ಹರಿಹರ ಪಲ್ಲತ್ತಡ್ಕ: ವೈನ್‌ ಶಾಪ್‌ಗೆ ವಿರೋಧ, ವಿಶೇಷ ಗ್ರಾಮಸಭೆಗೆ ಆಗ್ರಹ


Team Udayavani, Mar 18, 2021, 4:10 AM IST

ಹರಿಹರ ಪಲ್ಲತ್ತಡ್ಕ: ವೈನ್‌ ಶಾಪ್‌ಗೆ ವಿರೋಧ, ವಿಶೇಷ ಗ್ರಾಮಸಭೆಗೆ ಆಗ್ರಹ

ಸುಬ್ರಹ್ಮಣ್ಯ: ಹರಿಹರ ಪಲ್ಲತ್ತಡ್ಕ ಗ್ರಾಮದಲ್ಲಿ ವೈನ್‌ ಶಾಪ್‌ ತೆರೆಯಲು ಪ್ರಯತ್ನ ನಡೆಸುತ್ತಿರುವುದರ ಬೆನ್ನಲ್ಲೆ ಇದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಹರಿಹರ ಪಲ್ಲತ್ತಡ್ಕ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು, ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಒಕ್ಕೂಟದವರು ಸೇರಿದಂತೆ ಎಲ್ಲರು ವೈನ್‌ ಶಾಪ್‌ ತೆರೆಯುವುದನ್ನು ವಿರೋಧಿಸಿದ್ದು, ಶ್ರೀ ಹರಿಹರೇಶ್ವರ ದೇವಸ್ಥಾನದ ಆವರಣದಲ್ಲಿ ಪ್ರಮುಖರ ಸಭೆ ನಡೆಯಿತು. ಸಭೆಯಲ್ಲಿ ಪಕ್ಷ ಭೇದ ಮರೆತು ಎಲ್ಲರು ವೈನ್‌ ಶಾಪ್‌ ತೆರೆಯುವುದಕ್ಕೆ ವಿರೋಧ ವ್ಯಕ್ತಪಡಿಸಿದರು.

1994ರಲ್ಲಿ ಮದ್ಯದಂಗಡಿ ವಿರೋಧಿ ಹೋರಾಟದ ಅಧ್ಯಕ್ಷರಾಗಿದ್ದ ದುರ್ಗಾ ದಾಸ್‌ ಮಲ್ಲಾರ ಅಂದಿನ ಹೋರಾಟಗಳ ಕುರಿತು ಬೆಳಕು ಚೆಲ್ಲಿದರು. ಗ್ರಾ.ಪಂ. ಮಾಜಿ ಅಧ್ಯಕ್ಷ ಹಿಮ್ಮತ್‌ ಕೆ.ಸಿ., ಸತೀಶ್‌ ಕೂಜುಗೋಡು, ವಿನೂಪ್‌ ಮಲ್ಲಾರ, ಮಾಧವ ಚಾಂತಳ, ಪ್ರದೀಪ್‌ ಕುಮಾರ್‌ ಕೆ. ಎಲ್‌., ಸತೀಸ್‌ ಟಿ.ಎನ್‌. ಮೊದಲಾದವರು ವಿರೋಧ ವ್ಯಕ್ತಪಡಿಸಿ ಮಾತನಾಡಿದರು.

ವಿಶೇಷ ಗ್ರಾಮ ಸಭೆ ನಡೆಸುವುದು, ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಸಹಿತ ಹಲವಾರು ವಿಚಾರಗಳ ಕುರಿತು ತೀರ್ಮಾನ ಕೈಗೊಳ್ಳಲಾಯಿತು.

ವೇದಿಕೆಯಲ್ಲಿ ಧರ್ಮಸ್ಥಳ ಗ್ರಾಮಾ ಭಿವೃದ್ದಿ ಯೋಜನೆಯ ತಾಲೂಕು ಯೋಜನಾಧಿಕಾರಿ ಸಂತೋಷ್‌ ಕುಮಾರ್‌ ರೈ, ದುರ್ಗಾದಾಸ್‌ ಮಲ್ಲಾರ, ಹರಿಹರ ಗ್ರಾ.ಪಂ. ಅಧ್ಯಕ್ಷ ಜಯಂತ ಬಾಳುಗೋಡು, ಉಪಾಧ್ಯಕ್ಷ ವಿಜಯ, ಸದಸ್ಯರಾದ ಬಿಂದು ಪಿ., ಅನಂತ, ನ್ಯಾಯವಾದಿ ಪ್ರದೀಪ್‌ ಕುಮಾರ್‌ ಕೆ.ಎಲ್‌. ಪುಷ್ಪರಾಜ್‌ ಪಡು³ ಉಪಸ್ಥಿತರಿದ್ದರು.

ಸಮಿತಿ ರಚನೆ
ಸಭೆಯಲ್ಲಿ ಮದ್ಯದಂಗಡಿ ವಿರೋಧಿ ಸಮಿತಿ ರಚಿಸಲಾಯಿತು. ಗೌರವಾ ಧ್ಯಕ್ಷರಾಗಿ ದುರ್ಗದಾಸ್‌ ಮಲ್ಲಾರ, ಅಧ್ಯಕ್ಷರಾಗಿ ಹಿಮ್ಮತ್‌ ಕೆ.ಸಿ., ಕಾರ್ಯದರ್ಶಿ ಬಾಲಸುಬ್ರಹ್ಮಣ್ಯ, ಜತೆ ಕಾರ್ಯದರ್ಶಿ ಬಿಂದು ಪಿ. ಉಪಾದ್ಯಕ್ಷ ಹಾಗೂ ಕಾನೂನು ಸಲಹೆಗಾರರಾಗಿ ಪ್ರದೀಪ್‌ ಕೆ.ಎಲ್‌., ಉಪಾದ್ಯಕ್ಷರುಗಳಾಗಿ ಸತೀಶ್‌ ಟಿ.ಎನ್‌, ಚಂದ್ರಹಾಸ ಶಿವಾಲ, ಮಾದವ ಚಾಂತಳ, ಅನಂತ ಅಂಗಣ, ಜಯರಾಮ ಕರಂಗಲ್ಲು, ನಿತ್ಯಾನಂದ ಭೀಮಗುಳಿ, ಗೌರವ ಸಲಹೆಗಾರರಾಗಿ ಪಂ. ಹಾಗೂ ಒಕ್ಕೂಟದ ಎಲ್ಲ ಅಧ್ಯಕ್ಷರು, ಸದಸ್ಯರುಗಳನ್ನು ಆಯ್ಕೆ ಮಾಡಲಾಯಿತು.

ರಾಜ್ಯದಲ್ಲೇ ಗಮನ ಸೆಳೆದಿತ್ತು
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ 1994ರಲ್ಲಿ ಮದ್ಯದಂಗಡಿ ವಿರೋಧಿ ಚಳುವಳಿ ಪ್ರಥಮ ಬಾರಿಗೆ ಈ ಭಾಗದಲ್ಲಿ ನಡೆದಿತ್ತು. ಈ ಭಾಗದ ಎಲ್ಲ ಗ್ರಾಮದವರು ಒಗ್ಗಟ್ಟು ಪ್ರದರ್ಶಿಸಿದ್ದರು. ನಾಗರಿಕರ ಹೋರಾಟದ ಫ‌ಲವಾಗಿ 1994 ಜುಲೈ ತಿಂಗಳಿನಿಂದ ಮದ್ಯದಂಗಡಿ ತೆರವುಗೊಂಡಿತ್ತು. ಪ್ರಥಮ ಬಾರಿಗೆ ರಾಜ್ಯದಲ್ಲೇ ಸರಕಾರದ ಲೈಸೆನ್ಸ್‌ ಪಡೆದ ಮದ್ಯದಂಗಡಿಯನ್ನು ಬಂದ್‌ ಆದ ಗ್ರಾಮ ಎಂಬ ಹೆಗ್ಗಳಿಕೆ ಪಡೆದಿತ್ತು. ಅನಂತರದಲ್ಲಿ ಊರಿನಲ್ಲಿ ನೆಮ್ಮದಿ ಮೂಡಿತ್ತು. ಇದೀಗ ಮತ್ತೆ ಅಂಗಡಿ ತೆರೆಯುವದಕ್ಕೆ ವ್ಯಾಪಕ ವಿರೋಧ ವ್ಯಕ್ರವಾಗಿದ್ದು, ಯೋಜನೆಯವರು, ಸಾರ್ವಜನಿಕರು ವಿರೋಧ ವ್ಯಕ್ತಪಡಿಸಿ ಗ್ರಾ.ಪಂ.ಗೆ ಈಗಾಗಲೆ ಮನವಿ ಸಲ್ಲಿಸಿದ್ದಾರೆ.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.