ಕಾಂಗ್ರೆಸ್‌ ಸಹಕಾರ ಸಿಗದ ಬಗ್ಗೆ ಎ‍ಚ್ಡಿಡಿ ಬೇಸರ


Team Udayavani, May 28, 2019, 6:00 AM IST

HD-Devegowda–8000-05

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರು ಸೋಮವಾರ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದರು.

ಪದ್ಮನಾಭನಗರ ನಿವಾಸದಲ್ಲಿ ಭೇಟಿ ಮಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ಸೋಲು, ಕಾಂಗ್ರೆಸ್‌ ಶಾಸಕರಾದ ರಮೇಶ್‌ ಜಾರಕಿಹೊಳಿ ಹಾಗೂ ಡಾ.ಕೆ.ಸುಧಾಕರ್‌ ಅವರು ಬಿಜೆಪಿ ನಾಯಕ ಎಸ್‌.ಎಂ.ಕೃಷ್ಣ ಅವರನ್ನು ಭೇಟಿ ಮಾಡಿರುವ ಹಿಂದಿನ ಕಾರ್ಯತಂತ್ರ, ಬಿಜೆಪಿ ಆಪರೇಷನ್‌ ಕಮಲ ಪ್ರಯತ್ನ ಮತ್ತಿತರ ವಿಚಾರಗಳ ಬಗ್ಗೆ ಚರ್ಚೆ ನಡೆಯಿತು.

ಈ ಸಂದರ್ಭದಲ್ಲಿ ಎರಡೂ ಪಕ್ಷಗಳ ನಾಯಕರ ನಡುವೆ ಹೊಂದಾಣಿಕೆ ಕೊರತೆಯಿಂದಲೇ ಸೋಲು ಉಂಟಾಯಿತು ಎಂದು ದೇವೇಗೌಡರು ಅಸಮಾಧಾನ ವ್ಯಕ್ತಪಡಿಸಿದರು ಎಂದು ಹೇಳಲಾಗಿದೆ. ಒಂದು ವರ್ಷದಿಂದ ಬರೀ ಗೊಂದಲವೇ ಆಗಿದೆ. ಬಿಜೆಪಿ ಜತೆ ಕೆಲವು ಶಾಸಕರು ನಿತ್ಯ ಸಂಪರ್ಕದಲ್ಲಿದ್ದಾರೆ. ಇದೇ ರೀತಿ ಮುಂದುವರಿದರೆ ಸರ್ಕಾರ ನಡೆಸುವುದು ಹೇಗೆ? ಚುನಾವಣೆಯಲ್ಲಂತೂ ಕಾಂಗ್ರೆಸ್‌ನಿಂದ ಸಹಕಾರ ಸಿಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು ಎನ್ನಲಾಗಿದೆ.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಎರಡೂ ಪಕ್ಷಗಳ ಶಾಸಕರ ಜತೆ ಸಮಾಲೋಚನೆ ನಡೆಸಿ ನಿರಂತರವಾಗಿ ಸಂಪರ್ಕ ಹೊಂದಿದರೆ ಯಾವುದೇ ಸಮಸ್ಯೆಯಾಗದು. ಸಮ್ಮಿಶ್ರ ಸರ್ಕಾರ ಸುಗಮವಾಗಿ ನಡೆಯಲು ಎರಡೂ ಪಕ್ಷಗಳು ಸಮನ್ವಯತೆಯಿಂದ ಹೋಗಬೇಕಾಗಿದೆ. ಜೆಡಿಎಸ್‌ ಶಾಸಕರು ಹಾಗೂ ನಾಯಕರಿಗೆ ನೀವು ಹೇಳಿ, ಕಾಂಗ್ರೆಸ್‌ ಶಾಸಕರು ಹಾಗೂ ನಾಯಕರಿಗೆ ನಮ್ಮ ಕಡೆಯಿಂದ ಹೇಳುತ್ತೇವೆ ಎಂದು ಹೇಳಿದರು ಎಂದು ತಿಳಿದುಬಂದಿದೆ.

ದೇವೇಗೌಡರ ಭೇಟಿಯ ನಂತರ ಮಾತನಾಡಿದ ದಿನೇಶ್‌ , ಲೋಕಸಭೆ ಚುನಾವಣೆ ಫ‌ಲಿತಾಂಶದ ಬಗ್ಗೆಯೂ ಚರ್ಚಿಸಿದ್ದೇವೆ. ಸಮ್ಮಿಶ್ರ ಸರ್ಕಾರ ಮತ್ತಷ್ಟು ಉತ್ತಮವಾಗಿ ಕೆಲಸ ಮಾಡುವ ಬಗ್ಗೆಯೂ ಮಾತುಕತೆ ನಡೆಸಿದ್ದೇವೆ.

ಸಂಪುಟ ವಿಸ್ತರಣೆ ಕುರಿತು ಅಧಿಕೃತ ನಿರ್ಧಾರವಾದಾಗ ನಿಮಗೆ ಮಾಹಿತಿ ನೀಡಲಾಗುವುದು ಎಂದು ಪ್ರಶ್ನೆಯೊಂದಕಗೆ ಉತ್ತರಿಸಿದರು. ಆಪರೇಷನ್‌ ಕಮಲ ಡೆಡ್‌ಲೈನ್‌ ಬಗ್ಗೆ ಪ್ರತಿಕ್ರಿಯೆ ನೀಡಲ್ಲ ಎಂದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.