ಹಾಸನ-ಮಂಗಳೂರು ರೈಲು ಮಾರ್ಗ: ಅತ್ಯಾಧುನಿಕ ಸಿಗ್ನಲ್ ಕಾರ್ಯಾರಂಭ
Team Udayavani, Oct 5, 2020, 10:28 AM IST
ಮಂಗಳೂರು: ಮಂಗಳೂರು – ಹಾಸನ ರೈಲು ಮಾರ್ಗದ ಎಡಕುಮೇರಿ ಹಾಗೂ ಕಡಗರವಳ್ಳಿ ನಿಲ್ದಾಣ ಮಧ್ಯೆ ಕೈಗೊಂಡಿದ್ದ ಅತ್ಯಾಧುನಿಕ ವ್ಯವಸ್ಥೆಗಳನ್ನು ಒಳಗೊಂಡ ಸಿಗ್ನಲ್ ವ್ಯವಸ್ಥೆ ಅಳವಡಿಕೆ ಕಾಮಗಾರಿ ಪೂರ್ಣಗೊಂಡು ಕಾರ್ಯಾರಂಭಿಸಿದೆ. ಹಾಸನ-ಮಂಗಳೂರು ರೈಲ್ವೇ ಅಭಿವೃದ್ಧಿ ನಿಗಮ (ಎಚ್ಎಂಆರ್ಡಿಸಿ) ಇದರ 4.4 ಕೋ.ರೂ. ವೆಚ್ಚವನ್ನು ಭರಿಸಿದೆ.
ಸಿಗ್ನಲ್ ವ್ಯವಸ್ಥೆ ಉನ್ನತೀಕರಣದಿಂದಾಗಿ ಈ ಮಾರ್ಗದಲ್ಲಿ ರೈಲು ಸಂಚಾರ ಸಾಮರ್ಥ್ಯ ಶೇ. 35ರಷ್ಟು ವೃದ್ಧಿಯಾಗಿದ್ದು, ಹೆಚ್ಚು
ಪ್ರಯಾಣಿಕರ ಹಾಗೂ ಸರಕು ಸಾಗಾಟ ರೈಲುಗಳ ಸಂಚಾರ ಸಾಧ್ಯವಾಗಲಿದೆ.
ಕಡಗರವಳ್ಳಿ ಹಾಗೂ ಎಡಕುಮೇರಿ ನಿಲ್ದಾಣಗಳಲ್ಲಿ ರೈಲುಗಳ ಕ್ರಾಸಿಂಗ್ ಸೌಲಭ್ಯಗಳು ಲಭ್ಯವಾಗಲಿದ್ದು ರೈಲುಗಳ ಸಂಚಾರ ಸಂಖ್ಯೆ ಗಳನ್ನು ಹೆಚ್ಚಿಸಲು ಸಾಧ್ಯವಾಗಲಿದೆ. ಈ ಮಾರ್ಗದಲ್ಲಿ 24 ತಾಸುಗಳಲ್ಲಿ ರೈಲುಗಳ ಸಂಚಾರ ಸಾಮರ್ಥ್ಯ 20ಕ್ಕೇರಲಿದೆ. ಪ್ರಸ್ತುತ 13 ರೈಲುಗಳು ಸಂಚರಿಸುತ್ತಿವೆ.
ಇದನ್ನೂ ಓದಿ :ಮುನ್ನೆಚ್ಚರಿಕೆಯೊಂದಿಗೆ ಮಂಗಳೂರು ದಸರಾ : ಈ ಬಾರಿ ದಸರಾ ಮೆರವಣಿಗೆ ಇಲ್ಲ
ಬೆಂಗಳೂರು- ಮಂಗಳೂರು ಸೆಂಟ್ರಲ್ ವಿಶೇಷ ರೈಲು ರದ್ದು
ಮಂಗಳೂರು: ವಾರದಲ್ಲಿ ನಾಲ್ಕು ದಿನ ಕುಣಿಗಲ್ ಮಾರ್ಗದಲ್ಲಿ ಸಂಚರಿಸುತ್ತಿದ್ದ ಬೆಂಗಳೂರು- ಮಂಗಳೂರು ಸೆಂಟ್ರಲ್- ಬೆಂಗಳೂರು ವಿಶೇಷ ಎಕ್ಸ್ಪ್ರೆಸ್ ರೈಲನ್ನು (06515/ 16) ತಾತ್ಕಾಲಿಕವಾಗಿ ರದ್ದು ಪಡಿಸುವುದಾಗಿ ನೈಋತ್ಯ ರೈಲ್ವೇ ಪ್ರಕಟನೆ ತಿಳಿಸಿದೆ.
ಪ್ರಯಾಣಿಕರ ತೀವ್ರ ಕೊರತೆಯಿಂದ ಈ ಕ್ರಮ ಕೈಗೊಂಡಿದ್ದು, ಹೊಸ ಅಧಿಸೂಚನೆ ಬೆಂಗಳೂರು- ಮಂಗಳೂರು ಮಾರ್ಗದಲ್ಲಿ ಅ. 7ರಿಂದ ಮತ್ತು ಮಂಗಳೂರು- ಬೆಂಗಳೂರು ಮಾರ್ಗದಲ್ಲಿ ಅ. 11ರಿಂದ ಜಾರಿಯಾಗಲಿದೆ. ವಾರದಲ್ಲಿ ಮೂರು ದಿನ ಮೈಸೂರು ಮಾರ್ಗದಲ್ಲಿ ಸಂಚರಿಸುತ್ತಿರುವ ಬೆಂಗಳೂರು- ಮಂಗಳೂರು ಸೆಂಟ್ರಲ್- ಬೆಂಗಳೂರು ಸ್ಪೆಷಲ್ ಎಕ್ಸ್ಪ್ರೆಸ್ (06517/18) ಹಾಗೂ ಬೆಂಗಳೂರು-ಮಂಗಳೂರು - ಕಾರವಾರ -ಬೆಂಗಳೂರು ರೈಲು ಸಂಚಾರವೂ ಯಥಾಸ್ಥಿತಿಯಲ್ಲಿರುತ್ತದೆ.
ಇದನ್ನೂ ಓದಿ :14.94 ಲಕ್ಷ ರೂ. ಮೌಲ್ಯದ ಸಿಂಥೆಟಿಕ್ ಡ್ರಗ್ ವಶ : ಮಣಿಪಾಲದ ವಿದ್ಯಾರ್ಥಿ ಬಂಧನ
ವೇಳಾಪಟ್ಟಿ ಬದಲು
ರೈಲು ಸಂ. 06517 ಬೆಂಗಳೂರು-ಮಂಗಳೂರು ರೈಲು ರವಿವಾರ, ಸೋಮವಾರ, ಮಂಗಳವಾರದ ಬದಲು ಅ. 7ರಿಂದ ಬುಧವಾರ, ಶುಕ್ರವಾರ, ರವಿವಾರ ಸಂಚರಿಸಲಿದೆ. ರೈಲು ಸಂ. 06518 ಮಂಗಳೂರು- ಬೆಂಗಳೂರು ರೈಲು ಗುರುವಾರ, ಶುಕ್ರವಾರ, ಶನಿವಾರದ ಬದಲು ಅ. 8ರಿಂದ ಗುರುವಾರ, ಶನಿವಾರ, ಸೋಮವಾರಗಳಂದು ಸಂಚರಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ