ಹೆಣ್ಣು-ಗಂಡೆಂಬ ಭೇದ ಬೇಡ : ಹೆಣ್ಣುಮಕ್ಕಳಿಗೆ ಉನ್ನತ ಶಿಕ್ಷಣ ನೀಡಿ – ಪ್ರೋತ್ಸಾಹಿಸಿ
Team Udayavani, Jan 17, 2021, 2:57 PM IST
ಹಾವೇರಿ: ಹೆಣ್ಣು-ಗಂಡು ಎಂಬ ಭೇದಬೇಡ. ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣ ನೀಡಿ ಸರ್ಕಾರಿ ಹಾಗೂ ಖಾಸಗಿ ವಲಯಗಳಲ್ಲಿ ಉನ್ನತ ಹುದ್ದೆಗಳಲ್ಲಿ ಕೆಲಸ ಮಾಡುವಂತೆ ಪ್ರೋತ್ಸಾಹಿಸಬೇಕು ಎಂದು ಶಾಸಕ ನೆಹರು ಓಲೇಕಾರ ಹೇಳಿದರು. ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಸಹಯೋಗದಲ್ಲಿ “ಮಗಳನ್ನು
ಉಳಿಸಿ ಮಗಳನ್ನು ಓದಿಸಿ’ ಯೋಜನೆ ಅಂಗವಾಗಿ ಶುಕ್ರವಾರ ಆಯೋಜಿಸಲಾದ ಹೆಣ್ಣು ಮಕ್ಕಳ ಹುಟ್ಟುಹಬ್ಬದ ಆಚರಣೆ
ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೈಲಾ ಕುರಹಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ, ಹೆಣ್ಣು ಮಕ್ಕಳ ಲಿಂಗಾನುಪಾತವನ್ನು ಹೆಚ್ಚಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಇಲಾಖೆಯಿಂದ ಬೀದಿ ನಾಟಕ, ಜಾಗೃತಿ ಜಾಥಾಗಳು, ಭಿತ್ತಿ ಪತ್ರಗಳ ಮೂಲಕ ಹೆಣ್ಣು ಮಗುವಿನ ರಕ್ಷಣೆ ಕುರಿತಾಗಿ ಅರಿವು ಮೂಡಿಸಲಾಗುತ್ತಿದೆ ಹೇಳಿದರು.
ಇದೇ ಸಂದರ್ಭದಲ್ಲಿ ಜನವರಿ ಮಾಹೆಯಲ್ಲಿ ಜನಿಸಿದ ಅಂಗನವಾಡಿ ಹೆಣ್ಣು ಮಕ್ಕಳೊಂದಿಗೆ ಕೇಕ್ ಕತ್ತರಿಸಿದರು. ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ ಅಡಿಯಲ್ಲಿ 5 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನದ ಚೆಕ್ ಮತ್ತು 5 ಫಲಾನುಭವಿಗಳಿಗೆ ಭಾಗ್ಯ ಲಕ್ಷ್ಮಿ ಬಾಂಡ್ಗಳನ್ನು ಸಾಂಕೇತಿಕವಾಗಿ ವಿತರಿಸಲಾಯಿತು.
ಇದನ್ನೂ ಓದಿ:ಬರ್ತ್ಡೇ ಬದಲು ಪುಣ್ಯದ ಕೆಲಸದಲ್ಲಿ ಕೈ ಜೋಡಿಸಿ: ದುನಿಯಾ ವಿಜಯ್ ಮನವಿ
ತಾಪಂ ಸದಸ್ಯ ವಿರೂಪಾಕ್ಷಪ್ಪ ಹುಲ್ಲೂರು, ನಿಗಮ ಮಂಡಳಿ ಮಾಜಿ ಅಧ್ಯಕ್ಷ ಭೋಜರಾಜ ಕೆರೂಡಿ, ಕೆ.ಸಿ. ಕೋರಿ, ತಾಪಂ ಇಒ ಬಸರಾಜ ಡಿ.ಸಿ., ಬಿಇಒ ಎಂ.ಎಚ್. ಪಾಟೀಲ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಲ್ಲಿಕಾರ್ಜುನ ಕೆಂಪಳ್ಳೆರ,
ಮೇಲ್ವಿಚಾರಕಿಯರು ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿಇಟಿಗೆ ಪಠ್ಯಕಡಿತ, ನೀಟ್ಗೇಕಿಲ್ಲ? ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳಿಗೆ ಆತಂಕ
ರಾಜ್ಯ ನಾಯಕರಿಗೆ ತಮಿಳುನಾಡು ಹೊಣೆ : AIADMK ಮೈತ್ರಿ ಕೂಟ ಅಧಿಕಾರಕ್ಕೆ ತರಲು ಬಿಜೆಪಿ ಶ್ರಮ
ಕಿರುಕುಳ ನೀಡುತ್ತಿದ್ದ ಪತಿಯ ಹತ್ಯೆ ಸುಪಾರಿ ಕೊಟ್ಟ ಪತ್ನಿ, ಪುತ್ರ ಸೇರಿ ಐವರ ಬಂಧನ
ಮಂತ್ರಿಗಳು ಮಠಗಳನ್ನು ಖರೀದಿಸಲು ಹೊರಟಿದ್ದಾರೆ: ಯತ್ನಾಳ್
ಶಿಡ್ಲಘಟ್ಟ: ದುಗ್ಗಲಮ್ಮ ದೇಗುಲಕ್ಕೆ ಕ್ಯಾಂಟರ್ ಡಿಕ್ಕಿ ; ಕ್ಲೀನರ್ ಸಾವು, ದೇಗುಲಕ್ಕೆ ಹಾನಿ
MUST WATCH
ನಾನು ಕೆಲವು ಜನರನ್ನು ನಂಬಿ ಮೋಸ ಹೋದೆ – ಡಾ| ಬಿ.ಆರ್.ಶೆಟ್ಟಿ
30 ನಿಮಿಷದಲ್ಲಿಯೇ ಕೊರೊನಾ ಲಸಿಕೆ ಸಂಪೂರ್ಣ ಪ್ರಕ್ರಿಯೆ ಪೂರ್ಣಗೊಳಿಸಿದರು
ದರೋಡೆಕೋರರನ್ನು ಅಟ್ಟಾಡಿಸಿದ ಜನರು.. ಯಾವ ಸಿನಿಮಾಗೂ ಕಡಿಮೆಯಿಲ್ಲ ಚೇಸಿಂಗ್ ದೃಶ್ಯ
ಕುಮಾರಸ್ವಾಮಿಯನ್ನು ನಂಬಬೇಡಿ, ಅವರೊಂದಿಗೆ ಹೊಂದಾಣಿಕೆ ಬೇಡ: ಬಿಜೆಪಿ ವರಿಷ್ಠರಿಗೆ ಯೋಗೀಶ್ವರ್
CoWin App ಸಮಸ್ಯೆ ! ಎರಡು ದಿನ ಲಸಿಕೆ ಹಂಚಿಕೆ ಇಲ್ಲ ! | Udayavani
ಹೊಸ ಸೇರ್ಪಡೆ
ವಿದ್ಯಾರ್ಥಿಗಳ ಮನೋಕಾಮನೆಗಳು ಪೂರ್ಣ, ನಿರಂತರ ಧನಾಗಮನ: ಹೇಗಿದೆ ಇಂದಿನ ಗ್ರಹಬಲ ?
ಸಿಇಟಿಗೆ ಪಠ್ಯಕಡಿತ, ನೀಟ್ಗೇಕಿಲ್ಲ? ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳಿಗೆ ಆತಂಕ
ದಾವೂದ್ ಆಸ್ತಿ ಜಪ್ತಿಗೆ ಆದೇಶ : ಎಫ್ಎಟಿಎಫ್ ಕಪ್ಪುಪಟ್ಟಿಗೆ ತಪ್ಪಿಸಿಕೊಳ್ಳಲು ಪಾಕ್ ಉಪಾಯ
ಸಂಗೀತ ಇಲ್ಲದ ಸಿನೆಮಾ ಊಹಿಸಲಸಾಧ್ಯ
ಫ್ರಾನ್ಸ್ ಮಾಜಿ ಅಧ್ಯಕ್ಷ ನಿಕೋಲಸ್ಗೆ 1 ವರ್ಷ ಜೈಲು ಶಿಕ್ಷೆ