ತಡೆಯಾಜ್ಞೆ ನೀಡಲು ಹೈಕೋರ್ಟ್‌ ನಿರಾಕರಣೆ


Team Udayavani, Nov 7, 2019, 3:08 AM IST

tadeyajne

ಬೆಂಗಳೂರು: ಟಿಪ್ಪು ಜಯಂತಿ ರದ್ದು ಪಡಿಸಿರುವ ರಾಜ್ಯ ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ ನೀಡಲು ನಿರಾಕರಿಸಿರುವ ಹೈಕೋರ್ಟ್‌, ರದ್ದು ಆದೇಶ ಸಂಬಂಧ ಮರು ಪರಿಶೀಲನೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಟಿಪ್ಪು ಜಯಂತಿ ರದ್ದುಪಡಿಸಿ 2019ರ ಜುಲೈ 30ರಂದು ರಾಜ್ಯ ಸರಕಾರ ಹೊರಡಿಸಿರುವ ಆದೇಶ ರದ್ದು ಪಡಿಸುವಂತೆ ಕೋರಿ ಉತ್ತರ ಪ್ರದೇಶದ ಲಖನೌ ನಿವಾಸಿ ಬಿಲಾಲ್‌ ಆಲಿ ಷಾ, ಟಿಪ್ಪು ಸುಲ್ತಾನ್‌ ಯುನೈಟೆಡ್‌ ಫ್ರಂಟ್‌ ಮತ್ತು ಟಿಪ್ಪು ರಾಷ್ಟ್ರೀಯ ಸೇವಾ ಸಂಘ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್‌.ಓಕ್‌ ಹಾಗೂ ನ್ಯಾಯಮೂರ್ತಿ ಎಸ್‌.ಆರ್‌.ಕೃಷ್ಣಕುಮಾರ್‌ ಅವರಿದ್ದ ವಿಭಾಗೀಯ ಪೀಠ ನಡೆಸಿತು.

ವಿಚಾರಣೆ ವೇಳೆ, ಸರ್ಕಾರದ ವಾದ ಹಾಗೂ ಅರ್ಜಿದಾರ ಪರ ವಕೀಲರ ಪ್ರತಿವಾದ ಆಲಿಸಿದ ನ್ಯಾಯಪೀಠ, ಟಿಪ್ಪು ಜಯಂತಿ ರದ್ದು ಆದೇಶಕ್ಕೆ ತಡೆಯಾಜ್ಞೆ ನೀಡಲು ಸ್ಪಷ್ಟವಾಗಿ ನಿರಾಕರಿಸಿತು. ಜತೆಗೆ, ರಾಜ್ಯ ಸರಕಾರ ಜಯಂತಿ ರದ್ದು ಮಾಡುವಾಗ ಹಿಂದಿನ ಸರಕಾರ ಹೊರಡಿಸಿದ್ದ ಆದೇಶದ ಎಲ್ಲ ಅಂಶಗಳನ್ನು ಪರಿಗಣಿಸಿಲ್ಲ ಎಂಬ ಅಂಶದ ಹಿನ್ನೆಲೆಯಲ್ಲಿ ಈ ಸಂಬಂಧ ರದ್ದು ಆದೇಶದ ನಿರ್ಧಾರವನ್ನು ಎರಡು ತಿಂಗಳಲ್ಲಿ ಮರು ಪರಿಶೀಲನೆ ನಡೆಸಬೇಕು.

ಅಷ್ಟೇ ಅಲ್ಲದೆ, ಟಿಪ್ಪು ಜಯಂತಿ ಮಾತ್ರವಲ್ಲದೆ ರಾಜ್ಯದಲ್ಲಿ ಸರಕಾರದ ವತಿಯಿಂದ ಅಧಿಕೃತವಾಗಿ ಆಚರಿಸುತ್ತಿರುವ ಇತರ ಎಲ್ಲ ಜಯಂತಿಗಳ ಬಗ್ಗೆ ಮತ್ತು ಆ ಕುರಿತು ಹೊರಡಿಸಿರುವ ಆದೇಶಗಳ ಬಗ್ಗೆ ಸಮಗ್ರ ವಿವರಗಳನ್ನು ಸಲ್ಲಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತು. ವಿಚಾರಣೆ ವೇಳೆ ನ್ಯಾಯಪೀಠ, 2016ರಲ್ಲಿ ಸಲ್ಲಿಕೆಯಾಗಿದ್ದ ಪಿಐಎಲ್‌ ಸಂಬಂಧ ಟಿಪ್ಪು ಜಯಂತಿ ಆಚರಣೆಯನ್ನು ಏಕೆ ಆಚರಿಸಲಾಗುತ್ತಿದೆ ಎಂಬ ಬಗ್ಗೆ ವಿಸ್ತ್ರತ ಅಂಶಗಳ ಆದೇಶ ಹೊರಡಿಸಿತ್ತು.

ಆದರೆ, ಇದೀಗ ಸರಕಾರ ಒಂದೇ ದಿನದಲ್ಲಿ ಕೊಡಗಿನ ಒಬ್ಬರೇ ಒಬ್ಬ ಶಾಸಕ ನೀಡಿದ ಮನವಿ ಆಧರಿಸಿ ತೀರ್ಮಾನ ಕೈಗೊಳ್ಳಲಾಗಿದೆ. ಅದಕ್ಕೂ ಮುನ್ನ ಯಾವ ಅಭಿಪ್ರಾಯ ಸಂಗ್ರಹ ಮಾಡಿಲ್ಲ. ಹಿಂದಿನ ಸರಕಾರ ನೀಡಿದ್ದ ಆದೇಶದ ಅಂಶಗಳನ್ನೂ ಸಹ ಅವಲೋಕಿಸಿಲ್ಲ ಎನಿಸುತ್ತದೆ ಎಂದು ಅಭಿಪ್ರಾಯಪಟ್ಟಿತು. ಅಷ್ಟೇ ಅಲ್ಲದೆ, ಜಾತ್ಯಾತೀತತೆ ಹಾಗೂ ಸಂವಿಧಾನದ ಕಲಂ 51ಎ ಅನ್ವಯ ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯಬೇಕಿದೆ.

ಸುಪ್ರೀಂಕೋರ್ಟ್‌ ಇಂತಹ ನಿರ್ಧಾರಗಳನ್ನು ಕೈಗೊಳ್ಳು ವಾಗ ಏಕಪಕ್ಷೀಯವಾಗಿ ಕೈಗೊಳ್ಳುವಂತಿಲ್ಲ ಎಂದು ಹೇಳಿದೆ. ಹಾಗಾಗಿ, ಸರಕಾರ ಮತ್ತೂಮ್ಮೆ ತನ್ನ ನಿರ್ಧಾರ ವನ್ನು ಸಮರ್ಪಕ ರೀತಿಯಲ್ಲಿ ಮರು ಪರಿಶೀಲನೆ ಮಾಡಬೇಕು ಎಂದು ನ್ಯಾಯಪೀಠ ಸೂಚನೆ ನೀಡಿತು. ಸೂಕ್ತ ಭದ್ರತೆ: ಸರಕಾರ ವೈಯಕ್ತಿಕವಾಗಿ ಟಿಪ್ಪು ಜಯಂತಿ ಆಚರಣೆಗೆ ಯಾವುದೇ ನಿರ್ಬಂಧ ವಿಧಿಸಿಲ್ಲ. ಹೀಗಾಗಿ, ಸಾರ್ವಜನಿಕರು ಮತ್ತು ಸಂಘ ಸಂಸ್ಥೆಗಳು ನ.10ರಂದು ಟಿಪ್ಪು ಜಯಂತಿ ಆಚರಿಸಬಹುದು. ಅದಕ್ಕೆ ಸರಕಾರ ಸೂಕ್ತ ಭದ್ರತೆಯನ್ನು ಒದಗಿಸಲಿದೆ ಎಂದು ನ್ಯಾಯಪೀಠ ಆದೇಶ ನೀಡಿದೆ.

ಸರ್ಕಾರದ ವಾದ ಏನು?: ವಿಚಾರಣೆ ವೇಳೆ ಸರ್ಕಾರದ ಪರವಾಗಿ ವಾದಿಸಿದ ಅಡ್ವೊಕೇಟ್‌ ಜನರಲ್‌ ಪ್ರಭುಲಿಂಗ ನಾವದಗಿ, ಸರಕಾರದಿಂದ ಟಿಪ್ಪು ಜಯಂತಿ ಆಚರಿಸುವುದಿಲ್ಲ. ಖಾಸಗಿ ಸಂಸ್ಥೆಗಳು ಆಚರಿಸುವುದಕ್ಕೆ ಸರಕಾರದ ಅಭ್ಯಂತರವಿಲ್ಲ. ಇದು ಸರಕಾರದ ಆಡಳಿತಾತ್ಮಕ ನಿರ್ಧಾರ. ಇದರಲ್ಲಿ ನ್ಯಾಯಾಲಯ ಹಸ್ತಕ್ಷೇಪ ಮಾಡಬಾರದು. ಸರಕಾರ ಗುಪ್ತಚರ ದಳ ಮತ್ತಿತರ ವಿಭಾಗಗಳಿಂದ ಸಂಗ್ರಹಿಸಿದ ಮಾಹಿತಿ ಆಧಾರದ ಮೇಲೆ ಜಯಂತಿ ಆಚರಿಸಿದರೆ ಶಾಂತಿ ಕದಡುತ್ತದೆ ಎಂಬ ಕಾರಣಕ್ಕೆ ಜಯಂತಿಯನ್ನು ರದ್ದುಗೊಳಿಸುವ ತೀರ್ಮಾನ ಮಾಡಿದೆ ಎಂದು ಸರಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡರು.

ಅಲ್ಲದೆ, ಮೊದಲ ಬಾರಿಗೆ ಟಿಪ್ಪು ಜಯಂತಿ ಆಚರಿಸಿದಾಗ ಕೊಡಗಿನಲ್ಲಿ ಹಿಂಸಾಚಾರ ನಡೆದಿತ್ತು. ಓರ್ವ ವ್ಯಕ್ತಿ ಕೊಲೆಗೀಡಾದ. ಹಾಗಾಗಿ, ಕೋಮು ಸಾಮರಸ್ಯ ಕಾಪಾಡಲು ಜಯಂತಿ ರದ್ದುಪಡಿಸಲಾಗಿದೆ. ಇಲ್ಲಿ ಯಾವುದೇ ವ್ಯಕ್ತಿಯ ಮೂಲಭೂತ ಹಕ್ಕುಗಳಿಗೆ ಧಕ್ಕೆ ಆಗಿಲ್ಲ. ಹಕ್ಕುಗಳ ಉಲ್ಲಂಘನೆಯೂ ಆಗಿಲ್ಲ. ಇದರಲ್ಲಿ ಸಾರ್ವಜನಿಕ ಹಿತಾಸಕ್ತಿ ಏನೂ ಇಲ್ಲ. ಹಾಗಾಗಿ, ಅರ್ಜಿಯನ್ನು ಮಾನ್ಯ ಮಾಡಬಾರದು ಎಂದು ಕೋರಿದರು.

ಅರ್ಜಿದಾರರ ವಾದ ಏನು?: ಅರ್ಜಿದಾರರ ಪರ ಹಿರಿಯ ವಕೀಲ ಪ್ರೊ.ರವಿವರ್ಮ ಕುಮಾರ್‌ ವಾದಿಸಿ, ಜು.26ರಂದು ಬಿ.ಎಸ್‌ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ, 27ರಂದು ಸದನದಲ್ಲಿ ವಿಶ್ವಾಸಮತ ಸಾಬೀತುಪಡಿಸಿದರು. 29ರಂದು ಕೊಡಗಿನ ಓರ್ವ ಜನಪ್ರತಿ ನಿಧಿ ನೀಡಿದ ಮನವಿ ಆಧರಿಸಿ ಯಾವುದೇ ಅಭಿಪ್ರಾಯಗಳನ್ನು ಪಡೆಯದೆ, ಸಂಪುಟದಲ್ಲಿ ಚರ್ಚೆ ನಡೆಸದೆ, ಸಿಎಂ ಒಬ್ಬರೇ ಒಂದೇ ದಿನದಲ್ಲಿ ಟಿಪ್ಪು ಜಯಂತಿ ರದ್ದುಗೊಳಿಸಲು ತೀರ್ಮಾನಿಸಿದರು.

ಆ ತೀರ್ಮಾನ ಏಕಪಕ್ಷೀಯವಾದುದು ಎಂದು ವಿವರಿಸಿದರು. ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯವನ್ನು ಗುರಿಯಾಗಿ ಟ್ಟುಕೊಂಡು ಟಿಪ್ಪು ಜಯಂತಿ ರದ್ದುಗೊಳಿ ಸಲಾಗಿದೆ. ಇದು ಕಾನೂನು ಬಾಹಿರ ಮತ್ತು ತಾರತಮ್ಯದಿಂದ ಕೂಡಿದ ಕ್ರಮ. ಸರಕಾರ ತನ್ನ ನೀತಿ ನಿರ್ಧಾರಗಳನ್ನು ಬದಲಿಸುವಾಗ ಕಾರಣಗಳನ್ನು ನೀಡ ಬೇಕು. ಆದರೆ, ಸರಕಾರ ಯಾವುದೇ ಕಾರಣ ನೀಡಿಲ್ಲ ಎಂದು ಹೇಳಿದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.