
ಹೊಸ ಸೇರ್ಪಡೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ