Census: ಜಾತಿಗಣತಿ ಸ್ಲೋಗನ್‌ನಿಂದ ಹಿಂದೆಸರಿಯಿತೇ ಕಾಂಗ್ರೆಸ್‌?


Team Udayavani, Oct 24, 2023, 11:00 PM IST

CONGRESS FLAG IMP

ಬಿಹಾರದಲ್ಲಿ ಜಾತಿ ಗಣತಿ ವರದಿ ಬಿಡುಗಡೆಯಾದ ಬಳಿಕ ಪಂಚ­ರಾಜ್ಯ ಚುನಾವಣೆಗಳು ಹಾಗೂ ಮುಂಬ­ರುವ ಲೋಕಸಭೆ ಚುನಾ­ವಣೆಯಲ್ಲಿ ಇದನ್ನೇ “ಅಸ್ತ್ರ’ವಾಗಿ ಬಳಸಿಕೊಂಡು ಬಿಜೆಪಿಯನ್ನು ಎದುರಿಸಲು ಮುಂದಾಗಿದ್ದ ಕಾಂಗ್ರೆಸ್‌, ಈಗ ತನ್ನ ನಡೆಗೆ ತಾನೇ “ಬ್ರೇಕ್‌” ಹಾಕಿಕೊಂಡಿದೆ. ಅ.9ರಂದು ನಡೆದ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆಯ ಬಳಿಕ ಕಾಂಗ್ರೆಸ್‌ ನಾಯಕರು “ಜಾತಿಗಣತಿ” ಅಸ್ತ್ರದ ಪ್ರಯೋಗವನ್ನು ಕಡಿಮೆ ಮಾಡಿದ್ದಾರೆ.

ಬಿಹಾರ ಗಣತಿ ವರದಿ ಬಿಡುಗಡೆ­ಯಾಗುತ್ತಲೇ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯವರು “ಜಿತ್ನಾ ಆಬಾದಿ, ಉತ್ನಾ ಹಕ್‌” (ಜನಸಂಖ್ಯೆಗೆ ಅನುಗುಣವಾಗಿ ಹಕ್ಕುಗಳು) ಎಂಬ ಉದ್ಘೋಷ ಹೊರಡಿಸಿದ್ದರು. ಅಲ್ಲದೆ ಅನಂತರ ತಾವು ಹೋದ ಕಡೆಯಲ್ಲೆಲ್ಲ ಅವರು ಇದೇ ಸ್ಲೋಗನ್‌ ಪುನರುಚ್ಚರಿಸುತ್ತಾ, ದೇಶಾ­ದ್ಯಂತ ಜಾತಿಗಣತಿ ನಡೆಸುವ ವಾಗ್ಧಾನವನ್ನೂ ನೀಡುತ್ತಿದ್ದರು. ಆದರೆ “ಜಾತಿಗಣತಿ” ಅಸ್ತ್ರವು ತಮಗೇ ತಿರುಗುಬಾಣವಾಗುವ ಲಕ್ಷಣಗಳು ಗೋಚರಿಸುತ್ತಿದ್ದಂತೆ ಕಾಂಗ್ರೆಸ್‌ ಉಲ್ಟಾ ಹೊಡೆದಿದೆ. ಅ.9ರ ಸಿಡಬ್ಲ್ಯುಸಿ ಸಭೆಯಲ್ಲಿ ಪಕ್ಷದ ಅನೇಕರು ಈ ಸ್ಲೋಗನ್‌ ಬಗ್ಗೆ ಆಕ್ಷೇಪವೆತ್ತಿದ್ದಾರೆ ಎನ್ನಲಾಗಿದೆ. ಈ ನಡೆಯು ದಕ್ಷಿಣದ ರಾಜ್ಯಗಳಲ್ಲಿ ಕಾಂಗ್ರೆಸ್‌ಗೆ ಹೊಡೆತ ನೀಡ­ಬಹುದು ಎಂದು ಕೆಲವು ಹಿರಿಯ ನಾಯಕರು ಅಭಿಪ್ರಾಯಪಟ್ಟಿ­ದ್ದಾರೆ.

ಅಲ್ಲದೇ ಕಾಂಗ್ರೆಸ್‌ ಈಗ ಜಾತಿಯ ವಿಚಾರ­ವಿಟ್ಟುಕೊಂಡು ಹೋರಾಟ ಆರಂಭಿಸಿದರೆ, ಬಿಜೆಪಿಯು ಧರ್ಮದ ಮಾನದಂಡದಲ್ಲಿ ಹೋರಾಟ ಶುರುವಿಟ್ಟುಕೊಂಡರೆ ಏನು ಮಾಡುವುದು ಎಂಬ ಪ್ರಶ್ನೆಯನ್ನೂ ಕೆಲವರು ಹಾಕಿದ್ದಾರೆ. ಆರಂಭದಲ್ಲೇ ಕಾಂಗ್ರೆಸ್‌ ಹಿರಿಯ ನಾಯಕ ಅಭಿಷೇಕ್‌ ಮನು ಸಿಂ Ì ಅವರು ಟ್ವೀಟ್‌(ಎಕ್ಸ್‌) ಮಾಡಿ, ಜಾತಿಗಣತಿಯ ಪ್ರತಿಕೂಲ ಪರಿಣಾಮಗಳ ಬಗ್ಗೆ ಎಚ್ಚರಿಸಿ, ಅನಂತರ ಟ್ವೀಟ್‌ ಡಿಲೀಟ್‌ ಮಾಡಿದ್ದರು. ಈ ಎಲ್ಲ ಬೆಳವಣಿಗೆಗಳ ಬಳಿಕ ಈ ವಿಚಾರದಲ್ಲಿ ತತ್‌ಕ್ಷಣ ಮುಂದಡಿ ಇಡದಂತೆ ಹಾಗೂ ಸ್ಲೋಗನ್‌ ಬಳಕೆ ಕಡಿಮೆಮಾಡುವಂತೆ ಪಕ್ಷದ ನಾಯಕರಿಗೆ ಹೈಕಮಾಂಡ್‌ನಿಂದ ಸೂಚನೆ ರವಾನೆಯಾಗಿದೆ ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.