ಕೋವಿಡ್ ಪ್ರಕರಣ ಇಳಿಮುಖ: ಹರ್ಯಾಣದಲ್ಲಿ ಜೂನ್ 1ರಿಂದ 9-12ನೇ ತರಗತಿ ಆರಂಭ
ಒಟ್ಟು 7,47,740 ಕೋವಿಡ್ ಪ್ರಕರಣ ವರದಿಯಾಗಿದ್ದು, ಸಾವಿನ ಸಂಖ್ಯೆ 7,841ಕ್ಕೆ ಏರಿಕೆಯಾಗಿದೆ
Team Udayavani, May 27, 2021, 2:39 PM IST
ನವದೆಹಲಿ: ದೇಶಾದ್ಯಂತ ಕೋವಿಡ್ 19 ಎರಡನೇ ಅಲೆ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದ್ದು, ಏತನ್ಮಧ್ಯೆ ಹರ್ಯಾಣ ಸರ್ಕಾರ ಜೂನ್ 1ರಿಂದ 9ರಿಂದ 12ನೇ ತರಗತಿ ಆರಂಭಿಸುವ ಸಾಧ್ಯತೆ ಇದ್ದಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಉಡುಪಿ ಮಕ್ಕಳ ದತ್ತು ಸ್ವೀಕಾರ ಕೇಂದ್ರದ 12 ಮಕ್ಕಳು ಸೇರಿ 21 ಮಂದಿಗೆ ಕೋವಿಡ್ ಪಾಸಿಟಿವ್
ಮಾಧ್ಯಮದ ವರದಿ ಪ್ರಕಾರ, ಬೇಸಿಗೆ ರಜೆ ಮುಗಿದ ನಂತರ 9ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲಾ, ಕಾಲೇಜು ಆರಂಭವಾಗಲಿದೆ ಎಂದು ಹೇಳಿದೆ. ಕೋವಿಡ್ 19 ಮಾರ್ಗಸೂಚಿ ಅನ್ವಯ ಜೂನ್ 1ರಿಂದ 9.12ನೇ ತರಗತಿ ಆರಂಭವಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಶಾಲೆಗಳನ್ನು ಪುನರಾರಂಭಿಸುವ ಸೂಚನೆಯನ್ನು ಶಿಕ್ಷಣ ನಿರ್ದೇಶನಾಲಯ ರಾಜ್ಯದ ಎಲ್ಲಾ ಜಿಲ್ಲಾ ಶಿಕ್ಷಣ ಕಚೇರಿಗಳಿಗೆ ಕಳುಹಿಸಿದೆ. ಅಲ್ಲದೇ ಶಾಲೆಗಳಲ್ಲಿ ಇರುವ ವಿದ್ಯಾರ್ಥಿಗಳು ಮತ್ತು ಬೆಂಚ್ ಗಳ ಸಂಖ್ಯೆಯ ಮಾಹಿತಿಯನ್ನು ಕಳುಹಿಸಿಕೊಡುವಂತೆ ನಿರ್ದೇಶನ ನೀಡಿದೆ. ಒಂದು ಬೆಂಚ್ ನಲ್ಲಿ ಒಬ್ಬನೇ ವಿದ್ಯಾರ್ಥಿ
ಕುಳಿತುಕೊಳ್ಳಲು ಅವಕಾಶ ನೀಡಲಾಗಿದೆ ಎಂದು ತಿಳಿಸಿದೆ.
ಮಾಸ್ಕ್ ಕಡ್ಡಾಯವಾಗಿ ಬಳಸಬೇಕು, ಸಾಮಾಜಿಕ ಅಂತರ ಹಾಗೂ ಸ್ಯಾನಿಟೈಸರ್ ಅನ್ನು ಬಳಸುವ ಮೂಲಕ ವಿದ್ಯಾರ್ಥಿಗಳು ಕೋವಿಡ್ 19 ಮಾರ್ಗಸೂಚಿಯನ್ನು ಕಡ್ಡಾಯವಾಗಿ ಅನುಸರಿಸಬೇಕು ಎಂದು ವರದಿ ತಿಳಿಸಿದೆ.
ರಾಜ್ಯದಲ್ಲಿ ಕೋವಿಡ್ 19 ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮೇ 26ರಂದು 3,183 ಸಾವು ಸಂಭವಿಸಿತ್ತು. ಒಟ್ಟು 7,47,740 ಕೋವಿಡ್ ಪ್ರಕರಣ ವರದಿಯಾಗಿದ್ದು, ಸಾವಿನ ಸಂಖ್ಯೆ 7,841ಕ್ಕೆ ಏರಿಕೆಯಾಗಿದೆ ಎಂದು ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್