ವೈದ್ಯರ ವಿರುದ್ಧ ಕ್ರಮಕ್ಕೆ ಹೈಕೋರ್ಟ್ ನಿರ್ದೇಶನ
Team Udayavani, Apr 30, 2022, 6:45 AM IST
ಬೆಂಗಳೂರು: ತಾಯಿಯ ಆರೋಗ್ಯದ ಕುರಿತು ವೈದ್ಯಕೀಯ ಪ್ರಮಾಣಪತ್ರ ನೀಡಿ ಕೈದಿಯೊಬ್ಬರನ್ನು ಪರೋಲ್ ಮೇಲೆ ಬಿಡುಗಡೆಗೊಳಿಸಲು ಶಿಫಾರಸು ಮಾಡಿದ್ದ ವೈದ್ಯರ ವಿರುದ್ದ ಕ್ರಮ ಕೈಗೊಳ್ಳುವಂತೆ ವೈದ್ಯಕೀಯ ಮಂಡಳಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಈ ಕುರಿತ ಅರ್ಜಿ ವಿಚಾರಣೆ ನಡೆಸಿದ ನ್ಯಾ| ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ.
ಕೈದಿಯ ತಾಯಿ ಬೆನ್ನು ಮೂಳೆ ಸಂಬಂಧಿಸಿದ ಕಾಯಿಲೆಯಿಂದ ನರಳುತ್ತಿದ್ದು ಅವರನ್ನು ಖುದ್ದು ಆರೈಕೆ ಮಾಡಲು 2ರಿಂದ 3 ವಾರಗಳ ಕಾಲ ಪರೋಲ್ ಮೇಲೆ ಬಿಡುಗಡೆಗೆ ಅವಕಾಶ ನೀಡಬೇಕು’ ಎಂದು ಶಿಫಾರಸು ಮಾಡಿ ಪ್ರಮಾಣ ಪತ್ರ ನೀಡಿದ್ದ ವೈದ್ಯರ ವಿರುದ್ಧ ಸೂಕ್ತ ವಿಚಾರಣೆ ನಡೆಸುವಂತೆ ನ್ಯಾಯಪೀಠ ಸೂಚಿಸಿದೆ.
ಬೆನ್ನುಮೂಳೆಯ ಕಾಯಿಲೆಯಿಂದ ಹಾಸಿಗೆ ಹಿಡಿದಿರುವ ನನ್ನ ತಾಯಿಯನ್ನು ಕೆಲ ಕಾಲ ಖುದ್ದು ಆರೈಕೆ ಮಾಡಲು ಪೆರೋಲ್ ಮೇಲೆ ಬಿಡುಗಡೆ ಮಾಡುವಂತೆ ಜೈಲು ಅಧಿಕಾರಿಗಳಿಗೆ ನಿರ್ದೇಶಿಸಬೇಕು’ ಎಂದು ಕೋರಿದ್ದ ಕೈದಿಯ ಮನವಿಯನ್ನು ನ್ಯಾಯಪೀಠ ತಿರಸ್ಕರಿಸಿದೆ.
ಮಡಿವಾಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕೊಲೆ ಪ್ರಕರಣದಲ್ಲಿ ವಾಸುದೇವ ಅಲಿಯಾಸ್ ವಾಸು (37) ಪ್ರಮುಖ ಆರೋಪಿಯಾಗಿದ್ದು, ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾನೆ.
ಅರ್ಜಿ ವಿಚಾರಣೆ ವೇಳೆ ಸರ್ಕಾರದ ಪರ ವಕೀಲ ವಿನೋದ್ ಕುಮಾರ್, ಖಾಸಗಿ ಆಸ್ಪತ್ರೆಯ ನಿರ್ವಾಹಕ ನಿರ್ದೇಶಕರು ನೀಡಿದ್ದ ಶಿಫಾರಸು ಪತ್ರವನ್ನು ಆಕ್ಷೇಪಿಸಿ, ಆರೋಪಿಗೆ ಪೆರೋಲ್ ನೀಡದಂತೆ ಮನವಿ ಮಾಡಿದರು.
ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ಅರ್ಜಿ ತಿರಸ್ಕರಿಸಿ, ಶಿಫಾರಸು ಪತ್ರ ನೀಡಿದ ವೈದ್ಯರ ವಿರುದ್ಧ ವಿಚಾರಣೆ ನಡೆಸುವಂತೆ ವೈದ್ಯಕೀಯ ಮಂಡಳಿಗೆ ಆದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ