![ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!](https://www.udayavani.com/wp-content/uploads/2024/07/Dubai1-415x234.jpg)
Haveri: ರೈತರಿಂದ ಸರಕಾರದ ವಿರುದ್ಧ ತೀವ್ರ ಆಕ್ರೋಶ- ಬರ ಪರಿಹಾರ ಹಣ ಸಿಎಂಗೆ ವಾಪಸ್
Team Udayavani, Feb 1, 2024, 1:38 AM IST
![DROUGHT 2](https://www.udayavani.com/wp-content/uploads/2024/02/DROUGHT-2-620x423.jpg)
ಹಾವೇರಿ: ಬರ ಪರಿಹಾರ ವಾಗಿ ಸರಕಾರ ಎರಡು ಸಾವಿರ ರೂಪಾಯಿಗಳನ್ನಷ್ಟೇ ನೀಡಿದ್ದಕ್ಕೆ ಆಕ್ರೋಶಗೊಂಡ ಹಾವೇರಿ ಜಿಲ್ಲೆಯ 72 ರೈತರು, ಮುಖ್ಯಮಂತ್ರಿ ಸಿದ್ದರಾ ಮಯ್ಯ ಅವರು ಹೆಸರಿಗೆ ತಲಾ ರೂ. 2,100 ಮೊತ್ತದ ಚೆಕ್ಗಳನ್ನು ಕಳುಹಿಸಿದ್ದಾರೆ.
ನಗರದ ಜಿಲ್ಲಾಡಳಿತ ಭವನದ ಎದುರು ಇತ್ತೀಚೆಗೆ ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ಅಹೋರಾತ್ರಿ ಧರಣಿ ನಡೆಸಿದ್ದ ಈ ರೈತರು, ಜ.25ರಂದು ಈ ಚೆಕ್ ಬರೆದು ಬರ ಪರಿಹಾರ ಹಣ ಹಿಂದಿರುಗಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಳೆ ಕೈಕೊಟ್ಟಿದ್ದರಿಂದ ರೈತರು ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿದ್ದಾರೆ. ಎರಡೂ¾ರು ಬಾರಿ ಬಿತ್ತನೆ ಮಾಡಿ ಎಕ್ರೆಗೆ 20-25 ಸಾವಿರ ರೂ. ಖರ್ಚು ಮಾಡಿದ್ದೇವೆ. ರಾಜ್ಯ ಸರಕಾರ ನೀಡು ತ್ತಿರುವ 2 ಸಾವಿರ ರೂ. ಬರ ಪರಿಹಾರ ಯಾವುದಕ್ಕೂ ಸಾಲುವುದಿಲ್ಲ. ಬೆಳೆ ಕಳೆದುಕೊಂಡಿರುವ ರೈತರು ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿ ಆತ್ಮಹತ್ಯೆ ದಾರಿ ಹಿಡಿಯುತ್ತಿದ್ದಾರೆ. ಸರಕಾರ ಇನ್ನಾದರೂ ಎಚ್ಚೆತ್ತುಕೊಂಡು ಬೆಳೆ ಹಾನಿಗೆ ಎಕ್ರೆಗೆ 25 ಸಾವಿರ ರೂ. ಬರ ಪರಿಹಾರ ನೀಡಿ ರೈತರ ಸಮಸ್ಯೆಗೆ ಸ್ಪಂದಿಸಬೇಕು ಎಂದು ರೈತ ಸಂಘದ ಮುಖಂಡ ಮಲ್ಲಿಕಾರ್ಜುನ ಬಳ್ಳಾರಿ ಆಗ್ರಹಿಸಿದ್ದಾರೆ.
ರಾಜ್ಯ ಸರಕಾರ ಬರ ಪರಿಹಾರವಾಗಿ ರೈತರಿಗೆ ಎರಡು ಸಾವಿರ ರೂ. ನೀಡುತ್ತಿದ್ದು, ಇದು ರೈತರ ಮೂಗಿಗೆ ತುಪ್ಪ ಒರೆಸುವ ತಂತ್ರ. ಈ ಹಣ ಬೀಜ-ಗೊಬ್ಬರ ಖರೀದಿಗೂ ಸಾಲುತ್ತಿಲ್ಲ.
– ಮಲ್ಲಿಕಾರ್ಜುನ ಬಳ್ಳಾರಿ, ರೈತ ಮುಖಂಡ ಹಾವೇರಿ
ಟಾಪ್ ನ್ಯೂಸ್
![ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!](https://www.udayavani.com/wp-content/uploads/2024/07/Dubai1-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![gajanur3](https://www.udayavani.com/wp-content/uploads/2024/07/gajanur3-150x84.jpg)
ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ
![mudhola](https://www.udayavani.com/wp-content/uploads/2024/07/mudhola-1-150x87.jpg)
ಪ್ರವಾಹದ ನೀರಿನಲ್ಲಿ ಪಂಪ್ ಸೆಟ್ ತರಲು ಹೋದ ರೈತರು… ನೀರಿಗಿಳಿಯದಂತೆ ಮನವಿ ಮಾಡಿದ ಸಚಿವರು
![ರಬಕವಿ-ಬನಹಟ್ಟಿ: ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ಕೃಷ್ಣಾ ನದಿ](https://www.udayavani.com/wp-content/uploads/2024/07/KRISHNA-NADI-150x84.jpg)
ರಬಕವಿ-ಬನಹಟ್ಟಿ: ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ಕೃಷ್ಣಾ ನದಿ
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.