ಹರ್ಯಾಣಕ್ಕೆ ಪ್ರವೇಶಿಸಿದ ಮಿಡತೆಗಳ ಹಿಂಡು
Team Udayavani, Jun 28, 2020, 10:32 AM IST
ಗುರುಗ್ರಾಮ: “ಬೆಳೆ ಭಕ್ಷಕ’ ಮರು ಭೂಮಿ ಮಿಡತೆಗಳು ಈಗ ಹರ್ಯಾಣ ಪ್ರವೇಶಿಸಿವೆ. ಪಾಕಿಸ್ಥಾನದಿಂದ ರಾಜಸ್ಥಾನ, ಮಹಾರಾಷ್ಟ್ರ, ಉತ್ತರಪ್ರದೇಶಕ್ಕೆ ಧಾವಿಸಿದ್ದ ಮಿಡತೆಗಳು ಶನಿವಾರ ಹರಿಯಾಣದ ಗುರು ಗ್ರಾಮದಲ್ಲಿ ಕಾಣಿಸಿಕೊಂಡಿವೆ. ಅಸಂಖ್ಯ ಮಿಡತೆಗಳ ಹಿಂಡು ಮರಗಳ ಮೇಲೆ, ಮನೆಗಳ ಬಾಲ್ಕನಿಯಲ್ಲಿ ಬೀಡು ಬಿಟ್ಟಿವೆ. ಜನರು ತಮ್ಮ ಮನೆಗಳ ಬಾಗಿಲು ಹಾಗೂ ಕಿಟಕಿಗಳನ್ನು ಮುಚ್ಚಿದ್ದಾರೆ. ಇನ್ನೂ ಕೆಲವರು, ಈ ಮಿಡತೆಗಳ ಫೋಟೋ ಹಾಗೂ ವಿಡಿಯೋಗಳನ್ನು ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿ ಕೊಳ್ಳುತ್ತಿದ್ದಾರೆ.
ಮಿಡತೆ ಹಾವಳಿ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾಡಳಿತ, ಮನೆಗಳ ಹತ್ತಿರ ಮಿಡತೆಗಳು ಬಂದರೆ ಪಾತ್ರೆ ಮತ್ತಿತರ ವಸ್ತುಗಳಿಂದ ಶಬ್ದ ಮಾಡಬೇಕು. ಅಲ್ಲದೇ ರೈತರು ಕ್ರಿಮಿನಾಶಕ ಸಿಂಪಡಣೆ ಡ್ರಮ್ ಸೆಟ್ಗಳನ್ನು ಇಟ್ಟುಕೊಳ್ಳಬೇಕು ಎಂದು ಸಲಹೆ ನೀಡಿದೆ. ಪಾಕಿಸ್ಥಾನದ ಗಡಿ ಭಾಗದಿಂದ ಬಂದಿರುವ ಈ ಮಿಡತೆಗಳ ಹಿಂಡು ಕೆಲ ದಿನಗಳ ಹಿಂದೆ ಮಹಾರಾಷ್ಟ್ರ, ರಾಜಸ್ಥಾನ, ಪಂಜಾಬ್, ಉತ್ತರಪ್ರದೇಶದಲ್ಲಿ ಕಾಣಿಸಿಕೊಂಡಿದ್ದವು. ಮುಂದೆ ರಾಷ್ಟ್ರ ರಾಜಧಾನಿ ದೆಹಲಿಗೂ ಧಾವಿಸುವ ಸಾಧ್ಯತೆ ಇದೆ. ಇತ್ತೀಚೆಗೆ ರಾಜಸ್ಥಾನದಲ್ಲಿ ಡ್ರೋನ್ ಮೂಲಕ ಕ್ರಿಮಿನಾಶಕ ಸಿಂಪಡಿಸಿ ಮಿಡತೆಗಳನ್ನು ಕೊಲ್ಲಲಾಗಿತ್ತು. ಮಿಡತೆಗಳ ನಿಯಂತ್ರಣಕ್ಕಾಗಿ ಕೇಂದ್ರ ಸರಕಾರ 11 ಕೇಂದ್ರಗಳನ್ನು ತೆರೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?